Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

14/01/2026 6:02 AM

ALERT : ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ `ಗುಡ್ ಟಚ್- ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಹೇಳಿಕೊಡಿ | WATCH VIDEO

14/01/2026 6:00 AM

ರಾಜ್ಯದಲ್ಲಿ `ಪಡಿತರ ಚೀಟಿ’ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : 3 ಲಕ್ಷ ಹೊಸ `ರೇಷನ್ ಕಾರ್ಡ್’ ವಿತರಣೆ.!

14/01/2026 5:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ಅರಣ್ಯಾಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: 6 ಎಕರೆ 24 ಗುಂಟೆ ಅರಣ್ಯ ಭೂಮಿ ಒತ್ತುವರಿ ತೆರವು
KARNATAKA

ಸಾಗರದ ಅರಣ್ಯಾಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: 6 ಎಕರೆ 24 ಗುಂಟೆ ಅರಣ್ಯ ಭೂಮಿ ಒತ್ತುವರಿ ತೆರವು

By kannadanewsnow0905/10/2025 5:21 PM

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ಹೋಬಳಿಯಲ್ಲಿ ಆರ್.ಎಂ ಷಣ್ಮುಖ ಎಂಬುವರು ಒತ್ತುವರಿ ಮಾಡಿಕೊಂಡಿದ್ದಂತ 6 ಎಕರೆ 24 ಗುಂಟೆ ಅರಣ್ಯ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಪಡೆಯುವಲ್ಲಿ ಸಾಗರದ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸಾಗರದ ಅರಣ್ಯಾಧಿಕಾರಿಗಳ ತಂಡವು ಭರ್ಜರಿ ಕಾರ್ಯಾಚರಣೆ ನಡೆಸಿ 6 ಎಕರೆ 24 ಗುಂಟೆ ಅರಣ್ಯ ಭೂಮಿಯನ್ನು ಒತ್ತುವರಿ ತೆರವುಗೊಳಿಸಿ, ಮರಳಿ ಇಲಾಖೆಗೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾಗರ ವಿಭಾಗ ವ್ಯಾಪ್ತಿಗೆ ಬರುವ ಸಾಗರ ತಾಲ್ಲೂಕು ಆನಂದಪುರಂ ಹೋಬಳಿ ಮಲಂದೂರು ಗ್ರಾಮದ ಸ.ನಂ 157 ರಲ್ಲಿ ಆರ್.ಎಂ ಷಣ್ಮುಖ ಬಿನ್ ಮಂಜಪ್ಪ ಗೌಡ ಇವರು ಮಲಂದೂರು ಮೀಸಲು ಅರಣ್ಯ ಪ್ರದೇಶದಲ್ಲಿ 6-24 ಎ/ಗುಂ ಪ್ರದೇಶವನ್ನು ಅನಧಿಕೃತವಾಗಿ ಒತ್ತುವರಿ ಮಾಡಿರುತ್ತಾರೆ. ಸದರಿಯವರು ಶರಾವತಿ ಮುಳುಗಡೆ ಸಂತ್ರಸ್ತರ ಯೋಜನೆಯಡಿ ಹಾಗೂ ಅರಣ್ಯ ಹಕ್ಕು ಕಾಯ್ದೆಯಡಿ ಇವರು ಜಮೀನುಗಳನ್ನು ಮಂಜೂರಾತಿ ಪಡೆದಿದ್ದು, ಇದರೊಂದಿಗೆ ಹಿಡುವಳಿ ಜಮೀನುಗಳನ್ನು ಹೊಂದಿರುವಂತೆ ದೊಡ್ಡ ಹಿಡುವಳಿದಾರರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ಅರಣ್ಯ ಒತ್ತುವರಿಯನ್ನು ಕರ್ನಾಟಕ ಅರಣ್ಯ ಅಧಿನಿಯಮ 1963 ಕಲಂ 64(ಎ) ರ ಪ್ರಕಾರ ವಿಚಾರಣೆ ಕೈಗೊಂಡು ಒತ್ತುವರಿ ತೆರವಿಗೆ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಸದರಿ ಒತ್ತುವರಿ ಪ್ರದೇಶವನ್ನು ದಿನಾಂಕ:05.10.2025 ರಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ. ರವಿ,ಚೋರಡಿ ಆನಂದಪುರ ವಲಯ ಅರಣ್ಯಾಧಿಕಾರಿ ಗೀತಾ ವಿ ನಾಯ್ಕ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಶಿಕಾರಿಪುರ ಉಪ ವಿಭಾಗ ಹಾಗೂ ವಲಯ ಅರಣ್ಯಾಧಿಕಾರಿ, ಸಾಗರ, ಹೊಸನಗರ, ನಗರ, ಶಿಕಾರಿಪುರ, ಅಂಬ್ಲಿಗೊಳ ಮತ್ತು ಶಿರಾಳಕೊಪ್ಪ ವಲಯ ಹಾಗೂ ವಿಭಾಗದ ಎಲ್ಲಾ ವಲಯಗಳ ಸಿಬ್ಬಂದಿಗಳೊಂದಿಗೆ ತೆರಳಿ ತೆರವುಗೊಳಿಸಲಾಗಿದೆ.

