Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸರ್ಕಾರಿ ಆಸ್ಪತ್ರೆ’ ವೈದ್ಯರು ಹೊರಗೆ ಔಷಧಿಗಾಗಿ ‘ಚೀಟಿ’ ಬರೆದ್ರೆ ಕ್ರಮ – ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ
KARNATAKA

‘ಸರ್ಕಾರಿ ಆಸ್ಪತ್ರೆ’ ವೈದ್ಯರು ಹೊರಗೆ ಔಷಧಿಗಾಗಿ ‘ಚೀಟಿ’ ಬರೆದ್ರೆ ಕ್ರಮ – ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

By kannadanewsnow0929/01/2024 7:02 PM

ಚಾಮರಾಜನಗರ: ಜನರ ಬಳಿಗೆ ಆರೋಗ್ಯ ಸೇವೆಗಳನ್ನ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯದ ಹಳ್ಳಿಗಾಡಿನ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರದಿಂದ ಆರೋಗ್ಯ ಮೇಳಗಳನ್ನ ಹಮ್ಮಿಕೊಳ್ಳಲು ವಿಶೇಷ ಕಾರ್ಯಕ್ರಮ ರೂಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಬೃಹತ್ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಹಸ್ರಾರು ಸಂಖ್ಯೆಯಲ್ಲಿ ಹಳ್ಳಿಗಾಡಿನ ಜನರು ಕೊಳ್ಳೆಗಾಲದ ಆರೋಗ್ಯ ಮೇಳಕ್ಕೆ ಆಗಮಿಸಿ, ಆರೋಗ್ಯ ತಪಾಸಣೆಗೆ ಆಸಕ್ತಿ ತೋರಿದ್ದನ್ನ ನೋಡಿದರೆ ಆರೋಗ್ಯ ಮೇಳಗಳ ಅಗತ್ಯೆತೆಯನ್ನ ನಾವು ಮನಗಾಣಬೇಕಿದೆ.‌ ಇಷ್ಟೊಂದು ಸಂಖ್ಯೆಯಲ್ಲಿ ಜನರ ಸ್ಪಂದನೆ ಸಿಗಲಿದೆ ಎಂದು ನಿರೀಕ್ಷಿಸಿರಲಿಲ್ಲ. ಕೊಳ್ಳೆಗಾಲದ ಈ ಆರೋಗ್ಯ ಮೇಳ ರಾಜ್ಯ ಮಟ್ಟದ ಒಂದು ಆರೋಗ್ಯ ಮೇಳ ಕಾರ್ಯಕ್ರಮ ರೂಪಿಸಲು ಮುನ್ನುಡಿ ಬರೆಯಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಆರೋಗ್ಯ ಇಲಾಖೆಯನ್ನ ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳಲಾಗಿದೆ. ಅದರಲ್ಲಿ ಆರೋಗ್ಯ ಮೇಳವೂ ಒಂದು. ಈ ಮೊದಲು ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ ಮೊದಲ ಆರೋಗ್ಯ ಮೇಳವನ್ನ ಆಯೋಜಿಸಲಾಗಿತ್ತು. ಅಲ್ಲಿ ಜನರಿಂದ ವ್ಯಕ್ತವಾದ ಉತ್ತಮ ಸ್ಪಂದನೆ ನೋಡಿ, ಆರೋಗ್ಯ ಮೇಳಗಳನ್ನ ಹಿಂದುಳಿದ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳ ಜನರಿಗೆ ಅನುಕೂಲವಾಗುವ ರೀತಿಯ ಸ್ಥಳಗಳಲ್ಲಿ ಆಯೋಜಿಸಲು ಅಧಿಕಾರಿಗಳಿಗೆ ಸೂಚಿಸಿದ್ದೆ. ಕೊಳ್ಳೆಗಾಲದಲ್ಲಿ ಆರೋಗ್ಯ ಮೇಳವನ್ನ ನಡೆಸಲು ತೀರ್ಮಾನಿಸಲಾಯಿತು. ಇದಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಉತ್ಸುಕತೆ ತೋರಿಸಿದರು ಎಲ್ಲದರ ಫಲವಾಗಿ ಇಂದು ಗ್ರಾಮೀಣ ಭಾಗದ ಜನರಿಗೆ ತಮ್ಮ ಆರೋಗ್ಯ ತಪಾಸಣೆಗೆ ಅನುಕೂಲವಾಗುತ್ತಿದೆ. ಇದನ್ನ ರಾಜ್ಯದ ಮೂಲೆ ಮೂಲೆಗಳಿಗೂ ಕೊಂಡೊಯ್ಯುತ್ತೇವೆ.

ಬಿ.ಪಿ, ಶುಗರ್, ಕಣ್ಣಿನ ತಪಾಸಣೆಯಿಂದ ಹಿಡಿದು ಹೃದಯ ಸಂಬಂಧಿ ಕಾಯಿಲೆಗಳು, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ನಂತಹ ಕಾಯಿಲೆಗಳಿದ್ದರು ಆರೋಗ್ಯ ಮೇಳದಲ್ಲಿ ತಪಾಸಣೆ ನಡೆಸಿಕೊಂಡು ಅದಕ್ಕೆ ಚಿಕಿತ್ಸೆ ಪಡೆಯಬಹುದಾಗಿದೆ. ಅಲ್ಲದೇ ಮೇಳಕ್ಕೆ ಬಂದು ತಮ್ಮ ಆರೋಗ್ಯ ಸಮಸ್ಯೆ ಹೇಳಿಕೊಂಡವರನ್ನ ಗುಣಮುಖರಾಗಿಸುವ ವರೆಗೂ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಫಾಲೋ ಅಪ್ ಮಾಡಲಿದ್ದಾರೆ. ಶಸ್ತ್ರ ಚಿಕಿತ್ಸೆಯ ಅಗತ್ಯವಾಗಿದ್ದರೆ, ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಿದ್ದಾರೆ. ಸಮಗ್ರ ಆರೋಗ್ಯ ಸೇವೆಯನ್ನ ಆರೋಗ್ಯ ಮೇಳದಲ್ಲಿ ಒದಗಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಔಷಧಿ ಹೊರಗೆ ಪಡೆಯುವಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚೀಟಿ ಬರೆದುಕೊಡುವುದು ನಿಲ್ಲಬೇಕು

ಸರ್ಕಾರಿ ಆಸ್ಪತ್ರೆಗಳಿಗೆ ಜನರು ಬಂದಾಗ ಅವರಿಂದ ಹೊರಗಡೆ ಔಷಧಿ ತೆಗೆದುಕೊಳ್ಳಿ ಎಂದು ವೈದ್ಯರು ಚೀಟಿ ಬರೆದುಕೊಡುವುದನ್ನ ನಾನು ಗಮನಿಸಿದ್ದೇನೆ. ಔಷಧಿ ಸರಬರಾಜಿನಲ್ಲಿ ಸ್ವಲ್ಪ ಸಮಸ್ಯೆಯಾಗಿರುವುದು ನಿಜ. ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಇದು ಪರಿಹಾರವಾಗಲಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲ ಬಗೆಯ ಔಷಧಿಗಳು ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಭರವಸೆ ನೀಡಿದರು.

ಶಿವಮೊಗ್ಗ: ಜ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

‘ರೈತ’ರಿಗೆ ಗುಡ್ ನ್ಯೂಸ್: ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಕೃಷಿ ಉಪಕರಣ’ ಪಡೆಯಲು ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM1 Min Read

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM2 Mins Read

BREAKING : ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ

03/07/2025 1:16 PM1 Min Read
Recent News

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM

BREAKING : ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ

03/07/2025 1:16 PM
State News
KARNATAKA

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

By kannadanewsnow0503/07/2025 1:37 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ…

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM

BREAKING : ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ

03/07/2025 1:16 PM

BIG NEWS : ಮನೆ ಖರೀದಿ, ಮಾರಾಟಗಾರರೇ ಗಮನಿಸಿ : ನೋಂದಣಿಗೆ ಈ ದಾಖಲೆಗಳು ಕಡ್ಡಾಯ.!

03/07/2025 1:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.