Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭೂಮಿ ಕಂಪಿಸುತ್ತದೆ, ಜಾಗತಿಕ ಆರ್ಥಿಕ ಬಿಕ್ಕಟ್ಟು: ಬಾಬಾ ವಂಗಾ ಟಾಪ್ 3 ಭವಿಷ್ಯವಾಣಿ | Baba Vanga

09/06/2025 10:24 AM

BREAKING : ಮಹಾರಾಷ್ಟ್ರದ ಥಾಣೆಯಲ್ಲಿ ಘೋರ ದುರಂತ : ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು.!

09/06/2025 10:22 AM

BREAKING : ಮಹಾರಾಷ್ಟ್ರದಲ್ಲಿ ಘೋರ ದುರಂತ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು.!

09/06/2025 10:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನಕ್ಕೆ ಸಚಿವ ಹೆಚ್.ಕೆ ಪಾಟೀಲ್ ಸಂತಾಪ
KARNATAKA

ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನಕ್ಕೆ ಸಚಿವ ಹೆಚ್.ಕೆ ಪಾಟೀಲ್ ಸಂತಾಪ

By kannadanewsnow0910/12/2024 1:35 PM

ಬೆಂಗಳೂರು: ಹೃದಯಾಘಾತದಿಂದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಜನತೆಯ ಆರ್ಥಿಕ ಉತ್ಕರ್ಷಕ್ಕೆ ಕಾರಣವಾಗುವ ಕರ್ನಾಟಕದ ಅಭಿವೃದ್ಧಿಯ ಚಿಂತನೆ ಮತ್ತು ಅಭಿವೃದ್ಧಿ ಗತಿಯ ಚಲನ ಶೀಲತೆಯನ್ನು ಸವಾಲಾಗಿ ಸ್ವೀಕರಿಸಿ, ಪ್ರಾದೇಶಿಕ ಅಸಮತೋಲನವನ್ನು ಸಮತೋಲನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ ತಾರತಮ್ಯ ನಿವಾರಣೆಯ ಸದುದ್ದೇಶದಿಂದ ಡಿ.ಎಂ. ನಂಜುಂಡಪ್ಪ ಅವರ ನೇತೃತ್ವದಲ್ಲಿ ಉನ್ನತಾಧೀಕಾರ ಸಮಿತಿಯನ್ನು ನೇಮಿಸಿ ಉತ್ತರ ಕರ್ನಾಟಕದ ಅಭಿವೃದ್ಧಿಪರ ಚಿಂತನೆಯನ್ನು ಎತ್ತರಕ್ಕೆ ಕೊಂಡೊಯ್ದ ಕಾಲಘಟ್ಟದಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಎಸ್.ಎಂ. ಕೃಷ್ಣ ಅವರ ನಿಧನದಿಂದ ಕನ್ನಡ ನಾಡು ಬಡವಾಗಿದೆ ಎಂದಿದ್ದಾರೆ.

ಡಿ.ಎಂ. ನಂಜುಂಡಪ್ಪ ಸಮಿತಿಯನ್ನು ನೇಮಕ ಮಾಡಬೇಕೆಂಬ ಸಲಹೆಯನ್ನು ಅತ್ಯಂತ ಗೌರವದಿಂದ ಸ್ವೀಕರಿಸಿ ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸಿದ ಎಸ್.ಎಂ. ಕೃಷ್ಣ ಅವರನ್ನು ನಾನು ಅತ್ಯಂತ ಕೃತಾಂಜಲಿಯಿಂದ ನೆನೆಯುವೆ. ನನ್ನ “ಚಲುವ ಕನ್ನಡ ನಾಡು ನನಸಾಗದ ಕನಸು” ಪುಸ್ತಕದ ಉಪಸಂಹಾರ(Conclusion)ವನ್ನು 1999ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಎಸ್.ಎಂ. ಕೃಷ್ಣ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಭಾಗವನ್ನಾಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಅಧಿಕಾರಕ್ಕೆ ಬಂದ ನಂತರ ನುಡಿದಂತೆ ನಡೆದ ಎಸ್.ಎಂ. ಕೃಷ್ಣ ನನ್ನೊಂದಿಗೆ ಸುದೀರ್ಘವಾಗಿ ಸಮಾಲೋಚಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಈ ಸಮಿತಿಯನ್ನು ನೇಮಿಸಿದ್ದು ಐತಿಹಾಸಿಕ ಘಟನೆ ಎಂದು ಹೇಳಿದ್ದಾರೆ.

