ನವದೆಹಲಿ: ಮಂಗಳವಾರ ದೆಹಲಿಯ ಫರಿದಾಬಾದ್ ಪ್ರದೇಶದಲ್ಲಿ ಅಮನ್ ತನ್ನ ನಾಲ್ವರು ಮಕ್ಕಳೊಂದಿಗೆ ಚಲಿಸುತ್ತಿರುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳದಿಂದ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಮೃತರನ್ನು ಬಿಹಾರ ನಿವಾಸಿ ಮನೋಜ್ ಮಹಾತೋ ಎಂದು ಗುರುತಿಸಲಾಗಿದೆ.
ಪೊಲೀಸರು ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಪತ್ತೆ ಹಚ್ಚಿ, ನಂತರ ಅವರ ಕುಟುಂಬಕ್ಕೆ ಘಟನೆಯ ಬಗ್ಗೆ ತಿಳಿಸಲಾಗಿದ್ದು, ಅವರು ಸ್ಥಳಕ್ಕೆ ಬಂದು ಶವಗಳನ್ನು ಗುರುತಿಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಾದ್ಶಾ ಖಾನ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಗೋಲ್ಡನ್ ಟೆಂಪಲ್ ಎಕ್ಸ್ಪ್ರೆಸ್ನ ಚಾಲಕ ಘಟನೆಯ ಬಗ್ಗೆ ಸ್ಟೇಷನ್ ಮಾಸ್ಟರ್ಗೆ ಮಾಹಿತಿ ನೀಡಿದ್ದಾನೆ. ಅವರು ನಮಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತಲುಪಿದ ನಂತರ, ಅವರ ಹೆಸರು ಮತ್ತು ಅವರ ಪತ್ನಿಗೆ ಸೇರಿದ ಫೋನ್ ಸಂಖ್ಯೆಯನ್ನು ಒಳಗೊಂಡ ಆಧಾರ್ ಕಾರ್ಡ್ ನಮಗೆ ಸಿಕ್ಕಿತು. ಘಟನೆಯ ಬಗ್ಗೆ ಅವರಿಗೆ ತಿಳಿಸಲಾಯಿತು ಮತ್ತು ಶವಗಳನ್ನು ಅವರು ಗುರುತಿಸಿದ್ದಾರೆ ಎಂದು ಜಿಆರ್ಪಿ ಎಸ್ಎಚ್ಒ ರಾಜ್ ಪಾಲ್ ಹೇಳಿದರು.
ಪೊಲೀಸರ ಪ್ರಕಾರ, ನೇಹಾ ತನ್ನ ಪತಿ ಮಕ್ಕಳನ್ನು ಉದ್ಯಾನವನಕ್ಕೆ ಕರೆದೊಯ್ಯುವ ನೆಪದಲ್ಲಿ ಮನೆಯಿಂದ ಹೊರಗೆ ಹೋಗಿದ್ದರು ಎಂದು ಅವರಿಗೆ ತಿಳಿಸಿದರು.
ಮೃತನ ಪತ್ನಿ ಪ್ರೀತಿ ಹೇಳುವಂತೆ, ತನ್ನ ಸೋದರಸಂಬಂಧಿಯೊಂದಿಗೆ ಫೋನ್ನಲ್ಲಿ ಮಾತನಾಡುತ್ತಿದ್ದರಿಂದ ತನ್ನ ಪತಿ ತನಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದಾರೆ.
ಕೋವಿಡ್-19 ಉಲ್ಬಣ: ಪ್ರಧಾನಿ ಮೋದಿ ಭೇಟಿ ಮಾಡುವ ಮೊದಲು ಸಚಿವರಿಗೆ RT-PCR ಪರೀಕ್ಷೆ ಕಡ್ಡಾಯ: