Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ `ವಿವಾಹ ನೋಂದಣಿಗೆ’ ಆಧಾರ್ ಕಾರ್ಡ್ ವಯಸ್ಸಿನ ದಾಖಲೆಯಲ್ಲ : ಸರ್ಕಾರದಿಂದ ಮಹತ್ವದ ಆದೇಶ

BIG NEWS : ಸರ್ಕಾರಿ ಉದ್ಯೋಗಗಳ ನೇಮಕಾತಿ ಪ್ರಕ್ರಿಯೆ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Government Jobs Recruitment

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ
KARNATAKA

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

By ವಸಂತ ಬಿ ಈಶ್ವರಗೆರೆ

ಮಂಡ್ಯ : ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಿರುವುದನ್ನು ಕೈ ಬಿಡುವಂತೆ ಶಾಸಕ ಕೆ.ಎಂ.ಉದಯ್ ಅವರನ್ನು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಮಧ್ಯಾಹ್ನ ರೈತಪರ ಹೋರಾಟಗಾರ್ತಿ ಸುನಂದ ಜಯರಾಮ್ ಅವರ ನೇತೃತ್ವದಲ್ಲಿ ಗ್ರಾಮದ ಪ್ರಮುಖ ಮುಖಂಡರು ಭೇಟಿ ಮಾಡಿ ಚರ್ಚಿಸಿದರು.

ಈ ವೇಳೆ ಸುನಂದ ಜಯರಾಮು ಮಾತನಾಡಿ, ಮದ್ದೂರು ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ನೀವು ನಿರೀಕ್ಷೆಗೂ ಮೀರಿ ಜನಪರವಾಗಿ ಕೆಲಸ ಮಾಡುತ್ತಿದ್ದೀರಿ. ಆದರೆ, ನಮ್ಮ ಗ್ರಾಮವನ್ನು ಅಭಿವೃದ್ಧಿ ಮಾಡುವ ಜೊತೆಗೆ ಗ್ರಾಮವನ್ನಾಗಿಯೇ ಉಳಿಸಿಕೊಡಿ ಇದು ನಿಮ್ಮಿಂದಲ್ಲೆ ಸಾಧ್ಯವಿದೆ ಎಂದು ಒತ್ತಾಯಿಸಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ಉದಯ್ 146 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ಗ್ರಾಮಸ್ಥರು ನಡೆಸುತ್ತಿರುವುದು ನಿನಗೆ ತಿಳಿದ ವಿಷಯವಾಗಿದ್ದು, ಈ ಹಿಂದೆ ನಿಮ್ಮ ಗ್ರಾಮ ಪಂಚಾತಿಯಲ್ಲಿಯೇ ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸುವ ಸಂಬಂಧ ಅನುಮೋದಿಸಿ ಚುನಾಯಿತ ಪ್ರತಿನಿಧಿಗಳೇ ನಿರ್ಧಾರ ಕೈಗೊಂಡಿದ್ದಾರೆ. ಆದಾಗಿಯೂ ಸರ್ಕಾರದಿಂದ ರಾಜ್ಯ ಪತ್ರ ಬರುವ ಮೊದಲೇ ನನ್ನ ಗಮನಕ್ಕೆ ತರಬಹುದಾಗಿತ್ತು. ಇಷ್ಟಾಗಿಯೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಗೆಜ್ಜಲಗೆರೆ ಗ್ರಾಮವನ್ನು ನಗರಸಭೆಯಿಂದ ಕೈ ಬಿಡುವ ಸಂಬಂಧ ನನ್ನ ಬಳಿಯೇ ಚರ್ಚಿಸಿ ಬಹುದಿತ್ತು. ಆದರೆ, ಪ್ರತಿಭಟನೆಯನ್ನು ಉಗ್ರ ಸ್ವರೂಪಕ್ಕೆ ತೆಗೆದುಕೊಂಡು ಹೋಗಿದ್ದಿರಿ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ನಗರಸಭೆಯನ್ನಾಗಿ ಮೇಲ್ದರ್ಜೆಗೆರಿಸಿ ಅದರಿಂದ ನನಗೇನು ಲಾಭವಿಲ್ಲ. ಆದರೆ ಈ ಸಂಬಂಧ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಕೂಡ ನಡೆಯುತ್ತಿದೆ. ಆದರೂ ನಿಮ್ಮ ಪರವಾಗಿ ಸರ್ಕಾರದ ಮಟ್ಟದಲ್ಲಿ ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ನಿಮ್ಮ ಸಮ್ಮುಖದಲ್ಲಿಯೇ ಒಂದು ಸಭೆ ನಡೆಸಿ ಮಾತನಾಡುತ್ತೇನೆ. ಗೆಜ್ಜಲಗೆರೆಯನ್ನು ಗ್ರಾಮವಾಗಿಯೇ ಉಳಿದರು ಅಥವಾ ನಗರಸಭೆಗೆ ಸೇರ್ಪಡೆಯಾದರು ನಾನು ಸಮಗ್ರ ಅಭಿವೃದ್ಧಿ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದಕ್ಕೆ ಸಮಾಧಾನಗೊಂಡ ಗ್ರಾಮದ ಮುಖಂಡರು ನಮ್ಮ ಗೆಜ್ಜಲಗೆರೆ ಗ್ರಾಮವನ್ನು ಗ್ರಾಮವನ್ನಾಗಿಯೇ ಉಳಿಸುತ್ತೀರಿ ಎಂಬ ಭರವಸೆ ನಮಗಿದೆ, ಇದು ನಿಮ್ಮಿಂದ ಸಾಧ್ಯವಾಗಲಿದೆ ಅದಕ್ಕೆ ನಾವು ಈ ವಿಷಯದಲ್ಲಿ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ. ಅಲ್ಲಿಯವರೆಗೂ ಶಾಂತಿಯುತವಾಗಿ ಅನಿರ್ಧಿಷ್ಟಾವಧಿ ಧರಣಿ ಮುಂದುವರೆಸುತ್ತೇವೆ ಎಂದು ಶಾಸಕ ಉದಯ್ ಅವರಿಗೆ ತಿಳಿಸಿದರು.

