ಮಂಡ್ಯ: ಹನುಮಧ್ವಜ ವಿಚಾರವಾಗಿ ಮಂಡ್ಯದಲ್ಲಿ ಕೋಮು ಸೌಹಾರ್ಧತೆ ಕೆಡಿಸಿ, ಬೆಂಕಿ ಹಚ್ಚೋ ಕೆಲಸ ಮಾಡಿದ್ರೇ ಅದರ ಪರಿಣಾಮ ನೆಟ್ಟಗಿರಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಸ್ವಾಭಿಮಾನ, ಗೌರವದ ವಿಚಾರದಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಜನತಾ ಪಕ್ಷವನ್ನ ನಿನ್ನೆಯೇ ಅಂತಿಮಗೊಳಿಸಿದ್ದೀರಿ. ನಿನ್ನೆ ಕೇಸರಿ ಶಾಲು ಹಾಕೊಂಡು ಪಕ್ಷದ ಅಂತಿಮ ಯಾತ್ರೆಗೆ ತಿಲಾಂಜಲಿ ಹಾಡಿದ್ದಾರೆ. ಇಷ್ಟು ದಿನ ಹಸಿರು ಶಾಲು ಹಾಕೊಂಡು ಹೋರಾಟ ಮಾಡುತ್ತಿದ್ರಿ. ನೀವು ಪಕ್ಷ ಸೇರ್ಪಡೆ ಆಗಿದ್ದರೆ ಜನತಾ ಪರಿವಾರದವರಿಗೆ ನೋವಾಗುತ್ತಿರಲಿಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ, ತಮ್ಮ ರಾಜಕೀಯಕ್ಕಾಗಿ ಜಯಪ್ರಕಾಶ್ ನಾರಾಯಣರ ಹೋರಾಟಕ್ಕೆ ತಿಲಾಂಜಲಿ ಹಾಡೀದ್ದೀರಿ. ನಿಮ್ಮ ಬೇಡಿಕೆ ಏನು? ರಾಷ್ಟ್ರ ಧ್ವಜ ಕೆಳಗೆ ಇಳಿಸಬೇಕ? ಈ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂಬುದಾಗಿ ಕುಮಾರಸ್ವಾಮಿ ವಿರುದ್ಧ ವಾಗ್ಧಾಳಿ ನಡೆಸಿದರು.
ಸರ್ಕಾರ, ಜಿಲ್ಲಾಡಳಿತ ಕಾನೂನುಬದ್ಧವಾಗಿ ಏನು ಮಾಡಬೇಕೋ ಮಾಡಿದೆ. ನಿಮ್ಮ ಹೋರಾಟ ನೋಡಿದ್ರೆ ರಾಷ್ಟ್ರ ಧ್ವಜ ಇಳಿಸಬೇಕು ಅಂತಿದೆ. ಮೊನ್ನೆ ವಿರೋಧ ಪಕ್ಷದ ನಾಯಕರು ಬಂದು ಹೋಗಿದ್ದಾರೆ. ಸಾಕು ನಿಮ್ಮ ಹೋರಾಟ ಇರಲಿ. ಪ್ರಜಾಪ್ರಭುತ್ವ, ಸಂವಿಧಾನದ ವಿಚಾರದಲ್ಲಿ ಹೋರಾಟ ಬೇಡ. ಉದ್ದಕ್ಕೂ ಜಿಲ್ಲೆಯ ಜನರನ್ನ ಪ್ರವೋಕ್ ಮಾಡಿದ್ದಾರೆ. ಯುವಕರಿಗೆ ಪ್ರಚೋದನೆ ಮಾಡಿದ್ದೀರಿ. ಫ್ಲೆಕ್ಸ್ ಮತ್ತು ಕುರುಬ ಸಮುದಾಯದ ಹಾಸ್ಟೆಲ್ ಗೆ ಕಲ್ಲು ಹೊಡೆಯೋದು ನಿಮ್ಮ ಬದ್ಧತೆಯ? ನಾವು ಸೋತಾಗ ಸುಮ್ಮನೇ ಇರಲಿಲ್ಲವ? 8 ತಿಂಗಳಿಗೆ ನಿಮಗೆ ಸಹಿಸೋಕೆ ಆಗ್ತಿಲ್ಲವ? ಐದು ವರ್ಷದಲ್ಲಿ ಈ ಜಿಲ್ಲೆಗೆ ನಿಮ್ಮ ಕೊಡುಗೆ ಏನು? ಎಂಬುದಾಗಿ ಪ್ರಶ್ನಿಸಿದರು.
ರಾಷ್ಟ್ರೀಯ ಹೆದ್ದಾರಿ ಅಧ್ವಾನ, ಸರಣಿ ಅಪಘಾತಗಳ ಮಾತಾಡಿಲ್ಲ. ರಾಷ್ಟ್ರ ಧ್ವಜ ಹಾಕಿದ್ದು ತಪ್ಪು ಅನ್ನೋ ನಿರ್ಧಾರಕ್ಕೆ ಬಂದಿದ್ದೀರ? ಮೊದಲ ಬಾರಿಗೆ ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ರಾಷ್ಟ್ರ ಧ್ವಜದ ವಿರುದ್ಧ ಹೋರಾಟ ಮಾಡ್ತೀರ? ಎರಡು ಬಾರಿ ಸಿಎಂ ಆಗಲು ಮಂಡ್ಯ ಜಿಲ್ಲೆ ಕಾರಣ. ನಿಮ್ಮ ಆತ್ಮ ಸಾಕ್ಷಿ ಮುಟ್ಟಿಕೊಂಡು ಹೇಳಿ. ಈ ಪಕ್ಷ ಸುಟ್ಟೋಗುತ್ತೆ ಅಂತಾರೆ. ಬಿಜೆಪಿ, ಜೆಡಿಎಸ್ ಏನಾಗುತ್ತೆ ನೋಡಿ. ಈ ಜಿಲ್ಲೆಯ ಜನರ ಮನಪರಿವರ್ತನೆ ಮಾಡಲು ಸಾಧ್ಯವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.
ಬೆಂಗಳೂರಲ್ಲಿ ‘ಪುಟ್ ಪಾತ್ ಒತ್ತುವರಿ’ ತೆರವುಗೊಳಿಸಿದ ಬಿಬಿಎಂಪಿಗೆ ‘ಹೈಕೋರ್ಟ್ ತರಾಟೆ’
ಇದು ಅಂಚೆ ಕಚೇರಿಯ ಅದ್ಭುತ ಯೋಜನೆ: ನೀವು ತುಂಬಾ ಬಡ್ಡಿಯನ್ನು ಪಡೆಯುತ್ತೀರಿ