Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಾಟ್ಸಪ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು

30/12/2025 8:50 PM

ಜ.1ರ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಮಂಡ್ಯ ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ

30/12/2025 8:21 PM

BREAKING : ಪ್ರಿಯಾಂಕಾ ಗಾಂಧಿ ಪುತ್ರ ‘ರೈಹಾನ್ ವಾದ್ರಾ’ ಗೆಳತಿ ‘ಅವಿವಾ ಬೇಗ್’ ಜೊತೆ ನಿಶ್ಚಿತಾರ್ಥ : ಮೂಲಗಳು

30/12/2025 8:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜ.1ರ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಮಂಡ್ಯ ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ
KARNATAKA

ಜ.1ರ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಮಂಡ್ಯ ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ

By kannadanewsnow0930/12/2025 8:21 PM

ಮಂಡ್ಯ : ಶತಮಾನಗಳ ಸಿಟ್ಟನ್ನು ಸಿಡಿಮದ್ದಾಗಿಸಿಕೊಂಡು ಸಿದ್ದ ನಾಕಾ ನೇತೃತ್ವದಲ್ಲಿ ಯುದ್ಧ ಗೆದ್ದ ಭೀಮ ಕೋರೆಗಾಂವ್ ಯುದ್ಧವೀರರನ್ನು ನೆನೆಯಬೇಕಿದೆ. ಈ ಹಿನ್ನಲೆಯಲ್ಲಿ ಜ.1ರಂದು ಮದ್ದೂರು ತಾಲೂಕಿನ ಎಲ್ಲಾ ಶೋಷಿತ ಸಮುದಾಯದವರು 208 ನೇ ಭೀಮ ಕೋರೆಗಾಂವ್ ಕದನ ವಿಜಯೋತ್ಸವ ಆಚರಣೆಯಲ್ಲಿ ಭಾಗವಹಿಸಬೇಕೆಂದು ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಮಂಗಳವಾರ ಹೇಳಿದರು.

ಜ.1 ಗುರುವಾರ ಬೆಳಿಗ್ಗೆ 9 ಗಂಟೆಗೆ ಮದ್ದೂರು ನಗರದ ನಗರಸಭೆ ಮುಂಭಾಗದ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗುವುದು ಎಂದರು.

ಭಾರತದಲ್ಲಿ ನಡೆದಿರುವ ಸಾವಿರಾರು ಯುದ್ಧಗಳ ಪೈಕಿ ಭೀಮಾ ಕೋರೆಗಾಂವ್ ಯುದ್ಧದ ವಿಜಯವು ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ್ದಲ್ಲದೆ ಆ ಯುದ್ಧವು ಮುಂದಿನ ತಲೆಮಾರಿಗಳಿಗೆ ಸ್ವಾಭಿಮಾನದ ಪ್ರತೀಕವಾಗಿ ಶಾಶ್ವತವಾಗಿ ಉಳಿದು ಬಿಟ್ಟಿದೆ. ಕೇವಲ 500ಮಂದಿ ಮಹಾರ್ ಸೈನಿಕರು 28 ಸಾವಿರ ಜಾತಿವಾದಿ ಪೇಶ್ವೆ ಸೈನಿಕರನ್ನು ಸೆದೆಬಡಿದ ಭಾರತದ ಸ್ವಾಭಿಮಾನದ ಇತಿಹಾಸವನ್ನು ಸಾರಿ ಸಾರಿ ಹೇಳುವಂತಿದೆ. ಹೀಗಾಗಿ 1 ಜನವರಿ 1818 ರಂದು ನಡೆದ ಭೀಮ ಕೋರೆಗಾಂವ್‌ ಯುದ್ಧವೀರರನ್ನು ನೆನೆಯದೆ ಹೋದರೆ ಚರಿತ್ರೆ ಕ್ಷಮಿಸದು. ಜಾತಿವಾದ, ಅಸ್ಪೃಶ್ಯತೆ ಹಾಗೂ ಸಕಲ ತಾರತಮ್ಯಗಳ ವಿರುದ್ಧ ನಡೆದ ಯುದ್ದವಾಗಿದೆ.