ಕೃಷ್ಣ-ಕಾವೇರಿ ಹೋರಾಟದ ಸಂದರ್ಭದಲ್ಲಿ ಕರ್ನಾಟಕದ ಪ್ರತಿಯೊಬ್ಬ ನಾಗರೀಕನ ಆಶೋತ್ತರಗಳನ್ನು ಎಲ್ಲ ವೇದಿಕೆಗಳಲ್ಲಿ ಪ್ರತಿಪಾದಿಸಿದ ಎಸ್.ಎಂ. ಕೃಷ್ಣ ಜಲವಿವಾದಗಳ ವಿಷಯಗಳಲ್ಲಿ ಕರ್ನಾಟಕಕ್ಕೆ ನ್ಯಾಯ ತಂದುಕೊಡುವಲ್ಲಿ ಅವಿರತವಾಗಿ ಶ್ರಮ ವಹಿಸಿದರು. ಕರ್ನಾಟಕ ಪ್ರತಿದಿನ 10000 ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕೆಂದು ಆದೇಶ ಮಾಡಿದಾಗ ಆ ಆದೇಶವು ಪ್ರಧಾನಮಂತ್ರಿ ನೇತೃತ್ವದ ಕಾವೇರಿ ನದಿ ಪ್ರಾಧಿಕಾರ ಸಭೆ ಸೇರುವವರೆಗೂ ಮುಂದುವರೆಯುತ್ತದೆ ಎಂದು ಹೇಳಿ ಇಡೀ ಕರ್ನಾಟಕ ದಿಗ್ಬ್ರಮೆಗೊಂಡಾಗ ಅತ್ಯಂತ ಕಡಿಮೆ ಅವಧಿಯಲ್ಲಿ ಕಾವೇರಿ ನದಿ ಪ್ರಾಧಿಕಾರದ ಸಭೆ ನಡೆಸಿ ತಮಿಳುನಾಡಿಗೆ ನೀರು ಬಿಡುಗಡೆ ನಿಲ್ಲಿಸಿ ಕರ್ನಾಟಕಕ್ಕೆ ನ್ಯಾಯ ತಂದುಕೊಟ್ಟ ಕೀರ್ತಿಗೆ ಪಾತ್ರರಾದವರು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅಂದು ಅಧಿಕಾರದಲ್ಲಿದ್ದ ಬಿ.ಜೆ.ಪಿ ನಾಯಕರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ ಸರ್ವೋಚ್ಚ ನ್ಯಾಯಾಲಯದಿಂದ ನ್ಯಾಯಾಂಗ ನಿಂದನೆಯನ್ನು ಅಂದಿನ ಜಲಸಂಪನ್ಮೂಲ ಸಚಿವನಾಗಿದ್ದ ನನ್ನೊಂದಿಗೆ ಎದುರಿಸಿದರು. ಕೃಷ್ಣ ಕಾವೇರಿ ಜಲವಿವಾದಗಳಲ್ಲಿ, ಗಡಿವಿವಾದಗಳಲ್ಲಿ ರಾಜ್ಯದ ಹಿತವೇ ಶ್ರೇಷ್ಠ ಎನ್ನುವ ನಿಲುವನ್ನು ಸದಾವಕಾಲ ಪಾಲಿಸಿದವರು ಎಂದಿದ್ದಾರೆ.

