Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ದೇಶೀಯ ಮಹಿಳಾ ಕ್ರಿಕೆಟಿಗರು, ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಕೊಟ್ಟ BCCI: ಭಾರೀ ವೇತನ ಹೆಚ್ಚಳ

22/12/2025 10:16 PM

BREAKING ; ದೇಶೀಯ ‘ಮಹಿಳಾ ಕ್ರಿಕೆಟ್ ಆಟಗಾರ್ತಿ’ಯರಿಗೆ ‘BCCI’ ಗುಡ್ ನ್ಯೂಸ್ ; ವೇತನದಲ್ಲಿ ಭಾರೀ ಹೆಚ್ಚಳ ಘೋಷಣೆ

22/12/2025 10:16 PM

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

22/12/2025 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ
KARNATAKA

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

By kannadanewsnow0922/12/2025 9:55 PM

ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ನೀಡುವಂತ ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಮಾಲತೇಶ್ ಅರಸ್ ಹರ್ತಿಕೋಟೆಗೆ ಪ್ರದಾನ ಮಾಡಲಾಯಿತು.

ಸಚಿವರಾದ ಡಿ.ಸುಧಾಕರ್, ಮಂಡಳಿ ಅಧ್ಯಕ್ಷರಾದ ನರೇಂದ್ರ ಸ್ವಾಮಿ, ಶಾಸಕರಾದ ರಘುಮೂರ್ತಿ, ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್, ಆಯೋಗದ ಅಧ್ಯಕ್ಷರಾದ ಪಿ ರಘು, ಎಡಿಸಿ ಕುಮಾರ ಸ್ವಾಮಿ, ಅರಣ್ಯ ಇಲಾಖೆಯ ಅಧಿಕಾರಿಗಳು ಜೊತೆಗೂಡಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಮಾಲತೇಶ್ ಅರಸ್ ಹರ್ತಿಕೋಟೆ ಪರಿಚಯ

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ (ರಿ) ಯ ರಾಜ್ಯಾಧ್ಯಕ್ಷರಾದ ಮಾಲತೇಶ್ ಅರಸ್ , 23 ವರ್ಷಗಳಿಂದ ನಿರಂತರವಾಗಿ ಪರಿಸರ ಸಂರಕ್ಷಣೆಯ ಹೋರಾಟಗಾರ. ಪರಿಸರ ಸಂರಕ್ಷಣೆ ಎಂದರೆ ಕೇವಲ ಒಂದು ಕಾರ್ಯವಲ್ಲ, ಅದು ಮಾನವೀಯ ಬದುಕಿನ ನಾಡಿಯಂತೆ ಅಳವಡಿಸಿಕೊಳ್ಳಬೇಕಾದ ಕರ್ತವ್ಯವೆಂದು ನಂಬಿ ಕಳೆದ ಎರಡು ದಶಕಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ವ್ಯಕ್ತಿ — ಮಾಲತೇಶ್ ಅರಸ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆಯವರು.

ಮಾಲತೇಶ್ ಅರಸ್ MA.,MCJ.,BEd,. LLB ಪದವೀಧರರು. ಪತ್ರಕರ್ತ, ವಕೀಲ ಮತ್ತು ಪರಿಸರ ಹೋರಾಟಗಾರ, ಹಸಿರು ಪಡೆಯನ್ನು ಕಟ್ಟಿದ ಕಾಯಕಜೀವಿಯಾಗಿ ಇದೀಗ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ (ರಿ) ಯ ರಾಜ್ಯಾಧ್ಯಕ್ಷರಾಗಿದ್ದಾರೆ.

