ಕೊಲ್ಲಾಪುರ: ಕೊಲ್ಹಾಪುರ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮರಾಠಿ ಕಿರುತರೆ ನಟಿ ಕಲ್ಯಾಣಿ ಕುರಾಳೆ-ಜಾಧವ್ (32) ಸಾವನ್ನಪ್ಪಿದ್ದಾರೆ.
BREAKING NEWS : ಪಾಕ್ ಮಣಿಸಿ 2ನೇ ಬಾರಿ ‘ಟಿ20 ವಿಶ್ವಕಪ್’ ಗೆದ್ದಇಂಗ್ಲೆಂಡ್ |T20 world cup
ಮನೆಗೆ ತೆರಳುತ್ತಿದ್ದ ವೇಳೆ ನಟಿಯ ಸ್ಕೂಟಗೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಕಲ್ಯಾಣಿ ಕುರಾಳೆ-ಜಾಧವ್ ಅವರು ‘ತುಜ್ಯಹತ್ ಜೀವ್ ರಂಗಾ’ ಮರಾಠಿ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದರು. ಸಾಂಗ್ಲಿ-ಕೊಲ್ಹಾಪುರ ಹೆದ್ದಾರಿಯ ಹಾಲೊಂಡಿ ಛೇದನದ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟ್ರ್ಯಾಕ್ಟರ್ ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೊಲ್ಲಾಪುರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸಂಸತ್ ಮುಂದೆ ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಿಸಿ- ವಾಟಾಳ್ ನಾಗರಾಜ್ ಒತ್ತಾಯ