ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 8 ಡಿವೈಎಸ್ಪಿ, 28 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಆದೇಶ ಮಾಡಿದ್ದು, ಡಿವೈಎಸ್ಪಿ ಕವಿತಾ ಎಂ.ಸಿ ಅವರನ್ನು ಬೆಂಗಳೂರಿನ ಸಂಚಾರ ಉತ್ತರ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಪುನೀತ್ ಕುಮಾರ್.ಆರ್ ಅವರನ್ನು ಸಿಐಡಿಯಿಂದ ಬೆಂಗಳೂರಿನ ಈಶಾನ್ಯ ವಿಭಾಗದ ಸಿಇಎನ್ ಗೆ ವರ್ಗಾವಣೆಗೊಳಿಸಿದ್ದರೇ, ವೆಂಕಟೇಶ್.ಆರ್ ಅವರನ್ನು ಎಸ್ ಟಿ ಎಫ್ ಬೆಂಗಳೂರು ಇಲ್ಲಿಗೆ ಟ್ರಾನ್ಸ್ ಫರ್ ಮಾಡಲಾಗಿದೆ.
ಇನ್ನೂ ಪೊಲೀಸ್ ಇನ್ಸ್ ಪೆಕ್ಟರ್ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿರುವಂತ ರಾಮಚಂದ್ರಪ್ಪ.ಎಸ್ ಚೌಧರಿ ಅವರನ್ನು ಬೆಂಗಳೂರಿನ ತಲಘಟ್ಟಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಮೋದ್ ಕುಮಾರ್.ಪಿ ಅವರನ್ನು ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆಗೆ, ಗವಿರಾಜು ಆರ್.ಪಿ ಅವರನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಹೀಗಿದೆ 8 ಡಿವೈಎಸ್ಪಿಗಳ ವರ್ಗಾವಣೆ ಪಟ್ಟಿ
ಇಲ್ಲಿದೆ 28 ಪಿಐ ವರ್ಗಾವಣೆಯ ಪಟ್ಟಿ
ಕೋವಿಡ್-19 ಉಲ್ಬಣ: ಪ್ರಧಾನಿ ಮೋದಿ ಭೇಟಿ ಮಾಡುವ ಮೊದಲು ಸಚಿವರಿಗೆ RT-PCR ಪರೀಕ್ಷೆ ಕಡ್ಡಾಯ: