ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 27 ಪಿಐ, 7 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸ್ಥಳ ನಿರೀಕ್ಷೆಯಲ್ಲಿದ್ದಂತ ಡಿವೈಎಸ್ಪಿ ರಾಮಕೃಷ್ಣ ಕೆಜಿ ಅವರನ್ನು ಬಿಡಿಎಗೆ ವರ್ಗಾವಣೆ ಮಾಡಿದೆ. ಡಾ.ವೀರಯ್ಯ ಹಿರೇಮಠ ಅವರನ್ನು ಬೆಳಗಾವಿಯ ಬೈಲಹೊಂಗಲ ಉಪ ವಿಭಾಗಕ್ಕೆ, ಡಾ.ಸಂತೋಷ್ ಕೆ.ಎಂ ಅವರನ್ನು ಪೊಲೀಸ್ ಪ್ರಧಾನ ಕಚೇರಿಯ ಕಾನೂನು ಶಾಖೆಗೆ, ಚಂದ್ರಶೇಖರ್.ಪಿ ಅವರನ್ನು ಕೊಡಗಿನ ಸೋಮವಾರಪೇಟೆ ಉಪ ವಿಭಾಗಕ್ಕೆ, ಪ್ರಕಾಶ್ ಕೆ.ಸಿ ಅವರನ್ನು ಮಂಗಳೂರು ದಕ್ಷಿಣ ಉಪ ವಿಭಾಗಕ್ಕೆ, ವೆಂಕಟೇಶ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ಹಾಗೂ ಮಹಾನಂದ ಹೆಚ್.ಕೆ ಅವರನ್ನು ಬೆಂಗಳೂರು ನಗರದ ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.
ಇನ್ನೂ ಪೊಲೀಸ್ ಇನ್ಸ್ ಪೆಕ್ಟರ್ ಆಗಿರುವ ರಕ್ಷಿತ್ ಎ.ಕೆ ಅವರನ್ನು ಬೆಂಗಳೂರು ನಗರ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಹಂಸವೇಣಿ ಎ ವಿ ಅವರನ್ನು ಬೆಂಗಳೂರಿನ ಉತ್ತರ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ, ವಸೀಮುಲ್ಲಾ.ಎಸ್ ಅವರನ್ನು ಬೆಂಗಳೂರಿನ ಸಿಇಎನ್ ಪೊಲೀಸ್ ಠಾಣೆಗೆ, ಗೋವಿಂದ ಬಿಎಂ ಅವರನ್ನು ಬೆಂಗಳೂರಿನ ಅನುಗೊಂಡನಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದೆ.
BIG NEWS: ರಾಜ್ಯ ಸರ್ಕಾರದಿಂದ ‘PDO ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ | PDO Transfer
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!