ಮಂಡ್ಯ: ಜಿಲ್ಲೆಯಲ್ಲಿ ಇಂದು ಯುವಕನೊಬ್ಬನನ್ನು ಕೊಚ್ಚಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಈ ಘಟನೆಯಿಂದಾಗಿ ಸಕ್ಕರೆನಾಡು ಮಂಡ್ಯದ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ.
BREAKING NEWS: ಐಸಿಸ್ ಮಾದರಿಯ ಅಮರಾವತಿ ಹತ್ಯೆ: ಯುಎಪಿಎ ಅಡಿ ಪ್ರಕರಣ ದಾಖಲಿಸಿದ NIA | Amravati killing
ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲೂಕಿನ ಹುಲಿಕೆರೆ – ಮಜ್ಜಿಗೆಪುರದಲ್ಲಿ ಕೆ ಆರ್ ಎಸ್ ನ ತಲಕಾಡು ಫೈನ್ ನ ಸುಂದರ್ ರಾಜ್ (32) ಎಂಬಾತನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದು, ಅಲ್ಲಿಂದ ಪರಾರಿಯಾಗಿದ್ದಾರೆ.
ಕೊಲೆಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ. ಜಿಲ್ಲೆಯಲ್ಲಿ ನಡೆದಂತ ಯುವಕನ ಈ ಕೊಲೆಯಿಂದಾಗಿ ಮಂಡ್ಯ ಜಿಲ್ಲೆಯ ಜನತೆ ಬೆಚ್ಚಿ ಬೀಳುವಂತೆ ಆಗಿದೆ. ವಿಷಯ ತಿಳಿದು ಸ್ಥಳಕ್ಕೆ ಕೆ ಆರ್ ಎಸ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಕೊಲೆಗೈದ ದುಷ್ಕರ್ಮಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