Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM

ವಾಹನಗಳಲ್ಲಿ ವಿ2ವಿ ಸಂವಹನ ಸಾಧನಗಳನ್ನು ಕಡ್ಡಾಯಗೊಳಿಸಲಿರುವ ಕೇಂದ್ರ ಸರ್ಕಾರ

10/01/2026 9:12 AM

ಗ್ರೀನ್ ಲ್ಯಾಂಡ್ ಅನ್ನು ‘ಕಠಿಣ ಮಾರ್ಗದಲ್ಲಿ’ ತೆಗೆದುಕೊಳ್ಳುವುದಾಗಿ ಟ್ರಂಪ್ ಬೆದರಿಕೆ !

10/01/2026 9:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶ ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದಾಗ ಸರಿದಾರಿಗೆ ತಂದಿದ್ದು ಮನಮೋಹನ್ ಸಿಂಗ್: HDD ಗುಣಗಾನ
KARNATAKA

ದೇಶ ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದಾಗ ಸರಿದಾರಿಗೆ ತಂದಿದ್ದು ಮನಮೋಹನ್ ಸಿಂಗ್: HDD ಗುಣಗಾನ

By kannadanewsnow0927/12/2024 4:00 PM

ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಮರ್ಪಣೆ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದು ಅತ್ಯಂತ ದುಃಖದ ದಿನ. ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ನಾನು ಮನಮೋಹನ್ ಸಿಂಗ್ ಅವರನ್ನು ನೋಡಿದ್ದು 1991ರಲ್ಲಿ, ಲೋಕಸಭೆಯಲ್ಲಿ. ನಾನು ಕೂಡ ಮೊದಲ ಬಾರಿಗೆ ಲೋಕಸಭೆಗೆ ಹೋಗಿದ್ದೆ. ಅವರು ಪಿ.ವಿ.ನರಸಿಂಹ ರಾವ್ ಸರಕಾರದಲ್ಲಿ ಆರ್ಥಿಕ ಸಚಿವರಾಗಿದ್ದರು. ನಮ್ಮ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಸರಿಪಡಿಸಲು ಅನೇಕ ಪ್ರಯತ್ನಗಳನ್ನು ಮಾಡಿದರು. ಆ ಸಂದರ್ಭದಲ್ಲಿ ಆರ್ಥಿಕವಾಗಿ ದೇಶದ ಸ್ಥಿತಿ ಬಹಳ ಹದಗೆಟ್ಟಿತ್ತು. ಅದಕ್ಕೂ ಹಿಂದೆ 130 ಟನ್ ಚಿನ್ನವನ್ನು ಒತ್ತೆ ಇಡಲಾಗಿತ್ತು. ಅಂತಹ ಭೀಕರ ಪರಿಸ್ಥಿತಿ ಇತ್ತು. ಆ ಸನ್ನಿವೇಶದಲ್ಲಿ ಮನಮೋಹನ್ ಸಿಂಗ್ ಆರ್ಥಿಕ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರು ಎಂದು ಮಾಜಿ ಪ್ರಧಾನಿಗಳು ನೆನಪು ಮಾಡಿಕೊಂಡರು.

ಮನಮೋಹನ್ ಸಿಂಗ್ ಅವರನ್ನು ನಾನು ಬಹಳ ಟೀಕೆ ಮಾಡಿದ್ದೆ. ಅವರ ನೀತಿಗಳನ್ನು ಪ್ರಶ್ನೆ ಮಾಡಿದ್ದೆ. ಖಾಸಗೀಕರಣ, ವಿದೇಶದಿಂದ ಹಣ ಬರಲು ನಮ್ಮ ದೇಶದ ಆರ್ಥಿಕ ನೀತಿಗಳನ್ನು ಮಾರ್ಪಾಡು ಮಾಡಿ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದರು. ಇದು ಬಹಳ ದೊಡ್ಡ ಬೆಳವಣಿಗೆ ಎಂದು ಮಾಜಿ ಪ್ರಧಾನಿಗಳು ಬಣ್ಣಿಸಿದರು.

ಮನಮೋಹನ್ ಸಿಂಗ್ ಅವರು ಸರಳ ಸಜ್ಜನ ಪ್ರಾಮಾಣಿಕ ವ್ಯಕ್ತಿ ಆಗಿದ್ದವರು. ನಾವು ಪಕ್ಷ ರಾಜಕಾರಣವನ್ನು ಹೊರತುಪಡಿಸಿ ಅವರನ್ನು ನೆನೆಯುತ್ತಿದ್ದೇವೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ನಮ್ಮ ಪಕ್ಷದ ಪರವಾಗಿ, ವೈಯಕ್ತಿಕವಾಗಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ ಎಂದರು ಅವರು.

ನರಸಿಂಹರಾವ್ ಸರಕಾರದಲ್ಲಿ ಈ ದೇಶದ ಗೌರವ ಉಳಿಸಲು ಆರ್ಥಿಕ ತಜ್ಞರಾಗಿ ಮನಮೋಹನ್ ಸಿಂಗ್ ಅವರು ಸೇವೆ ಸಲ್ಲಿಸಿದ್ದರು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದೇಶವನ್ನು ಪಾರು ಮಾಡಿ ಗೌರವ ಉಳಿಸಿದ್ದು ಅವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಹೇಳುತ್ತ ಮಾಜಿ ಪ್ರಧಾನಿಗಳು ಗದ್ಗದಿತರಾದರು.