ಈ ವೇಳೆ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ನವೀನ್, ಗ್ರಾಮದ ಮುಖಂಡರಾದ ಶಂಕರ್, ಲಿಂಗಪ್ಪಾಜಿ, ಲೋಕೇಶ್, ಚಂದ್ರಶೇಖರ್, ವಿನೋದ್ ಬಾಬು ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ವಿವಾಹ ನೋಂದಣಿಗೆ’ ಆಧಾರ್ ಕಾರ್ಡ್ ವಯಸ್ಸಿನ ದಾಖಲೆಯಲ್ಲ : ಸರ್ಕಾರದಿಂದ ಮಹತ್ವದ ಆದೇಶ

1 Min Read

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

1 Min Read

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

1 Min Read
Recent News

BIG NEWS : ರಾಜ್ಯದಲ್ಲಿ `ವಿವಾಹ ನೋಂದಣಿಗೆ’ ಆಧಾರ್ ಕಾರ್ಡ್ ವಯಸ್ಸಿನ ದಾಖಲೆಯಲ್ಲ : ಸರ್ಕಾರದಿಂದ ಮಹತ್ವದ ಆದೇಶ

BIG NEWS : ಸರ್ಕಾರಿ ಉದ್ಯೋಗಗಳ ನೇಮಕಾತಿ ಪ್ರಕ್ರಿಯೆ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Government Jobs Recruitment

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

State News
KARNATAKA

BIG NEWS : ರಾಜ್ಯದಲ್ಲಿ `ವಿವಾಹ ನೋಂದಣಿಗೆ’ ಆಧಾರ್ ಕಾರ್ಡ್ ವಯಸ್ಸಿನ ದಾಖಲೆಯಲ್ಲ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಬಾಲ್ಯ ವಿವಾಹಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ವಿವಾಹ ನೋಂದಣಿ ಸಮಯದಲ್ಲಿ…

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.