Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೊಸ ಮಾದರಿಯ ‘ಡಿಜಿಟಲ್ ಅರೆಸ್ಟ್’: ಮುಂಬೈ ಮಹಿಳೆಯನ್ನು ಖುದ್ದಾಗಿ ಭೇಟಿಯಾಗಿ 60 ಲಕ್ಷ ರೂ. ಲೂಟಿ ಮಾಡಿದ ವಂಚಕರು!

13/04/2026 6:43 PM

ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ

13/04/2026 6:30 PM

​’21ನೇ ಶತಮಾನದ ಅತ್ಯಂತ ಮಹತ್ವದ ನಿರ್ಧಾರ’: ಮಹಿಳಾ ಮೀಸಲಾತಿ ಕುರಿತು ಪ್ರಧಾನಿ ಮೋದಿ ಬಣ್ಣನೆ!

13/04/2026 6:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ
KARNATAKA

ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ

By kannadanewsnow0913/04/2026 6:30 PM

ಬೆಂಗಳೂರು: ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳು 2026ರ ಏಪ್ರಿಲ್ 15, 18 ಹಾಗೂ 24ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಅನುಕೂಲಕರ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಏಪ್ರಿಲ್ 15 ಮತ್ತು 24ರ ರಾತ್ರಿ ಪಂದ್ಯಗಳ ದಿನಗಳಲ್ಲಿ ಮೆಟ್ರೋ ರೈಲು ಸೇವಾ ಅವಧಿಯನ್ನು ವಿಸ್ತರಿಸಲಾಗುತ್ತಿದೆ.

ಈ ದಿನಗಳಲ್ಲಿ, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಗಳು ರಾತ್ರಿ 11:00 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2:00 ಗಂಟೆಯವರೆಗೆ ವಿಸ್ತರಿಸಲಾಗಿದೆ.

 ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು ಕೆಳಗಿನ ವೇಳಾಪಟ್ಟಿಯಂತೆ ಹೊರಡಲಿವೆ:

ವೈಟ್‌ಫೀಲ್ಡ್ (ಕಾಡುಗೋಡಿ) ಯಿಂದ ರಾತ್ರಿ 12.30ಕ್ಕೆ ಮತ್ತು ಚೆಲ್ಲಘಟ್ಟ ದಿಂದ ರಾತ್ರಿ 12.45ಕ್ಕೆ.

ರೇಷ್ಮೆ ಸಂಸ್ಥೆ ಹಾಗೂ ಮಾದಾವರ ದಿಂದ ರಾತ್ರಿ 12.45ಕ್ಕೆ.

ಬೊಮ್ಮಸಂದ್ರ ದಿಂದ ರಾತ್ರಿ 12.30ಕ್ಕೆ ಹಾಗೂ ಆರ್.ವಿ. ರಸ್ತೆ ಯಿಂದ ರಾತ್ರಿ 02.00ಕ್ಕೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲು ಹೊರಡಲಿದೆ.

ದಿನಾಂಕ 18ನೇ ಏಪ್ರಿಲ್ 2026 ರಂದು ನಡೆಯಲಿರುವ ಹಗಲು ಹಾಗೂ ರಾತ್ರಿ ಕ್ರಿಕೆಟ್ ಪಂದ್ಯದ ದಿನದಂದು ಮೆಟ್ರೋ ರೈಲು ಸೇವೆಗಳ ಅವಧಿಯಲ್ಲಿ ಯಾವುದೇ ವಿಸ್ತರಣೆ ಇರುವುದಿಲ್ಲ. ರೈಲುಗಳು ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.

ನಮ್ಮ ಮೆಟ್ರೋ ಪ್ರಯಾಣವನ್ನು ಸುಗಮಗೊಳಿಸಲು, ಎರಡು ಮಾರ್ಗಗಳ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಕ್ಯೂಆರ್ (QR) ಕೋಡ್ ಡಿಜಿಟಲ್ ಐಪಿಎಲ್ ಪಂದ್ಯದ ಟಿಕೆಟ್‌ಗಳಲ್ಲಿ ಒಳಗೊಂಡಿರುತ್ತದೆ.

ಕಬ್ಬನ್ ರಸ್ತೆ ಭಾಗದಿಂದ ಸ್ಟೇಡಿಯಂಗೆ ಪ್ರವೇಶ / ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಹಾಗೂ ಲಿಂಕ್ ರಸ್ತೆ ಭಾಗದಿಂದ ಪ್ರವೇಶ / ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಸಮೀಪದಲ್ಲಿರುವ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಸೂಚಿಸಲಾಗಿದೆ.

ಪಂದ್ಯದ ದಿನದಂದು ಪ್ರೇಕ್ಷಕರಿಗೆ ಅನುಕೂಲವಾಗಲು ಮತ್ತು ನಮ್ಮ ಮೆಟ್ರೋದಲ್ಲಿ ಸುಗಮ ಪ್ರಯಾಣವನ್ನು ಖಚಿತಪಡಿಸಲು, ಬಿಎಂಆರ್‌ಸಿಎಲ್ ಅನೇಕ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿದೆ. ಪಂದ್ಯದ ದಿನಗಳಲ್ಲಿ ಮೆಟ್ರೋ ನಿಲ್ದಾಣಗಳ ಪಾರ್ಕಿಂಗ್ ಸೌಲಭ್ಯವನ್ನು ಎರಡು ಚಕ್ರ ವಾಹನಗಳಿಗೆ ರೂ. 30/- ಮತ್ತು ಕಾರುಗಳಿಗೆ ರೂ. 60/- ನಿಗದಿತ ದರದಲ್ಲಿ ಒದಗಿಸಲಾಗುತ್ತದೆ. ಈ ದರವು ಆ ದಿನದ ಮೆಟ್ರೋ ಸೇವೆ ಮುಕ್ತಾಯವಾಗುವವರೆಗೆ ಮಾನ್ಯವಾಗಿರುತ್ತದೆ. (ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಿರುವ ನಿಲ್ದಾಣದ ವಿವರಗಳು ಅನುಬಂಧದಲ್ಲಿ ಲಭ್ಯವಿದೆ).

ಪ್ರೇಕ್ಷಕರು ತಮ್ಮ ವಾಹನಗಳನ್ನು ನಿಗದಿತ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿ, ಮೆಟ್ರೋ ಮೂಲಕ ಸ್ಟೇಡಿಯಂಗೆ ನಡೆದು ಹೋಗಬಹುದಾದ ಅಂತರದಲ್ಲಿರುವ ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣಿಸುವಂತೆ ಸಲಹೆ ನೀಡಲಾಗಿದೆ. ಇದರಿಂದ ಕೇಂದ್ರ ವ್ಯವಹಾರ ಪ್ರದೇಶ (ಸಿಬಿಡಿ) ಹಾಗೂ ಸ್ಟೇಡಿಯಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲು ಸಹಾಯವಾಗುತ್ತದೆ.

ಪ್ರಯಾಣಿಕರು ಸುಗಮ ಸಂಚಾರ, ಸುರಕ್ಷತೆ ಮತ್ತು ಜನಸಂದಣಿಯನ್ನು ತಪ್ಪಿಸಲು ಪೊಲೀಸ್, ಸ್ಟೇಡಿಯಂ ನಿರ್ವಹಣೆ ಮತ್ತು ಬಿಎಂಆರ್‌ಸಿಎಲ್ ಸಿಬ್ಬಂದಿಯ ನಿರ್ದೇಶನಗಳನ್ನು ಅನುಸರಿಸಲು ವಿನಂತಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಯಾವುದೇ ಅನಾಹುತಗಳು ಅಥವಾ ಅಹಿತಕರ ಘಟನೆಗಳನ್ನು ತಡೆಗಟ್ಟುವ ಹಿತದೃಷ್ಟಿಯಿಂದ, ಅಗತ್ಯವಿದ್ದಲ್ಲಿ ಮೆಟ್ರೋ ನಿಲ್ದಾಣಗಳ ಪ್ರವೇಶ ದ್ವಾರಗಳನ್ನು ನಿಯಂತ್ರಿಸುವ ಅಥವಾ ತಾತ್ಕಾಲಿಕವಾಗಿ ಮುಚ್ಚುವ ಹಕ್ಕನ್ನು ಬಿಎಂಆರ್‌ಸಿಎಲ್ ಹೊಂದಿರುತ್ತದೆ.

ಹೆಚ್ಚುವರಿ ವಾಹನ ಪಾರ್ಕಿಂಗ್‌ಗಾಗಿ ಗುರುತಿಸಲಾದ ಮೆಟ್ರೋ ನಿಲ್ದಾಣಗಳ ಪಟ್ಟಿ

ಕ್ರ.ಸಂ ಮೆಟ್ರೋ ನಿಲ್ದಾಣ ಕ್ರ.ಸಂ ಮೆಟ್ರೋ ನಿಲ್ದಾಣ
1 ವೈಟ್‌ಫೀಲ್ಡ್ (ಕಾಡುಗೋಡಿ) 23 ಚಿಕ್ಕಬಿದರಕಲ್ಲು
2 ಹೋಪ್ ಫಾರ್ಮ್ ಚನ್ನಸಂದ್ರ 24 ಮಂಜುನಾಥನಗರ
3 ಕಾಡುಗೋಡಿ ಟ್ರೀ ಪಾರ್ಕ್ 25 ನಾಗಸಂದ್ರ
4 ಪಟ್ಟಂದೂರು ಅಗ್ರಹಾರ 26 ಜಾಲಹಳ್ಳಿ
5 ನಲ್ಲೂರಳ್ಳಿ 27 ಮಹಾಲಕ್ಷ್ಮಿ
6 ಕುಂದಲಹಳ್ಳಿ 28 ಮಹಾಕವಿ ಕುವೆಂಪು ರಸ್ತೆ
7 ಸೀತಾರಾಮ ಪಾಳ್ಯ 29 ಶ್ರೀರಾಂಪುರ
8 ಹೂಡಿ 30 ಚಿಕ್ಕಪೇಟೆ
9 ಸಿಂಗಯ್ಯನಪಾಳ್ಯ 31 ನ್ಯಾಷನಲ್ ಕಾಲೇಜು
10 ಕೆ.ಆರ್. ಪುರ 32 ಲಾಲ್‌ಬಾಗ್
11 ಬೈಯಪ್ಪನಹಳ್ಳಿ (ಒಎಂಆರ್ ಭಾಗ) 33 ಜಯನಗರ
12 ಬೈಯಪ್ಪನಹಳ್ಳಿ (ಎನ್‌ಜಿಇಎಫ್ ಭಾಗ) 34 ಬನಶಂಕರಿ
13 ಎಸ್.ವಿ. ರಸ್ತೆ 35 ಯಲಚೇನಹಳ್ಳಿ
14 ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) 36 ದೊಡ್ಡಕಲ್ಲಸಂದ್ರ
15 ಸಿಟಿ ರೈಲ್ವೆ ನಿಲ್ದಾಣ 37 ಆರ್.ವಿ. ರಸ್ತೆ
16 ಹೊಸಹಳ್ಳಿ 38 ರಾಗಿಗುಡ್ಡ
17 ಮೈಸೂರು ರಸ್ತೆ 39 ಬಿಟಿಎಂ ಲೇಔಟ್
18 ನಾಯಂಡಹಳ್ಳಿ 40 ಸೆಂಟ್ರಲ್ ಸಿಲ್ಕ್ ಬೋರ್ಡ್
19 ಜ್ಞಾನಭಾರತಿ 41 ಇನ್ಫೋಸಿಸ್ ಫೌಂಡೇಶನ್ ಕೋನಪ್ಪನ ಅಗ್ರಹಾರ
20 ಕೆಂಗೇರಿ ಬಸ್ ಟರ್ಮಿನಲ್ 42 ಎಲೆಕ್ಟ್ರಾನಿಕ್ ಸಿಟಿ
21 ಚಲ್ಲಘಟ್ಟ 43 ಬಯೋಕಾನ್ ಹೆಬ್ಬಗೋಡಿ
22 ಮಾದಾವರ 44 ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ

ಪತ್ರಕರ್ತರ ಸಂಘಟನೆಗೆ ಶಿವಮೊಗ್ಗದ ‘ಡಬಲ್ ಇಂಜಿನ್’ ಬಲ: KUWJ ರಾಜ್ಯ ನಿರ್ದೇಶಕರಾಗಿ ಎನ್.ರವಿಕುಮಾರ್ ಟೆಲೆಕ್ಸ್ ಆಯ್ಕೆ!

