Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಉಕ್ರೇನ್ ಪ್ರಧಾನಿ ಹುದ್ದೆಗೆ ಡೆನಿಸ್ ಶ್ಮಿಹಾಲ್ ರಾಜೀನಾಮೆ | Denys Shmyhal resigns

15/07/2025 8:32 PM

SHOCKING: ಮಲಗಿದ್ದಲ್ಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೃದಯಾಘತಾದಿಂದ ಸಾವು

15/07/2025 8:29 PM

ರಾಜ್ಯದ ಮಹಾನಗರ ಪಾಲಿಕೆ ನೌಕರರೊಂದಿಗೆ ಸಚಿವ ಬೈರತಿ ಸುರೇಶ್ ಸಂಧಾನ ಸಕ್ಸಸ್, ಮುಷ್ಕರ ವಾಪಾಸ್

15/07/2025 8:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಾನಗರ ಪಾಲಿಕೆ ನೌಕರರೊಂದಿಗೆ ಸಚಿವ ಬೈರತಿ ಸುರೇಶ್ ಸಂಧಾನ ಸಕ್ಸಸ್, ಮುಷ್ಕರ ವಾಪಾಸ್
KARNATAKA

ರಾಜ್ಯದ ಮಹಾನಗರ ಪಾಲಿಕೆ ನೌಕರರೊಂದಿಗೆ ಸಚಿವ ಬೈರತಿ ಸುರೇಶ್ ಸಂಧಾನ ಸಕ್ಸಸ್, ಮುಷ್ಕರ ವಾಪಾಸ್

By kannadanewsnow0915/07/2025 8:18 PM

ಬೆಂಗಳೂರು : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ.

ವಿಕಾಸಸೌಧದಲ್ಲಿ ಮಂಗಳವಾರ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮತ್ತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ಪದಾಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು.

ಮಹಾನಗರ ಪಾಲಿಕೆಗಳ ಸಾಮಾನ್ಯ ನೇಮಕಾತಿ ನಿಯಮಗಳು 2011 ಕ್ಕೆ ಸಮಗ್ರ ತಿದ್ದುಪಡಿ ಮಾಡುವುದು, ಮಹಾನಗರ ಪಾಲಿಕೆ ನೌಕರರನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ನೌಕರರೆಂದು ಪರಿಗಣಿಸುವುದು, ಸರ್ಕಾರಿ ನೌಕರರ ರೀತಿಯಲ್ಲಿ ಮಹಾನಗರ ಪಾಲಿಕೆಗಳ ಅಧಿಕಾರಿಗಳು/ನೌಕರರಿಗೂ ಕೆಜಿಐಡಿ, ಜಿಐಎಸ್ ಮತ್ತು ಜಿಪಿಎಫ್ ಸೌಲಭ್ಯಗಳನ್ನು ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ನೌಕರರ ಸಂಘಗಳು ಸರ್ಕಾರ ಮುಂದಿಟ್ಟಿದ್ದವು.

ಈ ಬಗ್ಗೆ ಸಭೆ ನಡೆಸಿದ ಬಳಿಕ ಸಭೆಯ ಬಗ್ಗೆ ಮಾಹಿತಿ ನೀಡಿದ ಸಚಿವ ಬೈರತಿ ಸುರೇಶ ಅವರು, ಪಾಲಿಕೆ ನೌಕರರಿಗೆ ಸಕಾಲಕ್ಕೆ ವೇತನ ನೀಡುವುದು, ಸಿ & ಆರ್ ನಿಯಮಗಳಿಗೆ ತಿದ್ದುಪಡಿ ತರುವ ಕುರಿತು ಆರ್ಥಿಕ ಇಲಾಖೆ ಅನುಮೋದನೆ ಪಡೆಯುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಪೌರಾಡಳಿತ ಆಯುಕ್ತರ ಹುದ್ದೆಗಳನ್ನು ಸೃಜಿಸುವಂತೆ ನೌಕರರು ಬೇಡಿಕೆ ಇಟ್ಟಿದ್ದರು. ಆದರೆ, ಕಾನೂನು ಪರಿಮಿತಿಯೊಳಗೆ ವಲಯ ಆಯುಕ್ತರ ಹುದ್ದೆ ಸೃಜಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಆರ್ಥಿಕ ಇಲಾಖೆ ಅಭಿಪ್ರಾಯ ಬಂದ ತಕ್ಷಣ ಕ್ರಮ ವಹಿಸುವುದಾಗಿ ಭರವಸೆ ನೀಡಿರುವುದಾಗಿ ಹೇಳಿದರು.