ದೇಶಕ್ಕೆ ಮನಮೋಹನ್ ಸಿಂಗ್ ಅವರು ಸುಧೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಮುತ್ಸದಿ ರಾಜಕಾರಣಿ ಹಿರಿಯ ರಾಜಕಾರಣಿ 92 ವಯಸ್ಸಲ್ಲಿ ಅಗಲಿದ್ದಾರೆ. ವಯಕ್ತಿಕ ನನಗೆ ತುಂಬಾ ಬೇಸರವಾಗಿದೆ. ಅವರ ಆತ್ಮಕ್ಕೆ ಭಗವಂತ ಮೋಕ್ಷ ಕೊಡಲಿ, ಪರಮಾತ್ಮ ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಭಾವುಕರಾದರು.

ದೇಶದಲ್ಲಿ ಯಾವುದೇ ಸರಕಾರಿ ಕಾರ್ಯಕ್ರಮ ಮಾಡಬಾರದು. ಶೋಕಾಚರಣೆ ಇದೆ. ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಕೊಡಬೇಕು. ಅವರು ನಮ್ಮ ದೇಶಕ್ಕೆ ಸುಧೀರ್ಘ ಸೇವೆ ಸಲ್ಲಿಸಿದ್ದಾರೆ. ಮುತ್ಸದಿ ರಾಜಕಾರಣಿ ಹಿರಿಯ ರಾಜಕಾರಣಿ ತಮ್ಮ 92ನೇ ವಯಸ್ಸಿನಲ್ಲಿ ನಮ್ಮನ್ನೆಲ್ಲಾ ಅಗಲಿದ್ದಾರೆ ದೇವೇಗೌಡರು ಹೇಳಿದರು.

ಅವರು ಜಾರಿ ಮಾಡಿದ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ ನೀತಿಗಳ ಮೂಲಕ ದೇಶಕ್ಕೆ ವಿದೇಶಿ ನೇರ ಬಂಡವಾಳ ದೊಡ್ಡ ಪ್ರಮಾಣದಲ್ಲಿ ಹರಿದು ಬಂತು. ಹಣಕಾಸು ಸಚಿವರಾಗಿ ಬರುವುದಕ್ಕೆ ಮೊದಲು ಅವರು ಜಾಗತಿಕ ಮಟ್ಟದಲ್ಲಿ ಕೆಲಸ ಮಾಡಿದ್ದರು. ಹೀಗಾಗಿ ಅಲ್ಲಿ ಬಹಳ ದೊಡ್ಡ ಅನುಭವ ಗಳಿಸಿಕೊಂಡರು. ಆರ್ಥಿಕ ವಿಚಾರದಲ್ಲಿ ಅವರು ತುಂಬಾ ಬುದ್ದಿವಂತರಾಗಿದ್ದರು ಎಂದು ದೇವೇಗೌಡರು ಮನಮೋಹನ್ ಸಿಂಗ್ ಅವರನ್ನು ಸ್ಮರಿಸಿದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಲಿಂಗೇಶ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಇಬ್ಬರು ಪೊಲೀಸರು ಸಸ್ಪೆಂಡ್

BREAKING: ಕರ್ತವ್ಯದ ವೇಳೆಯಲ್ಲೇ ‘ಬ್ರೈನ್ ಸ್ಟ್ರೋಕ್’ನಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರ ಸಾವು

Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM1 Min Read

SHOCKING : ಉಪನ್ಯಾಸಕನಿಂದ ಅಪಹಾಸ್ಯ : ಬೆಂಗಳೂರಲ್ಲಿ `ಡೆಂಟಲ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.!

10/01/2026 8:18 AM1 Min Read

SHOCKING : ಬೆಂಗಳೂರಿನಲ್ಲಿ `ಆಘಾತಕಾರಿ ಕೃತ್ಯ’ : ಹಾಡಹಗಲೇ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ‘ಡೆಲಿವರಿ ಬಾಯ್’.!

10/01/2026 7:48 AM1 Min Read
Recent News

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM

ವಾಹನಗಳಲ್ಲಿ ವಿ2ವಿ ಸಂವಹನ ಸಾಧನಗಳನ್ನು ಕಡ್ಡಾಯಗೊಳಿಸಲಿರುವ ಕೇಂದ್ರ ಸರ್ಕಾರ

10/01/2026 9:12 AM

ಗ್ರೀನ್ ಲ್ಯಾಂಡ್ ಅನ್ನು ‘ಕಠಿಣ ಮಾರ್ಗದಲ್ಲಿ’ ತೆಗೆದುಕೊಳ್ಳುವುದಾಗಿ ಟ್ರಂಪ್ ಬೆದರಿಕೆ !

10/01/2026 9:08 AM

SHOCKING : ಹೃದಯವಿದ್ರಾವಕ ಘಟನೆ : 10 ತಿಂಗಳ ಮಗುವಿಗೆ ವಿಷ ಕುಡಿಸಿ, ನೇಣುಬಿಗಿದುಕೊಂಡು ತಾಯಿ ಆತ್ಮಹತ್ಯೆ.!

10/01/2026 9:00 AM
State News
KARNATAKA

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

By kannadanewsnow5710/01/2026 9:40 AM KARNATAKA 1 Min Read

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ…

SHOCKING : ಉಪನ್ಯಾಸಕನಿಂದ ಅಪಹಾಸ್ಯ : ಬೆಂಗಳೂರಲ್ಲಿ `ಡೆಂಟಲ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.!

10/01/2026 8:18 AM

SHOCKING : ಬೆಂಗಳೂರಿನಲ್ಲಿ `ಆಘಾತಕಾರಿ ಕೃತ್ಯ’ : ಹಾಡಹಗಲೇ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ‘ಡೆಲಿವರಿ ಬಾಯ್’.!

10/01/2026 7:48 AM

SHOCKING : ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: `ಡೆಲಿವರಿ ಬಾಯ್’ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | Watch Video

10/01/2026 7:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.