ಚಿಕ್ಕಮಗಳೂರು: ಆ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಇಂತಹ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಜಗಳ ವಿಕೋಪಕ್ಕೆ ಹೋದಂತ ಸಂದರ್ಭದಲ್ಲಿ ಪ್ರೀತಿಸಿ ಮದುವೆಯಾಗಿದ್ದಂತ ಪತ್ನಿಗೆ 10 ಬಾರಿ ಚಾಕುವಿನಿಂದ ಇರಿದು ಪತಿ ಹತ್ಯೆ ಮಾಡಿರುವಂತ ಘಟನೆ ಚಿಕ್ಕಮಗಳೂರು ಗ್ರಾಮಾಂತರದಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲ್ಲೂಕಿನ ಕೈಮರ ಗ್ರಾಮದಲ್ಲಿ ಪತ್ನಿ ಕೀರ್ತಿಯನ್ನು ಬರ್ಬರವಾಗಿ ಚಾಕುವಿನಿಂದ 10 ಬಾರಿ ಇರಿದು ಪತಿ ಅವಿನಾಶ್ ಹತ್ಯೆಗೈದು ಎಸ್ಕೇಪ್ ಆಗಿದ್ದಾನೆ.
ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಅವಿನಾಶ್, ಕೀರ್ತಿ ಮದುವೆಯಾಗಿದ್ದರು. ಇಬ್ಬರು ಜಗಳ ವಿಕೋಪಕ್ಕೆ ಹೋಗದಂತ ಸಂದರ್ಭದಲ್ಲಿ ಪತ್ನಿ ಕೀರ್ತಿಯನ್ನು 10 ಬಾರಿ ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಲೆಗೈದಿದ್ದಾನೆ. ಆ ಬಳಿಕ ಪರಾರಿಯಾಗಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವಂತ ಪೊಲೀಸರು, ಮರಣೋತ್ತರ ಪರೀಕ್ಷೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕೀರ್ತಿ ಮೃತದೇಹ ರವಾನೆ ಮಾಡಿದ್ದಾರೆ.
ನಾಳೆ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು-ಕಾಶ್ಮೀರದಲ್ಲಿ ಅಣಕು ಕವಾಯತು | Mega security drill