ಪರಿಸರ ಇಂಜಿನಿಯರ್ ನೇಮಕಕ್ಕೆ ಸೂಚನೆ

ಮಹಾನಗರ ಪಾಲಿಕೆಗಳಲ್ಲಿ ಸಾಕಷ್ಟು ಪರಿಸರ ಇಂಜಿನಿಯರ್ ಗಳ ಹುದ್ದೆಗಳು ಸಾಕಷ್ಟು ಖಾಲಿ ಇವೆ. ಇದರಿಂದ ದೈನಂದಿನ ಕರ್ತವ್ಯಕ್ಕೆ ಅಡ್ಡಿಯಾಗುತ್ತಿದೆ ಎಂಬ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಮಂಜೂರಾಗಿರುವ ಪರಿಸರ ಇಂಜಿನಿಯರ್ ಗಳ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ನೌಕರರಿಗೆ ಗುಂಪು ವಿಮೆ

ಸರ್ಕಾರಿ ನೌಕರರ ಮಾದರಿಯಲ್ಲಿ ಪಾಲಿಕೆ ನೌಕರರಿಗೂ ಗುಂಪು ವಿಮೆ ಯೋಜನೆ (ಜಿಐಎಸ್) ಜಾರಿಗೆ ತರುವ ಬಗ್ಗೆ ಸರ್ಕಾರ ಮುಕ್ತ ಮನಸು ಹೊಂದಿದೆ. ವಿಮಾ ಕಂತಿನ ಮೊತ್ತದಲ್ಲಿ ನೌಕರರು ತಮ್ಮ ಪಾಲಿನ ಮೊತ್ತವನ್ನು ಪಾವತಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ ಸಚಿವರು, ಈ ಹಿನ್ನೆಲೆಯಲ್ಲಿ ಪಾಲಿಕೆಗಳು ನೌಕರರ ಗುಂಪು ವಿಮೆ ಯೋಜನೆಗೆ ಉಳಿದ ಮೊತ್ತವನ್ನು ಭರಿಸುವುದಾದರೆ ಆಗಬಹುದಾದ ಆರ್ಥಿಕ ಹೊರೆಯನ್ನು ಗಮನಿಸಿ ಅಂತಿಮ ನಿರ್ಧಾರ ಕೈಗೊಳ್ಳುವಂತೆ ಉನ್ನತಾಧಿಕಾರಿಗಳಿಗೆ ಆದೇಶ ನೀಡಿದರು.

ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗೆ ಪ್ರೋತ್ಸಾಹ

ಪ್ರತಿ ವರ್ಷ ಪಾಲಿಕೆಗಳ ನೌಕರರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಆರ್ಥಿಕ ಹೊರೆಯಾಗದ ರೀತಿಯಲ್ಲಿ ಪಾಲಿಕೆಗಳಿಂದಲೇ ವೆಚ್ಚ ಭರಿಸಲು ಸೂಚನೆ ನೀಡಲಾಗಿದ್ದು, ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ನೌಕರರ ಇನ್ನಿತರ ಬೇಡಿಕೆಗಳನ್ನು ಹಂತ-ಹಂತವಾಗಿ ಈಡೇರಿಸುವ ಭರವಸೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಪಾಲಿಕೆಗಳಿಗೂ ಜ್ಯೋತಿ ಸಂಜೀವಿನಿ

ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವ ಜ್ಯೋತಿ ಸಂಜೀವಿನಿ ಆರೋಗ್ಯ ವಿಮೆಯನ್ನು ಪಾಲಿಕೆ ನೌಕರರಿಗೂ ವಿಸ್ತರಣೆ ಮಾಡುವ ಬಗ್ಗೆ ಸಹಮತ ವ್ಯಕ್ತಪಡಿಸಲಾಗಿದೆ. ಈ ಯೋಜನೆಯಡಿ ನೌಕರರು ತಮ್ಮ ಪಾಲಿನ ವಿಮಾ ಮೊತ್ತ ಮತ್ತು ಅದಕ್ಕೆ ಸಮಾನವಾದ ಮೊತ್ತವನ್ನು ಪಾಲಿಕೆಗಳು ಭರಿಸುವ ಸಾಧಕ-ಭಾದಕಗಳ ಬಗ್ಗೆ ಪರಿಶೀಲಿಸಲಾಗುತ್ತದೆ. ಇದಲ್ಲದೇ, ನೌಕರರ ಚಿಕಿತ್ಸಾ ವೆಚ್ಚವನ್ನು ಮಂಜೂರು ಮಾಡುವ ಅಧಿಕಾರವನ್ನು ಆಯಾ ಪಾಲಿಕೆಗಳ ಆಯುಕ್ತರಿಗೆ ನೀಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಪ್ರಕಟಿಸಿದರು.

