Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ಸಂತಾಪ

14/12/2025 9:23 PM

ಇಂದು ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಶಾಮನೂರು ಶಿವಶಂಕರಪ್ಪ ನಿಧನ: ಸ್ಪರ್ಶ್ ಆಸ್ಪತ್ರೆ ಮಾಧ್ಯಮ ಪ್ರಕಟಣೆ

14/12/2025 9:17 PM

BREAKING: ನಾಳೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ಅಂತ್ಯಕ್ರಿಯೆ

14/12/2025 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರಲ್ಲಿ ಕಲುಷಿತ ನೀರಿನಿಂದ ವ್ಯಕ್ತಿ ಸಾವಿಗೆ ಸರಕಾರದ ವೈಫಲ್ಯವೇ ಕಾರಣ: BJP ಅಶ್ವತ್ಥನಾರಾಯಣ್
KARNATAKA

ಮೈಸೂರಲ್ಲಿ ಕಲುಷಿತ ನೀರಿನಿಂದ ವ್ಯಕ್ತಿ ಸಾವಿಗೆ ಸರಕಾರದ ವೈಫಲ್ಯವೇ ಕಾರಣ: BJP ಅಶ್ವತ್ಥನಾರಾಯಣ್

By kannadanewsnow0923/05/2024 2:36 PM

ಬೆಂಗಳೂರು: ಸಿದ್ದರಾಮಯ್ಯನವರ ಬಲಗೈ ಬಂಟ ಮರಿಗೌಡರ ಊರಿನಲ್ಲಿ ಕಲುಷಿತ ನೀರು ಸೇವಿಸಿ ಒಬ್ಬರು ಮೃತಪಟ್ಟಿದ್ದಾರೆ. ಕೆ.ಸಾಲುಂಡಿಯಲ್ಲಿ ಈ ದುರ್ಘಟನೆ ನಡೆದಿದೆ. ಪಕ್ಕದ ಊರಿನಲ್ಲಿ ಜನರಿಗೆ ವಾಂತಿ ಭೇದಿ (ಕಾಲರಾ) ಕಾಣಿಸಿಕೊಂಡಿದೆ. ಡಿಎಚ್‍ಒಗೆ ದೂರು ನೀಡಿದ್ದರೂ ಗಮನ ಹರಿಸಿಲ್ಲ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಆರೋಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸಿದ್ದರಾಮಯ್ಯನವರ ಜಿಲ್ಲೆ ಆಗಿದ್ದರೂ, ಪ್ರಭಾವಿ ಸಚಿವ ಮಹದೇವಪ್ಪ ಅವರು ಇದ್ದರೂ ಒಬ್ಬರು ಮೃತಪಟ್ಟಿದ್ದಾರೆ; 37 ಜನರು ಆಸ್ಪತ್ರೆಯಲ್ಲಿರುವುದು ಸರಕಾರದ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ ಎಂದು ಟೀಕಿಸಿದರು. ಜಿಲ್ಲಾಡಳಿತವು ಕುಡಿಯುವ ನೀರಿನ ಸಮಸ್ಯೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ಷೇಪಿಸಿದರು.

ಕಳೆದ ವರ್ಷ ಚಿತ್ರದುರ್ಗ ಜಿಲ್ಲೆಯ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರನ್ನು ಕುಡಿದು 9 ಜನರು ಮೃತಪಟ್ಟ ಘಟನೆ ನಮ್ಮ ಕಣ್ಮುಂದೆ ಇದೆ. ತನಿಖೆ ಮಾಡಿದಾಗ ಕುಡಿಯುವ ನೀರಿಗೆ ಮನುಷ್ಯನ ಮಲ, ವಿಷಕಾರಿ ಅಂಶಗಳು ಸೇರಿತ್ತು ಎಂದು ತನಿಖೆ, ಡಿಎಚ್‍ಒ ವರದಿಯಿಂದ ತಿಳಿದುಬಂದಿತ್ತು ಎಂದು ನುಡಿದರು.

ಈ 9 ಜನರ ಸಾವು ನಮ್ಮ ಕಣ್ಮುಂದೆ ಇರುವಾಗಲೇ ಮುಖ್ಯಮಂತ್ರಿಗಳ ಜಿಲ್ಲೆ ಮೈಸೂರಿನಲ್ಲಿ 18ನೇ ವಾರ್ಡಿನಲ್ಲಿ ಕೆ.ಸಾಲುಂಡಿ ಎಂಬಲ್ಲಿ ಕಲುಷಿತ ಚರಂಡಿ ನೀರು ಕುಡಿಯುವ ನೀರಿಗೆ ಸೇರುವ ದೂರು ಇತ್ತು. ಡಿಎಚ್‍ಒ ಗಮನಕ್ಕೆ ತಂದರೂ ಎಚ್ಚತ್ತುಕೊಂಡಿಲ್ಲ. ಒಬ್ಬರು ಮೃತಪಟ್ಟಿದ್ದಾರೆ 73 ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

23 ಮಕ್ಕಳು ಸೇರಿ 37 ಜನರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದರು.