ಅವರು ಕಳೆದ 23 ವರ್ಷಗಳಿಂದ ಹಸಿರು ಸಂಸ್ಕೃತಿಯ ಹರಿಕಾರರಾಗಿ, ನೂರಾರು ಗ್ರಾಮಗಳಲ್ಲಿ ಗಿಡ ನೆಡುವ ಕಾರ್ಯ, ಪೊಲೀಸ್ ಠಾಣೆಗಳನ್ನು ಪರಿಸರ ಸ್ನೇಹಿ ಯಾಗಿ ಮಾಡಲು ಹೋರಾಡುತ್ತಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಪರಿಸರ ಅರಿವು ಮೂಡಿಸುವ ಪಾಠ ಹಾಗೂ ಅಭಿಯಾನಗಳನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ಪರಿಸರದ ಹಲವು ಅಂಶಗಳಾದ ವಾಯು ಮಾಲಿನ್ಯ, ಜಲ ಮಾಲಿನ್ಯ, ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣ, ಜೀವ ವೈವಿಧ್ಯ ಸಂರಕ್ಷಣೆ, ಪ್ರಾಣಿ-ಪಕ್ಷಿಗಳ ರಕ್ಷಣೆಯಂತಹ ಕ್ಷೇತ್ರಗಳಲ್ಲಿ ಅವರು ನಿರಂತರವಾದ ಕಾರ್ಯನಿರ್ವಹಣೆ ನಡೆಸಿದ್ದಾರೆ. ಅವರ ನೇತೃತ್ವದಲ್ಲಿ ನಡೆದ “ಹಸಿರು ಚಳವಳಿ”, “ಗಿಡ ಬೆಳೆಸಿ – ಜೀವನ ಉಳಿಸಿ”, “ಜಲ ಜಾಗೃತಿ ” ಮುಂತಾದ ಅಭಿಯಾನಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಶ್ಲಾಘನೀಯ ಪ್ರತಿಕ್ರಿಯೆ ಪಡೆದಿವೆ.

ಅರಣ್ಯ ಸಚಿವರು ಸೇರಿದಂತೆ ಅನೇಕರನ್ನು ಬೇಟಿ ಮಾಡಿ ಪರಿಸರ- ವನ್ಯಜೀವಿ ಉಳಿವಿನ ಬಗ್ಗೆ ಚರ್ಚೆ ಮಾಡುವ ಮಾಲತೇಶ್ ಅರಸ್ ಅವರ ತ್ಯಾಗ, ತಪಸ್ಸು ಮತ್ತು ಸೇವೆಯನ್ನು ಗುರುತಿಸಿ ರಾಜ್ಯ ಹಾಗೂ ವಿವಿಧ ಸಂಸ್ಥೆಗಳ ವತಿಯಿಂದ ಅವರಿಗೆ ಅನೇಕ ಪ್ರಶಸ್ತಿಗಳು ನೀಡಲಾಗಿದೆ. ಸಮಾಜದಲ್ಲಿ ಪರಿಸರದ ಪ್ರಾಮುಖ್ಯತೆಯನ್ನು ಬೋಧಿಸಲು ಅವರು ಮಕ್ಕಳಲ್ಲಿ ಪರಿಸರ ಪಾಠ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು, ಇಂದಿಗೆ ನೂರಾರು ವಿದ್ಯಾರ್ಥಿಗಳಿಗೆ ಪ್ರೇರಣೆಯ ಮೂಲರಾಗಿದ್ದಾರೆ.

ವಕೀಲರಾಗಿ ಅವರು ಕಾನೂನು ಜಾಗೃತಿಯ ಮೂಲಕ ಪರಿಸರ ಸಂರಕ್ಷಣೆಯ ಕಾನೂನುಗಳ ಪಾಲನೆಗೆ ಒತ್ತು ನೀಡುತ್ತಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿಯೂ ಅವರು “ಈ ನಗರವಾಣಿ” ಪತ್ರಿಕೆಯ ಪ್ರಧಾನ ಸಂಪಾದಕರಾಗಿ, ಪರಿಸರ ಸಂಬಂಧಿತ ವಿಷಯಗಳಿಗೆ ಸದಾ ಪ್ರಾಮುಖ್ಯತೆ ನೀಡುತ್ತಾರೆ.

