ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಬಳಿ ನನ್ನ ಹೆಂಡ್ತಿ ಜೊತೆ ಮಾತನಾಡಬೇಡ ಅಂದಿದ್ದಕ್ಕೆ ಕ್ರಿಕೆಟ್ ಬ್ಯಾಟ್, ವಿಕೇಟ್‍ನಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ನಡೆದಿದೆ.

BIGG NEWS: ಭಟ್ಕಳದ ಮುಟ್ಟಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿತ; ಗ್ರಾಮದ 10ಕ್ಕೂ ಹೆಚ್ಚು ಕುಟುಂಬಗಳು ಸ್ಥಳಾಂತರ

 

38 ವರ್ಷದ ಶ್ರೀನಿವಾಸ್ ಕೊಲೆಯಾದ ವ್ಯಕ್ತಿ. ಈತನನ್ನು ಇಬ್ಬರು ಸಂಬಂಧಿಕರೇ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.ಸದ್ಯ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನವೀನ್ ಹಾಗೂ ವೆಂಕಟರಾಮು ಎಂದು ಗುರುತಿಸಲಾಗಿದೆ.

BIGG NEWS: ಭಟ್ಕಳದ ಮುಟ್ಟಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿತ; ಗ್ರಾಮದ 10ಕ್ಕೂ ಹೆಚ್ಚು ಕುಟುಂಬಗಳು ಸ್ಥಳಾಂತರ

 

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಗ್ರಾಮ ಶ್ರೀನಿವಾಸ್, ಆಗಸ್ಟ್ 3 ರಂದು ಬೆಳಗ್ಗೆ ಗ್ರಾಮ ಹೊರಹೊಲಯದಲ್ಲಿ ಹತ್ಯೆಯಾಗಿದ್ದ. ಈ ಹಿನ್ನೆಲೆ ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೊಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ. ಈಗ ಕೊಲೆಯ ರಹಸ್ಯ ಬಯಲಾಗಿದೆ. ಸ್ವತಃ ಶ್ರೀನಿವಾಸ್‍ನ ಸಹೋದರ ಸಂಬಂಧಿ ನವೀನ್ ಹಾಗೂ ಶ್ರೀನಿವಾಸ್‍ನ ಅಕ್ಕನ ಮಗ ವೆಂಕಟರಾಮುನೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Share.
Exit mobile version