ಅಕ್ಷಯ ತೃತೀಯ ದಿನದಂದು ಈ ಕುಬೇರನ ಗಂಟ್ಟು ಕಟ್ಟಿ ಯಾರಿಗೂ ತಿಳಿಯದಂತೆ ಇಡಿ, ನಿಮ್ಮ ಸಂಪತ್ತು ಸಂಮೃದ್ಧಿ

Share. Facebook Twitter LinkedIn WhatsApp Email

Related Posts

ಪತ್ರಕರ್ತರ ಸಂಘಟನೆಗೆ ಶಿವಮೊಗ್ಗದ ‘ಡಬಲ್ ಇಂಜಿನ್’ ಬಲ: KUWJ ರಾಜ್ಯ ನಿರ್ದೇಶಕರಾಗಿ ಎನ್.ರವಿಕುಮಾರ್ ಟೆಲೆಕ್ಸ್ ಆಯ್ಕೆ!

13/04/2026 6:05 PM2 Mins Read

ಪಂಚಮಸಾಲಿಗಳು ಪ್ರಬಲರಾಗುತ್ತಿರುವುದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ: ಉಚ್ಚಾಟನೆ ಬಳಿಕ ವಚನಾನಂದ ಶ್ರೀಗಳ ಆಕ್ರೋಶ

13/04/2026 5:57 PM2 Mins Read

BREAKING: 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ: ಹೀಗಿದೆ ರಾಜ್ಯದಲ್ಲಿ ಶಾಲೆ ಆರಂಭ ಮತ್ತು ರಜೆಗಳ ಸಂಪೂರ್ಣ ಪಟ್ಟಿ

13/04/2026 5:40 PM2 Mins Read
Recent News

ಹೊಸ ಮಾದರಿಯ ‘ಡಿಜಿಟಲ್ ಅರೆಸ್ಟ್’: ಮುಂಬೈ ಮಹಿಳೆಯನ್ನು ಖುದ್ದಾಗಿ ಭೇಟಿಯಾಗಿ 60 ಲಕ್ಷ ರೂ. ಲೂಟಿ ಮಾಡಿದ ವಂಚಕರು!

13/04/2026 6:43 PM

ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ

13/04/2026 6:30 PM

​’21ನೇ ಶತಮಾನದ ಅತ್ಯಂತ ಮಹತ್ವದ ನಿರ್ಧಾರ’: ಮಹಿಳಾ ಮೀಸಲಾತಿ ಕುರಿತು ಪ್ರಧಾನಿ ಮೋದಿ ಬಣ್ಣನೆ!

13/04/2026 6:18 PM

​ನೋಯ್ಡಾದಲ್ಲಿ ನಡುರಸ್ತೆಯಲ್ಲೇ ‘ಸಂಬಳ’ದ ಸಮರ: ಉಗ್ರರೂಪ ತಾಳಿದ ಕಾರ್ಮಿಕರ ಪ್ರತಿಭಟನೆ, ವಾಹನಗಳ ಧ್ವಂಸ!

13/04/2026 6:15 PM
State News
KARNATAKA

ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ

By kannadanewsnow0913/04/2026 6:30 PM KARNATAKA 3 Mins Read

ಬೆಂಗಳೂರು: ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳು 2026ರ ಏಪ್ರಿಲ್ 15, 18 ಹಾಗೂ 24ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಪ್ರಯಾಣಿಕರಿಗೆ ಸುರಕ್ಷಿತ…

ಪತ್ರಕರ್ತರ ಸಂಘಟನೆಗೆ ಶಿವಮೊಗ್ಗದ ‘ಡಬಲ್ ಇಂಜಿನ್’ ಬಲ: KUWJ ರಾಜ್ಯ ನಿರ್ದೇಶಕರಾಗಿ ಎನ್.ರವಿಕುಮಾರ್ ಟೆಲೆಕ್ಸ್ ಆಯ್ಕೆ!

13/04/2026 6:05 PM

ಪಂಚಮಸಾಲಿಗಳು ಪ್ರಬಲರಾಗುತ್ತಿರುವುದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ: ಉಚ್ಚಾಟನೆ ಬಳಿಕ ವಚನಾನಂದ ಶ್ರೀಗಳ ಆಕ್ರೋಶ

13/04/2026 5:57 PM

BREAKING: 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ: ಹೀಗಿದೆ ರಾಜ್ಯದಲ್ಲಿ ಶಾಲೆ ಆರಂಭ ಮತ್ತು ರಜೆಗಳ ಸಂಪೂರ್ಣ ಪಟ್ಟಿ

13/04/2026 5:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.