ಒಟ್ಟಾರೆ, ಮಾಲತೇಶ್ ಅರಸ್ ಅವರು ಹಸಿರು ಸಂಸ್ಕೃತಿಯ ನಿಷ್ಠಾವಂತ ಸೇವಕರು — ಪರಿಸರವನ್ನು ಪ್ರೀತಿಸುವ, ವನ್ಯಜೀವಿಯನ್ನು ಕಾಪಾಡುವ ಮತ್ತು ಮುಂದಿನ ಪೀಳಿಗೆಯ ಭವಿಷ್ಯವನ್ನು ಸಂರಕ್ಷಿಸುವ ದೃಷ್ಟಿಯಿಂದ ನಿಜವಾದ “ಹಸಿರು ಕ್ರಾಂತಿಕಾರಿ” ಆಗಿದ್ದಾರೆ.

ಇವರ ಸಾರಥ್ಯದಲ್ಲಿ ರಾಜ್ಯಾದ್ಯಂತ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ನಿರಂತರ ಕಾರ್ಯಕ್ರಮಗಳಾಗುತ್ತಿವೆ. ಇವರ ಸೇವೆಯನ್ನು ಗುರುತಿಸಿ ಇಂದು ಮಾಲತೇಶ್ ಅರಸ್ ಹರ್ತಿಕೋಟೆ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಪ್ರದಾನಮಾಡಲಾಯಿತು.

ಇವರಪ್ಪ ಡಾಕ್ಟರ್ ಅಂದ್ರೆ! ಅಪಘಾತದಲ್ಲಿ ಗಾಯಗೊಂಡಿದ್ದವನಿಗೆ ‘ರೋಡಲ್ಲೇ ಆಪರೇಷನ್’ ಮಾಡಿ ಜೀವ ಉಳಿಸಿದ ವೈದ್ಯರು!

BIG NEWS : ಚಿನ್ನದ ಮೇಲೆ ಸಾಲ ಪಡೆಯುವವರಿಗೆ `RBI’ ಬಿಗ್ ಶಾಕ್ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 60% ಲೋನ್.!

Share. Facebook Twitter LinkedIn WhatsApp Email

Related Posts

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಸಚಿವ ಸಂತೋಷ್ ಲಾಡ್ ಖಂಡನೆ

22/12/2025 9:00 PM1 Min Read

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

22/12/2025 8:54 PM1 Min Read

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

22/12/2025 8:10 PM1 Min Read
Recent News

BREAKING: ದೇಶೀಯ ಮಹಿಳಾ ಕ್ರಿಕೆಟಿಗರು, ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಕೊಟ್ಟ BCCI: ಭಾರೀ ವೇತನ ಹೆಚ್ಚಳ

22/12/2025 10:16 PM

BREAKING ; ದೇಶೀಯ ‘ಮಹಿಳಾ ಕ್ರಿಕೆಟ್ ಆಟಗಾರ್ತಿ’ಯರಿಗೆ ‘BCCI’ ಗುಡ್ ನ್ಯೂಸ್ ; ವೇತನದಲ್ಲಿ ಭಾರೀ ಹೆಚ್ಚಳ ಘೋಷಣೆ

22/12/2025 10:16 PM

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

22/12/2025 9:55 PM

BIGG NEWS : ಭಾರತೀಯ ನೌಕಾಪಡೆಗೆ ದೇಶೀಯ ಯುದ್ಧನೌಕೆ ‘ಅಂಜದೀಪ್’ ಸ್ವೀಕಾರ ; ಕಡಲ ಭದ್ರತೆಗೆ ಪ್ರಮುಖ ಉತ್ತೇಜನ

22/12/2025 9:41 PM
State News
KARNATAKA

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

By kannadanewsnow0922/12/2025 9:55 PM KARNATAKA 2 Mins Read

ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ನೀಡುವಂತ ಇಂದಿರಾ…

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಸಚಿವ ಸಂತೋಷ್ ಲಾಡ್ ಖಂಡನೆ

22/12/2025 9:00 PM

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

22/12/2025 8:54 PM

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

22/12/2025 8:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.