Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕೂದಲು’ ತುಂಬ ಉದುರುತ್ತಿದ್ಯಾ.? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ.!

04/06/2025 9:00 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

Optical illusion : ನೀವು ಬುದ್ಧಿವಂತರಾ.? ಹಾಗಿದ್ರೆ, 5 ಸೆಕೆಂಡಿನಲ್ಲಿ ಕಾಡಿನಲ್ಲಿ ಅಡಗಿರುವ ಮೊಲ ಹುಡುಕಿ

04/06/2025 8:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನವರಿ 24 ರಿಂದ 28 ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ ಸ್ಟ್ರೀಟ್ ಫುಡ್ ಫಿಯೆಸ್ಟ-ಸೀಸನ್-2
KARNATAKA

ಜನವರಿ 24 ರಿಂದ 28 ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ ಸ್ಟ್ರೀಟ್ ಫುಡ್ ಫಿಯೆಸ್ಟ-ಸೀಸನ್-2

By KNN IT Team23/01/2024 6:33 PM

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ಮಾರ್ಗದರ್ಶನದಲ್ಲಿ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-2 ಇದೇ 2024ರ ಜನವರಿ 24 ರಿಂದ 28ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ.

ಜನವರಿ 24ರ ಸಂಜೆ 7 ಗಂಟೆಗೆ ಸೀಸನ್-2ಗೆ ಅಧಿಕೃತ ಚಾಲನೆ ದೊರೆಯಲಿದೆ. ಕಳೆದ ವರ್ಷದ ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ” ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನಮನ್ನಣೆ ಪಡೆದು ಅತ್ಯಂತ ಯಶಸ್ವಿಯಾಗಿತ್ತು. ಆ ಯಶಸ್ಸೇ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ -2 ಗೆ ಪ್ರೇರಣೆಯಾಗಿದ್ದು ಈಗಾಗಲೇ ಸಾರ್ವಜನಿಕ ವಲಯದಿಂದ ಅತ್ಯುತ್ತಮ ಸ್ಪಂದನೆ ಹಾಗೂ ನಿರೀಕ್ಷೆ ಲಭಿಸಿದೆ. “ಕರಾವಳಿ ವಸ್ತು ಪ್ರದರ್ಶನ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವ” ದವರೆಗೆ ಪ್ರತಿ ನಿತ್ಯ ಸಂಜೆ 4 ರಿಂದ ರಾತ್ರಿ 10.30 ರವರೆಗೆ, ಹಾಗೆಯೇ ಕೊನೆಯ ಮೂರು ದಿನ ಅಂದರೆ ಶುಕ್ರವಾರ ಶನಿವಾರ ಮತ್ತು ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10.30 ತನಕ ನಡೆಯಲಿದೆ. ಸ್ಟ್ರೀಟ್ ಫುಡ್ ಫಿಯೆಸ್ಟಾ ನಡೆಯಲಿರುವ ಸ್ಥಳಗಳಲ್ಲಿ ಮಳಿಗೆ ನಿರ್ಮಾಣ ಸಹಿತ ಎಲ್ಲಾ ತಯಾರಿಗಳು ಬಹುತೇಕ ಪೂರ್ಣಗೊಂಡಿದ್ದು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ -2 ನಲ್ಲಿ ಭಾಗವಹಿಸಲು ಆನ್ಲೈನ್ ನಲ್ಲಿ ನೋಂದಣಿಯಾಗಿದ್ದ ಹೆಚ್ಚಿನ ಸಂಖ್ಯೆಯ ಮಳಿಗೆಗಳಿಂದ 160 ಸಂಖ್ಯೆಯ ವಿಶೇಷ ಆಹಾರ ಮಳಿಗೆಗಳನ್ನು ಅಂತಿಮಗೊಳಿಸಲಾಗಿದೆಯಾಗಿದೆ.

