Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್: ಇಡಿಯಿಂದ ವಾಲ್ಮೀಕಿ ನಿಗಮ ಹಗರಣದಲ್ಲಿ 8 ಕೋಟಿ ಮೌಲ್ಯದ ಆಸ್ತಿ ಜಪ್ತಿ

19/12/2025 9:32 PM

ಶಿವಮೊಗ್ಗ: ಸೊರಬದ ಕೊಡಕಣಿಯಲ್ಲಿ ಒಂಟಿ ಸಲಗ ಓಡಾಟ, ಎಚ್ಚರಿಕೆಯಿಂದ ಇರುವಂತ ಅರಣ್ಯ ಇಲಾಖೆ ಮನವಿ

19/12/2025 9:20 PM

ನೀವು ಈ ಜ್ಯೂಸ್ ಕುಡಿದ್ರೆ ಕಿಡ್ನಿಯಲ್ಲಿರುವ ಕಲ್ಲುಗಳು ತಕ್ಷಣವೇ ಕರಗುತ್ವೆ!

19/12/2025 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯ: ವಿರೋಧದ ನಡುವೆಯೂ ಮದ್ದೂರು ನಗರಸಭೆ ನಾಮ ಫಲಕ ಅನಾವರಣ
KARNATAKA

ಮಂಡ್ಯ: ವಿರೋಧದ ನಡುವೆಯೂ ಮದ್ದೂರು ನಗರಸಭೆ ನಾಮ ಫಲಕ ಅನಾವರಣ

By kannadanewsnow0904/09/2025 7:34 PM

ಮಂಡ್ಯ :- ಯಾವುದಾದರೂ ಒಂದು ಒಳ್ಳೆಯ ಕೆಲಸ ಮಾಡೋಕೆ ಮುಂದಾದರೇ ಅದನ್ನು ವಿರೋಧ ಮಾಡೋದು ಕ್ಷೇತ್ರದಲ್ಲಿ ಕಾಯಕವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಪ್ರತಿಭಟನಾಕಾರರ ವಿರುದ್ಧ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು.

ಮದ್ದೂರು ಪಟ್ಟಣದ ಪುರಸಭೆ ಕಟ್ಟಡದಲ್ಲಿ ಅಳವಡಿಸಿರುವ ನಗರಸಭಾ ಕಾರ್ಯಾಲಯ ನಾಮ ಫಲಕವನ್ನು ಅನಾವರಣಗೊಳಿಸಿ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮದ್ದೂರು ನಗರಸಭಾ ಕಾರ್ಯಾಲಯ ನಾಮ ಫಲಕವನ್ನು ಶಾಸಕರು ಅನಾವರಣಗೊಳಿಸಬಾರದು ಹಾಗೂ ನಗರಸಭಾ ವ್ಯಾಪ್ತಿಗೆ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಸೇರಿಸಬಾರದೆಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಕಪ್ಪು ಬಾವುಟ ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಉದಯ್ ಕೆಂಡಾಮಂಡಲರಾದರು.

ಮದ್ದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಗುರಿಯಾಗಿದೆ. ಯಾವುದಾದರೂ ಒಂದು ಒಳ್ಳೆಯ ಕೆಲಸ ಮಾಡೋಕೆ ಮುಂದಾದರೇ ಅದನ್ನು ವಿರೋಧ ಮಾಡೋದು ಕ್ಷೇತ್ರದಲ್ಲಿ ಕೆಲವರ ಕಾಯಕವಾಗಿದೆ. ಅಭಿವೃದ್ಧಿ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದರೇ ಯಾವುದೇ ಕಾರಣಕ್ಕೂ ರಾಜಿಯಾಗುವ ಮಾತೆ ಇಲ್ಲ ಎಂದು ಗುಡುಗಿದರು.