ಅಲ್ಲದೇ ಸಾಗರ ತಹಶೀಲ್ದಾರ್ ಮತ್ತು ಸಿಬ್ಬಂದಿ, ವೃತ್ತ ಆರಕ್ಷಕ ನೀರೀಕ್ಷಕರು, ಗ್ರಾಮಾಂತರ ಠಾಣಾ ಸಾಗರ, ಆರಕ್ಷಕ ಉಪ ನಿರೀಕ್ಷಕರು, ಆರಕ್ಷಕ ಠಾಣೆ ಆನಂದಪುರಂ ಮತ್ತು ಸಿಬ್ಬಂದಿ ಹಾಗೂ ವೈದ್ಯಾಧಿಕಾರಿಗಳು, ಆನಂದಪುರಂ ಮತ್ತು ಸಿಬ್ಬಂದಿ ಹಾಗೂ ಅಗ್ನಿಶಾಮಕದಳ ಸಾಗರ ಮತ್ತು ಸಿಬ್ಬಂದಿಯವರ ಸಹಯೋಗದೊಂದಿಗೆ ಒತ್ತುವರಿ ತೆರವು ಕಾರ್ಯವನ್ನು ಕೈಗೊಂಡು ಪೂರ್ಣಗೊಳಿಸಲಾಗಿದೆ. ಸದರಿ ಒತ್ತುವರಿ ಪ್ರದೇಶವನ್ನು ಕಾನೂನು ಪ್ರಕಾರ ಅರಣ್ಯ ಇಲಾಖಾ ವಶಕ್ಕೆ ಪಡೆಯಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನೂ ಸಾಗರ ತಾಲ್ಲೂಕು ಆನಂದಪುರಂ ಹೋಬಳಿ ಮಲಂದೂರು ಗ್ರಾಮದ ಸ.ನಂ 157 ರಲ್ಲಿ ಆರ್.ಎಂ ಷಣ್ಮುಖ ಬಿನ್ ಮಂಜಪ್ಪ ಗೌಡ ಇವರು ಮಲಂದೂರು ಮೀಸಲು ಅರಣ್ಯ ಪ್ರದೇಶದಲ್ಲಿ 6-24 ಎ/ಗುಂ ಪ್ರದೇಶದ ಸುತ್ತಲೂ ಟ್ರಂಚ್ ಹೊಡೆಯಲಾಗಿದೆ. ಇದು ಅರಣ್ಯ ಭೂಮಿ ಎಂಬುದಾಗಿ ನಾಮಫಲಕವನ್ನು ಅಳವಡಿಸಲಾಗಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ…, ಸಂಪಾದಕರು

Share. Facebook Twitter LinkedIn WhatsApp Email

Related Posts

BIG NEWS : ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

14/01/2026 6:02 AM1 Min Read

ALERT : ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ `ಗುಡ್ ಟಚ್- ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಹೇಳಿಕೊಡಿ | WATCH VIDEO

14/01/2026 6:00 AM2 Mins Read

ರಾಜ್ಯದಲ್ಲಿ `ಪಡಿತರ ಚೀಟಿ’ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : 3 ಲಕ್ಷ ಹೊಸ `ರೇಷನ್ ಕಾರ್ಡ್’ ವಿತರಣೆ.!

14/01/2026 5:55 AM1 Min Read
Recent News

BIG NEWS : ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

14/01/2026 6:02 AM

ALERT : ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ `ಗುಡ್ ಟಚ್- ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಹೇಳಿಕೊಡಿ | WATCH VIDEO

14/01/2026 6:00 AM

ರಾಜ್ಯದಲ್ಲಿ `ಪಡಿತರ ಚೀಟಿ’ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : 3 ಲಕ್ಷ ಹೊಸ `ರೇಷನ್ ಕಾರ್ಡ್’ ವಿತರಣೆ.!

14/01/2026 5:55 AM

ಮಹಿಳೆಯರೇ ಗಮನಿಸಿ : ನೀವು ಮನೆಯಲ್ಲಿ ಎಷ್ಟು `ಚಿನ್ನ’ ಇಟ್ಟುಕೊಳ್ಳಬಹುದು ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

14/01/2026 5:45 AM
State News
KARNATAKA

BIG NEWS : ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0914/01/2026 6:02 AM KARNATAKA 1 Min Read

ಮೈಸೂರು: ರಾಜ್ಯ ಬಜೆಟ್ ಅನ್ನು ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನ ಏರ್…

ALERT : ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ `ಗುಡ್ ಟಚ್- ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಹೇಳಿಕೊಡಿ | WATCH VIDEO

14/01/2026 6:00 AM

ರಾಜ್ಯದಲ್ಲಿ `ಪಡಿತರ ಚೀಟಿ’ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : 3 ಲಕ್ಷ ಹೊಸ `ರೇಷನ್ ಕಾರ್ಡ್’ ವಿತರಣೆ.!

14/01/2026 5:55 AM

ಮಹಿಳೆಯರೇ ಗಮನಿಸಿ : ನೀವು ಮನೆಯಲ್ಲಿ ಎಷ್ಟು `ಚಿನ್ನ’ ಇಟ್ಟುಕೊಳ್ಳಬಹುದು ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

14/01/2026 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.