ಸ್ಟ್ರೀಟ್ ಫುಡ್ ಫಿಯೆಸ್ಟಾ ಸೀಸನ್-2 ನಲ್ಲಿ ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೇ, ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ, ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ. ಈ ಬಾರಿ ಫುಡ್ ಫಿಯೆಸ್ಟಾದಲ್ಲಿ ಡಿಜಿಟಲ್ ವಹಿವಾಟಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಗ್ರಾಹಕರು ಹಾಗೂ ಮಳಿಗೆದಾರರ ನಡುವೆ ನಗದು ಅಥವಾ ಕ್ಯಾಶ್ ರೂಪದ ವ್ಯವಹಾರಕ್ಕಿಂತ ಎಲ್ಲಾ ಮಳಿಗೆದಾರರಿಗೂ ನೀಡಲಾಗಿರುವ ಪ್ರತ್ಯೇಕ ಕ್ಯೂಆರ್ ಕೋಡ್ ಸ್ಕ್ಯಾನ್ ಬಳಸಲು ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಸಂಪೂರ್ಣ ಡಿಜಿಟಲ್ ವಹಿವಾಟು ಭವಿಷ್ಯದ ಭಾರತದ ಮುನ್ನೋಟವಾಗಿದ್ದು ಜನರನ್ನು ಆ ನಿಟ್ಟಿನಲ್ಲಿ ಪ್ರೇರೇಪಿಸುವ ಪ್ರಯತ್ನವೂ ಇದಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತಿರಲು ಈ ಬಾರಿ ಕ್ರಮಬದ್ಧವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು ಕೊಟ್ಟಾರ ಚೌಕಿ ಕಡೆಯಿಂದ ಬರುವ ವಾಹನಗಳಿಗೆ ಉರ್ವ ಚರ್ಚ್ ಆವರಣ, ಉರ್ವ ಆಟದ ಮೈದಾನ, ಹಾಗೂ ಲೇಡಿಹಿಲ್ ವಿಕ್ಟೋರಿಯಾ ಕಾಂಪೋಸಿಟ್ ಪಿಯು ಕಾಲೇಜು ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಲಾಲ್ ಬಾಗ್ ಕಡೆಯಿಂದ ಬರುವ ವಾಹನಗಳಿಗೆ ಕೆನರಾ ಉರ್ವ ಶಾಲೆಯ ಆವರಣ ಮತ್ತು ಕರಾವಳಿ ಉತ್ಸವ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ನಿಗದಿತ ಸ್ಥಳಗಳಲ್ಲದೇ, ರಸ್ತೆಯ ಬದಿಯಲ್ಲಿ ಎಲ್ಲಿಯೂ ವಾಹನ ಪಾರ್ಕಿಂಗ್ ಮಾಡದೇ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಆಯೋಜಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇನ್ನುಳಿದಂತೆ ಕಳೆದ ಬಾರಿ ಇದ್ದಂತಹ ಹತ್ತು ಹಲವು ಮನರಂಜನಾ ಕಾರ್ಯಕ್ರಮಗಳು ಈ ಬಾರಿಯೂ ಸಹ ಇರಲಿದ್ದು ಮಕ್ಕಳ ಆಟದ ಜೋನ್ ಗೆ ವಿಶೇಷ ಪ್ರಾಧಾನ್ಯತೆ ನೀಡಲಾಗಿದ್ದು, ಉತ್ಸವದ ಸಮಯದಲ್ಲಿ ಹಲವು ವೇದಿಕೆಗಳಲ್ಲಿ ಏಕಕಾಲಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾನ್ವಿತರಿಗಾಗಿ “ನಮ್ಮ ವೇದಿಕೆ- ನಿಮ್ಮ ಪ್ರತಿಭೆ”, ಸೆಲ್ಫಿ ಕೌಂಟರ್, ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವವನ್ನು ವೇದಿಕೆಗಳಲ್ಲಿ ಆಚರಿಸಲು ಅವಕಾಶವಿದೆಯಾಗಿದೆ. ಈ ಸುದ್ದಿಗೋಷ್ಠಿಯಲ್ಲಿ ಶಾಸಕ ವೇದವ್ಯಾಸ್ ಕಾಮತ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಉದಯ ಪೂಜಾರಿ, ಯತೀಶ್ ಬೈಕಂಪಾಡಿ, ಡಾ.ರಾಘವೇಂದ್ರ ಹೊಳ್ಳ ಹಾಗೂ ಮತ್ತಿತರರು ಉಪಸ್ಥಿತರಿದ್ದರಾಗಿದೆ.

Share. Facebook Twitter LinkedIn WhatsApp Email

Related Posts

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM2 Mins Read

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM2 Mins Read

BIG NEWS: ನಿರೀಕ್ಷೆಗೂ ಮೀರಿ ಜನರು ಬಂದಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ಧರಾಮಯ್ಯ

04/06/2025 8:37 PM1 Min Read
Recent News

‘ಕೂದಲು’ ತುಂಬ ಉದುರುತ್ತಿದ್ಯಾ.? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ.!

04/06/2025 9:00 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

Optical illusion : ನೀವು ಬುದ್ಧಿವಂತರಾ.? ಹಾಗಿದ್ರೆ, 5 ಸೆಕೆಂಡಿನಲ್ಲಿ ಕಾಡಿನಲ್ಲಿ ಅಡಗಿರುವ ಮೊಲ ಹುಡುಕಿ

04/06/2025 8:43 PM

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM
State News
KARNATAKA

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

By kannadanewsnow0904/06/2025 8:50 PM KARNATAKA 2 Mins Read

ಬೆಂಗಳೂರು : “ಈ ದುರ್ಘಟನೆ ಆಗಬಾರದಿತ್ತು ಆಗಿದೆ. ನಾವು ಮುಂಜಾಗೃತಾ ಕ್ರಮವಾಗಿ ಮೆರವಣಿಗೆಯನ್ನು ರದ್ದು ಮಾಡಿದ್ದೆವು. ಈ ದುರ್ಘಟನೆ ನಡೆದಿರುವುದಕ್ಕೆ…

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM

BIG NEWS: ನಿರೀಕ್ಷೆಗೂ ಮೀರಿ ಜನರು ಬಂದಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ಧರಾಮಯ್ಯ

04/06/2025 8:37 PM

ನೀವು ಕಣ್ಣು ಮುಚ್ಚಿ ಈ ಸಂಖ್ಯೆ ಕೇವಲ 27 ಬಾರಿ ಹೇಳಿ, ನೀವು ಅಂದುಕೊಂಡಿದ್ದು ಆಗುತ್ತೆ

04/06/2025 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.