ನಿನ್ನೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಮುಂದೆ ತಮಿಳುನಾಡು ಸರಕಾರ ಹೋಗಿ ಮೇ ತಿಂಗಳ ಕೊನೆಯ ಒಳಗೆ ತಮಗೆ 6.5 ಟಿಎಂಸಿ ನೀರನ್ನು ಬಿಡಲು ಒತ್ತಾಯಿಸಿತ್ತು. ಕಳೆದ ಸಾಲಿನಲ್ಲಿ ಡಿ.ಕೆ.ಶಿವಕುಮಾರ್ ಅವರು ಮೈಮರೆತಂತೆ ಈ ಬಾರಿ ಮೈಮರೆಯಬಾರದು ಎಂದು ಬಿಜೆಪಿ ಒತ್ತಾಯಿಸುವುದಾಗಿ ಹೇಳಿದರು. ಕಳೆದ ಸಾರಿ 3-4 ಬಾರಿ ನೀರು ಬಿಟ್ಟ ಬಳಿಕ ಸರ್ವ ಪಕ್ಷಗಳ ಸಭೆ ಕರೆದಿದ್ದರು ಎಂದು ಟೀಕಿಸಿದರು. ಪ್ರಾಧಿಕಾರದ ಮುಂದೆ ಸ್ಪಷ್ಟ ಅಂಕಿಅಂಶಗಳೊಂದಿಗೆ ವಾದ ಮಂಡಿಸಲು ಆಗ್ರಹಿಸಿದರು.

ಐಸಿಸಿ (ನೀರಾವರಿ ಸಲಹಾ ಸಮಿತಿ) ಸಭೆಯನ್ನು ಜುಲೈ ಬದಲಾಗಿ ಜೂನ್‍ನಲ್ಲೇ ಕರೆದು ಕಾಲುವೆ ಮತ್ತು ರೈತರಿಗೆ ನೀರು ಕೊಡಬೇಕು. ಕಾವೇರಿ ಕೊಳ್ಳ ಭಾಗದ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಅವರು ಒತ್ತಾಯಿಸಿದರು. ಮೇಕೆದಾಟು ಸಂಬಂಧ ಈಗಾಗಲೇ ಸಾಧ್ಯಾಸಾಧ್ಯತೆ ವರದಿ ಕೊಡಲಾಗಿದೆ. ಡಿಪಿಆರ್ ಕೂಡ ಆಗಿದೆ. ಬಿಜೆಪಿ ಸರಕಾರ 1 ಸಾವಿರ ಕೋಟಿ ಹಣ ಮೀಸಲಿಟ್ಟಿತ್ತು. ನನ್ನ ನೀರು ನನ್ನ ಹಕ್ಕು ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ಸಿಗರು, ಕೇಂದ್ರದ ಮೇಲೆ ಗೂಬೆ ಕೂರಿಸದೆ ಯೋಜನೆ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ವಕ್ತಾರ ಹೆಚ್.ಎನ್. ಚಂದ್ರಶೇಖರ್ ಅವರು ಉಪಸ್ಥಿತರಿದ್ದರು.

ಬೆಂಗಳೂರಲ್ಲಿ ‘ಹಿಟ್ ಅಂಡ್ ರನ್’ ಪ್ರಕರಣ: ‘ಆರೋಪಿ ಶ್ರೀಕಾಂತ್ ಶರ್ಮಾ’ ಬಂಧನ

ಪ್ರಜ್ವಲ್ ರೇವಣ್ಣಗೆ ಬಿಗ್‌ಶಾಕ್‌: ಪಾಸ್ ಪೋರ್ಟ್’ ರದ್ದತಿ ಪ್ರಕ್ರಿಯೆ ಆರಂಭ, ಶೀಘ್ರದಲ್ಲಿ ಬಂಧನ!

 

Share. Facebook Twitter LinkedIn WhatsApp Email

Related Posts

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ಸಂತಾಪ

14/12/2025 9:23 PM1 Min Read

ಇಂದು ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಶಾಮನೂರು ಶಿವಶಂಕರಪ್ಪ ನಿಧನ: ಸ್ಪರ್ಶ್ ಆಸ್ಪತ್ರೆ ಮಾಧ್ಯಮ ಪ್ರಕಟಣೆ

14/12/2025 9:17 PM1 Min Read

BREAKING: ನಾಳೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ಅಂತ್ಯಕ್ರಿಯೆ

14/12/2025 8:58 PM1 Min Read
Recent News

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ಸಂತಾಪ

14/12/2025 9:23 PM

ಇಂದು ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಶಾಮನೂರು ಶಿವಶಂಕರಪ್ಪ ನಿಧನ: ಸ್ಪರ್ಶ್ ಆಸ್ಪತ್ರೆ ಮಾಧ್ಯಮ ಪ್ರಕಟಣೆ

14/12/2025 9:17 PM

BREAKING: ನಾಳೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ಅಂತ್ಯಕ್ರಿಯೆ

14/12/2025 8:58 PM

BREAKING: ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ನಾಳೆ ದಾವಣಗೆರೆ ವಿವಿಯ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆ

14/12/2025 8:48 PM
State News
KARNATAKA

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ಸಂತಾಪ

By kannadanewsnow0914/12/2025 9:23 PM KARNATAKA 1 Min Read

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕರು, ದಾವಣಗೆರೆ ಶಾಸಕರು ಹಾಗೂ ನನ್ನ ಮಾರ್ಗದರ್ಶಕರಾದ ಶಾಮನೂರು ಶಿವಶಂಕರಪ್ಪನವರ ನಿಧನದ ಸುದ್ದಿಯಿಂದ ಬಹಳ ನೋವುಂಟಾಗಿದೆ ಎಂದು…

ಇಂದು ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಶಾಮನೂರು ಶಿವಶಂಕರಪ್ಪ ನಿಧನ: ಸ್ಪರ್ಶ್ ಆಸ್ಪತ್ರೆ ಮಾಧ್ಯಮ ಪ್ರಕಟಣೆ

14/12/2025 9:17 PM

BREAKING: ನಾಳೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ಅಂತ್ಯಕ್ರಿಯೆ

14/12/2025 8:58 PM

BREAKING: ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ನಾಳೆ ದಾವಣಗೆರೆ ವಿವಿಯ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆ

14/12/2025 8:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.