ಮದ್ದೂರು ಪುರಸಭೆ ವ್ಯಾಪ್ತಿಯ ಗೆಜ್ಜಲಗೆರೆ, ಸೋಮನಹಳ್ಳಿ, ಚಾಮನಹಳ್ಳಿ ಹಾಗೂ ಗೊರವನಹಳ್ಳಿ ಪಂಚಾಯಿತಿಗಳಿಂದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ನೀಡಿದ್ದ ಅನುಮೋದನೆಯ ವರದಿ ಬಳಿಕ ಸಂಬಂಧ ಪಟ್ಟ ಇಲಾಖೆಗೆ ಕಡತಗಳನ್ನು ಕಳುಹಿಸಲಾಗಿತ್ತು. ಆನಂತರ ರಾಜ್ಯಪಾಲರು ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ಮೆಲ್ದರ್ಜೆಗೆರಿಸಲು ಅಧಿಸೂಚನೆ ಹೊರಡಿಸಿದ ಆನಂತರವೇ ನಗರಸಭೆಯಾಗಿ ಪರಿವರ್ತನೆಗೊಂಡಿದಿಯೇ. ಹೊರತು ನಮ್ಮ ಸ್ವಹಿತಕ್ಕಾಗಿ ಅನುಮೋದನೆ ಮಾಡಿಸಿಕೊಂಡಿಲ್ಲ ಅಭಿವೃದ್ಧಿ ದೃಷ್ಟಿಯಿಂದ ನಗರಸಭೆಯನ್ನಾಗಿ ಮೇಲ್ದರ್ಜೆಗೆರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕೆಲ ದಿನಗಳ ಹಿಂದೆ ರೈತ ಮುಖಂಡರು ಹಾಗೂ ಸಾರ್ವಜನಿಕರು ವಿರೋಧ ಮಾಡಿದರು. ಆಗ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸೋಣ ಎಂದು ಹೇಳಿದ್ದೆ. ಆದರೆ, ಯಾರು ಸಹ ಮಾತುಕತೆಗೆ ಬರಲಿಲ್ಲ. ಬಳಿಕ ಮುಷ್ಕರ ಮಾಡಿದ್ರು, ಬೃಹತ್ ಪ್ರತಿಭಟನೆ ಮಾಡಿದ್ರು ಈಗ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದು, ಅವರು ಸ್ವತಂತ್ರರಿದ್ದಾರೆ ಅವರು ಎಲ್ಲಿಗೆ ಬೇಕಾದ್ರು ಹೋಗಲಿ ನಮ್ಮ ಉದ್ದೇಶ ಪಟ್ಟಣದ ಅಭಿವೃದ್ಧಿಯೇ ನಮ್ಮ ಗುರಿಯಾಗಿದೆ ಎಂದರು.

ಮದ್ದೂರು ಪಟ್ಟಣ ಹತ್ತಾರು ದಶಕಗಳಿಂದ ಅಭಿವೃದ್ಧಿಯಿಂದ ವಂಚಿತವಾಗಿದೆ. ರಸ್ತೆ, ಒಳಚರಂಡಿ, ಪುಟ್ ಪಾತ್, ನಾಲೆಗಳ ನಿರ್ವಹಣಾ ಕೊರತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳಿಂದ ಪಟ್ಟಣ ನರಳುತ್ತಿದ್ದು, ಸಾರ್ವಜನಿಕರು ಸಾಕಷ್ಟು ತೊಂದರೆಗೀಡಾಗಿದ್ದಾರೆ. ಹೀಗಾಗಿ ಮದ್ದೂರು ಪಟ್ಟಣವನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಮೂಲಕ ಸರ್ಕಾರದಿಂದ ಹೆಚ್ಚಿನ ಅನುದಾನ ದೊರಕಲಿದ್ದು, ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆಯಬಹುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸಿದ್ದರಾಜು, ಪ್ರಮೀಳಾ, ಸಚ್ಚಿನ್, ಸುರೇಶ್ ಕುಮಾರ್, ಮಹೇಶ್, ಸರ್ವಮಂಗಳ, ಲತಾ ರಾಮು, ರತ್ನಮ್ಮ, ಸುಮಿತ್ರಾ, ಆಯಿಷಾ ಜುನೇದ್, ಸಿದ್ದರಾಜು, ನಾಮ ನಿರ್ದೇಶನ ಸದಸ್ಯ ಮೋಹನ್, ಕೃಷ್ಣಪ್ಪ, ಪ್ರಭಾರ ಮುಖ್ಯಾಧಿಕಾರಿ ಶ್ರೀಧರ್ ಪುರಸಭಾ ಸಿಬ್ಬಂದಿಗಳು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

