ಮಂಗಳೂರು: ಇಲ್ಲಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದ ಬಳಿಯಲ್ಲಿ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿರೋದಾಗಿ ತಿಳಿದು ಬಂದಿದೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವಂತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಮಂಗಳೂರಿನ ಹೊರವಲಯದಲ್ಲಿರುವಂತ ಕಾಟಿಪಳ್ಳದ 4ನೇ ಬ್ಲಾಕ್ ನಲ್ಲಿ ದುಷ್ಕರ್ಮಿಗಳ ತಂಡವೊಂದು ಜಲೀಲ್ ಎಂಬಾತನಿಗೆ ಚಾಕುವಿನಿಂದ ಇರುದು ಪರಾರಿಯಾಗಿರೋದಾಗಿ ತಿಳಿದು ಬಂದಿದೆ.

ಜಲೀಲ್ ಗೆ ಚಾಕುವಿನಿಂದ ಇರಿದು, ದುಷ್ಕರ್ಮಿಗಳು ಪರಾರಿಯಾಗಿದ ಬಳಿಕ, ಅವರು ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಜಲೀಲ್ ಎಂಬಾತನಿಗೆ ಚಾಕುವಿನಿಂದ ಇರಿದ ವಿಷಯ ತಿಳಿದು, ಸುರಕ್ತಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ ಎನ್ನಲಾಗಿದೆ.

ಕಾರಡಗಿಯಲ್ಲಿ 8 ಕೋಟಿ ರೂ. ವೆಚ್ಚದ 30 ಹಾಸಿಗೆ ಆಸ್ಪತ್ರೆ ನಿರ್ಮಾಣ – ಸಿಎಂ ಬಸವರಾಜ ಬೊಮ್ಮಾಯಿ

ಅಭಿವೃದ್ಧಿ ಏನು ಅನ್ನುವುದನ್ನು ಬಿಜೆಪಿ ತೋರಿಸುತ್ತಿದೆ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

Share.
Exit mobile version