ಅಲ್ಲದೆ, 1927 ರ ನಂತರ ಡಾ.ಬಿ.ಆರ್.ಅಂಬೇಡ್ಕರ್ ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ಜ.1ರಂದು ಭೀಮಾ ಕೋರೆಗಾಂವ್ ವಿಜಯ ಸ್ಥಂಬದ ಮುಂದೆ ನಿಂತು ವೀರ ಸೈನಿಕರಿಗೆ ನಮನ ಸಲ್ಲಿಸುತ್ತಿದ್ದರು. ಅವರಿಂದಾಗಿ ಭೀಮಾ ಕೋರೆಗಾಂವ್‌ನ ವಿಜಯದ ಸ್ವಾಭಿಮಾನದ ಇತಿಹಾಸವು ದೇಶದ ಮೂಲೆ ಮೂಲೆಗೂ ತಲುಪುತ್ತಿದ್ದಂತೆ ಪ್ರತಿವರ್ಷ ಜ.1 ರಂದು ದೇಶಾದ್ಯಂತ ಲಕ್ಷಾಂತರ ಮಂದಿ ಕೋರೆಗಾಂವ್‌ಗೆ ತೆರಳಿ ಮಹಾರ್ ಸೈನಿಕರಿಗೆ ನಮನ ಸಲ್ಲಿಸಿ ಬರುವುದು ರೂಢಿಯಾಗಿದೆ. ಹಾಗೂ ತಾವಿರುವ ಪ್ರದೇಶಗಳಲ್ಲಿಯೇ ಶೋಷಿತ ಸಮುದಾಯಗಳ ಜನತೆ ಕೋರೆಗಾಂವ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದ್ದು, ಹೀಗಾಗಿ ತಾಲೂಕಿನ ಎಲ್ಲಾ ಶೋಷಿತ ಹಾಗೂ ನಾಗರೀಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಸಿದ್ದರಾಜು, ಯೋಗೇಶ್, ರಾಜೇಂದ್ರ ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

BREAKING : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಾಟ್ಸಪ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು

30/12/2025 8:50 PM1 Min Read

ರಾಜ್ಯದ ಜನತೆಗೆ ಸುಣ್ಣ, ಹೊರ ರಾಜ್ಯದವರಿಗೆ ಬೆಣ್ಣೆ ಇದು ಕಾಂಗ್ರೆಸ್ ಸರ್ಕಾರದ ಹೊಸ ವರ್ಷದ ಗ್ಯಾರಂಟಿ : ನಿಖಿಲ್ ಕುಮಾರಸ್ವಾಮಿ

30/12/2025 8:12 PM1 Min Read

ಬ್ರಾಹ್ಮಣ ಭೋಜನ ಪ್ರಿಯಃ ; ಇದರ ಅರ್ಥವೇನು ಗೊತ್ತಾ.?

30/12/2025 8:07 PM4 Mins Read
Recent News

BREAKING : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಾಟ್ಸಪ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು

30/12/2025 8:50 PM

ಜ.1ರ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಮಂಡ್ಯ ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ

30/12/2025 8:21 PM

BREAKING : ಪ್ರಿಯಾಂಕಾ ಗಾಂಧಿ ಪುತ್ರ ‘ರೈಹಾನ್ ವಾದ್ರಾ’ ಗೆಳತಿ ‘ಅವಿವಾ ಬೇಗ್’ ಜೊತೆ ನಿಶ್ಚಿತಾರ್ಥ : ಮೂಲಗಳು

30/12/2025 8:16 PM

ರಾಜ್ಯದ ಜನತೆಗೆ ಸುಣ್ಣ, ಹೊರ ರಾಜ್ಯದವರಿಗೆ ಬೆಣ್ಣೆ ಇದು ಕಾಂಗ್ರೆಸ್ ಸರ್ಕಾರದ ಹೊಸ ವರ್ಷದ ಗ್ಯಾರಂಟಿ : ನಿಖಿಲ್ ಕುಮಾರಸ್ವಾಮಿ

30/12/2025 8:12 PM
State News
KARNATAKA

BREAKING : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಾಟ್ಸಪ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು

By kannadanewsnow0530/12/2025 8:50 PM KARNATAKA 1 Min Read

ಉಡುಪಿ : ಇತ್ತೀಚಿಗೆ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ದೊಡ್ಡ ದೊಡ್ಡ ಉದ್ಯಮಿಗಳು, ಐಟಿ ಕಂಪನಿಯ ಉದ್ಯೋಗಿಗಳೇ ಟಾರ್ಗೆಟ್…

ಜ.1ರ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಮಂಡ್ಯ ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ

30/12/2025 8:21 PM

ರಾಜ್ಯದ ಜನತೆಗೆ ಸುಣ್ಣ, ಹೊರ ರಾಜ್ಯದವರಿಗೆ ಬೆಣ್ಣೆ ಇದು ಕಾಂಗ್ರೆಸ್ ಸರ್ಕಾರದ ಹೊಸ ವರ್ಷದ ಗ್ಯಾರಂಟಿ : ನಿಖಿಲ್ ಕುಮಾರಸ್ವಾಮಿ

30/12/2025 8:12 PM

ಬ್ರಾಹ್ಮಣ ಭೋಜನ ಪ್ರಿಯಃ ; ಇದರ ಅರ್ಥವೇನು ಗೊತ್ತಾ.?

30/12/2025 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.