BREAKING: ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್: ಇಡಿಯಿಂದ ವಾಲ್ಮೀಕಿ ನಿಗಮ ಹಗರಣದಲ್ಲಿ 8 ಕೋಟಿ ಮೌಲ್ಯದ ಆಸ್ತಿ ಜಪ್ತಿ

19/12/2025 9:32 PM2 Mins Read

ಶಿವಮೊಗ್ಗ: ಸೊರಬದ ಕೊಡಕಣಿಯಲ್ಲಿ ಒಂಟಿ ಸಲಗ ಓಡಾಟ, ಎಚ್ಚರಿಕೆಯಿಂದ ಇರುವಂತ ಅರಣ್ಯ ಇಲಾಖೆ ಮನವಿ

19/12/2025 9:20 PM1 Min Read

ರಾಜ್ಯದಲ್ಲಿ BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ: ಸಚಿವ ಕೆ.ಹೆಚ್ ಮುನಿಯಪ್ಪ

19/12/2025 9:08 PM2 Mins Read
Recent News

BREAKING: ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್: ಇಡಿಯಿಂದ ವಾಲ್ಮೀಕಿ ನಿಗಮ ಹಗರಣದಲ್ಲಿ 8 ಕೋಟಿ ಮೌಲ್ಯದ ಆಸ್ತಿ ಜಪ್ತಿ

19/12/2025 9:32 PM

ಶಿವಮೊಗ್ಗ: ಸೊರಬದ ಕೊಡಕಣಿಯಲ್ಲಿ ಒಂಟಿ ಸಲಗ ಓಡಾಟ, ಎಚ್ಚರಿಕೆಯಿಂದ ಇರುವಂತ ಅರಣ್ಯ ಇಲಾಖೆ ಮನವಿ

19/12/2025 9:20 PM

ನೀವು ಈ ಜ್ಯೂಸ್ ಕುಡಿದ್ರೆ ಕಿಡ್ನಿಯಲ್ಲಿರುವ ಕಲ್ಲುಗಳು ತಕ್ಷಣವೇ ಕರಗುತ್ವೆ!

19/12/2025 9:09 PM

ರಾಜ್ಯದಲ್ಲಿ BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ: ಸಚಿವ ಕೆ.ಹೆಚ್ ಮುನಿಯಪ್ಪ

19/12/2025 9:08 PM
State News
KARNATAKA

BREAKING: ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್: ಇಡಿಯಿಂದ ವಾಲ್ಮೀಕಿ ನಿಗಮ ಹಗರಣದಲ್ಲಿ 8 ಕೋಟಿ ಮೌಲ್ಯದ ಆಸ್ತಿ ಜಪ್ತಿ

By kannadanewsnow0919/12/2025 9:32 PM KARNATAKA 2 Mins Read

ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೆ ಇಡಿ ಬಿಗ್ ಶಆಕ್ ನೀಡಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ‌ ನಿಗಮದ ಹಣ…

ಶಿವಮೊಗ್ಗ: ಸೊರಬದ ಕೊಡಕಣಿಯಲ್ಲಿ ಒಂಟಿ ಸಲಗ ಓಡಾಟ, ಎಚ್ಚರಿಕೆಯಿಂದ ಇರುವಂತ ಅರಣ್ಯ ಇಲಾಖೆ ಮನವಿ

19/12/2025 9:20 PM

ರಾಜ್ಯದಲ್ಲಿ BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ: ಸಚಿವ ಕೆ.ಹೆಚ್ ಮುನಿಯಪ್ಪ

19/12/2025 9:08 PM

ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು: ಸಿಎಂ ಸಿದ್ದರಾಮಯ್ಯ

19/12/2025 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.