ಬೆಂಗಳೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಮಾಳವಿಕಾ ಅವಿನಾಶ್ ಅವರ ತಂದೆಯವರಾದ ನಟೇಶನ್ ಗಣೇಶನ್ ಅವರು ಇಂದು ಮೃತಪಟ್ಟಿದ್ದು, ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ತತ್ಸಂಬಂಧ ಅಂತ್ಯಸಂಸ್ಕಾರ ಕಾರ್ಯವು ಇಂದು ಸಂಜೆ 5 ಗಂಟೆಗೆ ಕೆಂಗೇರಿ, ಬಂಡೇಮಠದ ಹತ್ತಿರ ಇರುವ ಬಿ.ಬಿ.ಎಂ.ಪಿ ಚಿತಾಗಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನೂ ನಟಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಳವಿಕಾ ಅವಿನಾಶ್ ಅವರು ತಮ್ಮ ತಂದೆ ನಟೇಶನ್ ಗಣೇಶನ್ ನಿಧನರಾಗಿದ್ದಾರೆ ಎಂಬುದಾಗಿ ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ತಂದೆಯ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು, ಇದನ್ನು ನಾನು 4 ದಿನಗಳ ಹಿಂದೆ ಕ್ಲಿಕ್ಕಿಸಿದ ಫೋಟೋ ಎಂದು ಬರೆದುಕೊಂಡಿದ್ದಾರೆ. ಅವರು ಬ್ಯಾಂಕರ್, ವಕೀಲ, ಬರಹಗಾರ, ನಾಟಕಕಾರ, ಸಾಹಿತ್ಯ ಮತ್ತು ವೇದಗಳಲ್ಲಿ ಆಳವಾದ ಜ್ಞಾನವನ್ನು ಹೊಂದಿರುವ ವಿದ್ವಾಂಸರಾಗಿದ್ದರು. ಅವರು ನನ್ನ ತಂದೆ ಮಾತ್ರವಲ್ಲ ಗುರು ಕೂಡ ಆಗಿದ್ದರು. ನನ್ನನ್ನು ಮತ್ತು ನನ್ನ ಸಹೋದರಿಯನ್ನು ಸಿಂಹಿಣಿಯಂತೆ ಬೆಳೆಸಿದ್ದರು ಎಂದು ನಟಿ ಭಾವುಕರಾಗಿದ್ದಾರೆ. ನಟೇಶನ್ ಗಣೇಶನ್ ಸದಾ ನಮ್ಮ ಹೃದಯದಲ್ಲಿರುತ್ತಾರೆ ಎಂದು ಹೇಳಿದ್ದಾರೆ.
‘ರಘುನಂದನ್ ಕಾಮತ್’ ಯಾರು? ಇದು ನ್ಯಾಚುರಲ್ಸ್ ‘ಐಸ್ ಕ್ರೀಮ್ ಮ್ಯಾನ್’ ಹಿಂದಿರುವ ‘ಸ್ಪೂರ್ತಿದಾಯಕ ಕತೆ’
BREAKING : ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