ಮಹಾನಗರ ಪಾಲಿಕೆ ನೌಕರರ ಮುಷ್ಕರ ವಾಪಸ್

ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಷಡಾಕ್ಷರಿ ಮತ್ತು ಅಮೃತರಾಜ್ ಅವರು ಮುಷ್ಕರವನ್ನು ವಾಪಸ್ ಪಡೆದಿರುವುದಾಗಿ ಘೋಷಿಸಿದರಲ್ಲದೇ, ಸಚಿವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಈ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಮತ್ತು ಪೌರಾಡಳಿತ ನಿರ್ದೇಶಕರಾದ ಪ್ರಭುಲಿಂಗ ಕವಳಿಕಟ್ಟಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

ಮಂಡ್ಯದಲ್ಲಿ ಹೃದಯಾಘಾತದಿಂದ ತೆಂಗಿನಕಾಯಿ ವ್ಯಾಪಾರಿ ಸಾವು

BREAKING: ಬಾಲಿವುಡ್ ನ ಹಿರಿಯ ನಟ ಧೀರಜ್ ಕುಮಾರ್ ನಿಧನ | Dheeraj Kumar passes away

Share. Facebook Twitter LinkedIn WhatsApp Email

Related Posts

SHOCKING: ಮಲಗಿದ್ದಲ್ಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೃದಯಾಘತಾದಿಂದ ಸಾವು

15/07/2025 8:29 PM1 Min Read

ಮಂಡ್ಯದಲ್ಲಿ ಹೃದಯಾಘಾತದಿಂದ ತೆಂಗಿನಕಾಯಿ ವ್ಯಾಪಾರಿ ಸಾವು

15/07/2025 8:09 PM1 Min Read

ಮಾಧ್ಯಮ ಸಂಜೀವಿನಿ ಯೋಜನೆ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಿ: ಸಿಎಂಗೆ KUWJ ಅಧ್ಯಕ್ಷ ಶಿವಾನಂದ ತಗಡೂರು ಆಗ್ರಹ

15/07/2025 7:47 PM1 Min Read
Recent News

BREAKING: ಉಕ್ರೇನ್ ಪ್ರಧಾನಿ ಹುದ್ದೆಗೆ ಡೆನಿಸ್ ಶ್ಮಿಹಾಲ್ ರಾಜೀನಾಮೆ | Denys Shmyhal resigns

15/07/2025 8:32 PM

SHOCKING: ಮಲಗಿದ್ದಲ್ಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೃದಯಾಘತಾದಿಂದ ಸಾವು

15/07/2025 8:29 PM

ರಾಜ್ಯದ ಮಹಾನಗರ ಪಾಲಿಕೆ ನೌಕರರೊಂದಿಗೆ ಸಚಿವ ಬೈರತಿ ಸುರೇಶ್ ಸಂಧಾನ ಸಕ್ಸಸ್, ಮುಷ್ಕರ ವಾಪಾಸ್

15/07/2025 8:18 PM

‘ಭಯೋತ್ಪಾದನೆ ವಿರುದ್ಧ ನಾವು ಕಠಿಣ ನಿಲುವು ತೆಗೆದುಕೊಳ್ಳಬೇಕಿದೆ’ : SCO ಸಭೆಯಲ್ಲಿ ‘ಸಚಿವ ಜೈಶಂಕರ್’

15/07/2025 8:18 PM
State News
KARNATAKA

SHOCKING: ಮಲಗಿದ್ದಲ್ಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೃದಯಾಘತಾದಿಂದ ಸಾವು

By kannadanewsnow0915/07/2025 8:29 PM KARNATAKA 1 Min Read

ವಿಜಯಪುರ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮಲಗಿದ್ದಲ್ಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ವಿಜಯಪುರ ತಾಲ್ಲೂಕಿನ…

ರಾಜ್ಯದ ಮಹಾನಗರ ಪಾಲಿಕೆ ನೌಕರರೊಂದಿಗೆ ಸಚಿವ ಬೈರತಿ ಸುರೇಶ್ ಸಂಧಾನ ಸಕ್ಸಸ್, ಮುಷ್ಕರ ವಾಪಾಸ್

15/07/2025 8:18 PM

ಮಂಡ್ಯದಲ್ಲಿ ಹೃದಯಾಘಾತದಿಂದ ತೆಂಗಿನಕಾಯಿ ವ್ಯಾಪಾರಿ ಸಾವು

15/07/2025 8:09 PM

ಮಾಧ್ಯಮ ಸಂಜೀವಿನಿ ಯೋಜನೆ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಿ: ಸಿಎಂಗೆ KUWJ ಅಧ್ಯಕ್ಷ ಶಿವಾನಂದ ತಗಡೂರು ಆಗ್ರಹ

15/07/2025 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.