ಕರ್ನಾಟಕವನ್ನು ಮಾಹಿತಿ ತಂತ್ರಜ್ಞಾನದ ಕಣಜ ಮತ್ತು ಕೇಂದ್ರಸ್ಥಾನವನ್ನಾಗಿ ಪರಿವರ್ತಿಸುವಲ್ಲಿ, ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿಯನ್ನಾಗಿ ಬದಲಾವಣೆಗೆ ಅಪಾರ ಕೊಡುಗೆ ನೀಡಿದ ಎಸ್.ಎಂ. ಕೃಷ್ಣ ಸಭ್ಯ, ಸುಸಂಸ್ಕೃತ ಮತ್ತು ಮುತ್ಸದ್ದಿ ಶ್ರೇಷ್ಠ ರಾಜಕಾರಣಿಗಳ ಸಾಲಿನ ಮುಂಚೂಣಿಯಲ್ಲಿದ್ದವರು. ಅಂದು 1999ರಲ್ಲಿ ಉತ್ತರ ಕರ್ನಾಟಕದಿಂದ ಆಯ್ಕೆಯಾಗಿದ್ದ 48 ಶಾಸಕರು ಎಸ್.ಎಂ.ಕೃಷ್ಣ ಅವರಿಗೆ ಶಕ್ತಿಯಾಗಿ ಎಸ್.ಎಂ.ಕೃಷ್ಣ ಅವರ ರಾಜಕೀಯ ಜೀವನದ ಬಹುದೊಡ್ಡ ಕೊಡುಗೆಯಾಗಿದ್ದಿತು. ನನ್ನನ್ನು ಹಾಗೂ ನನ್ನ ಸಹೋದರ ಡಿ.ಆರ್.ಪಾಟೀಲ ಅವರನ್ನು ಮಕ್ಕಳಂತೆ ಭಾವಿಸಿ ನಮ್ಮ ಏಳಿಗೆಯನ್ನು ಬಯಸಿದ ಎಸ್.ಎಂ ಕೃಷ್ಣ ನನ್ನನ್ನು ತಮ್ಮ ಸಚಿವ ಸಂಪುಟದಲ್ಲಿ ಜಲಸಂಪನ್ಮೂಲ ಇಲಾಖೆಯ ಸಚಿವನನ್ನಾಗಿ ಅಧಿಕಾರ ನೀಡಿದ ಕ್ಷಣಗಳನ್ನು ನಾನು ಕೃತಜ್ಞತೆಯಿಂದ ಸ್ಮರಿಸಿದ್ದಾರೆ.

ಅತ್ಯಂತ ಮಹತ್ವದ ಕಾಲಘಟ್ಟದಲ್ಲಿ ನೀರಾವರಿ ಯೋಜನೆಗಳಿಗೆ ಅದರಲ್ಲೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೃಷ್ಣಾ ಮೇಲ್ದಂಡೆ ಯೋಜನೆಯಂತ ಮಹತ್ವಾಕಾಂಕ್ಷಿ ಯೋಜನೆಗೆ ಆಮೆ ವೇಗವನ್ನು ತಪ್ಪಿಸಿ ಜಿಂಕೆ ವೇಗವನ್ನು ಒದಗಿಸಿದಿ ಖ್ಯಾತಿಗೆ ಪಾತ್ರರಾದವರು. ಕರ್ನಾಟಕದ ಮಹತ್ವದ ಜಲವಿವಾದಗಳ ಸಂದರ್ಭದಲ್ಲಿ ದೃಢವಾದ ನಿಲುವನ್ನು ಕರ್ನಾಟಕದ ಧ್ವನಿಯಾಗಿ ಗಟ್ಟಿಯಾಗಿ ಪ್ರತಿಪಾದಿಸುವಲ್ಲಿ ಕರ್ನಾಟಕದ ನಾಗರೀಕರಿಗೆ ಹೆಗಲಿಗೆ-ಹೆಗಲು ಕೊಟ್ಟವರು ಎಂದು ಹೇಳಿದ್ದಾರೆ.

ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವನಾಗಿ ಸೇವೆ ಸಲ್ಲಿಸುವ ಸೌಭಾಗ್ಯ ನನ್ನದಾಗಿತ್ತು. ಆ ಸಂದರ್ಭದಲ್ಲಿ ನೆನೆಗುದಿಗೆ ಬಿದ್ದಿದ್ದ ಮಹದಾಯಿ ಯೋಜನೆಯನ್ನು ಮಾರ್ಪಡಿಸಿ ಕಳಸಾ-ಬಂಡೂರಿ ಯೋಜನೆಗಳನ್ನಾಗಿ ಅತ್ಯಂತ ಚಾಕಚಕ್ಯತೆಯಿಂದ ಜಲಸಂಪನ್ಮೂಲ ಇಲಾಖೆ ಸಲ್ಲಿಸಿದ್ದ ಯೋಜನಾ ವರದಿಯನ್ನು ಅಂಗೀಕರಿಸಿದ ಮತ್ತು ಆ ಕಾರ್ಯಕ್ಕೆ ಚಾಲನೆ ನೀಡಿದ ಎಸ್.ಎಂ. ಕೃಷ್ಣ ಸಚಿವ ಸಂಪುಟದ ಕೊಡುಗೆಯನ್ನು ನಾನು ಕೃತಜ್ಞತೆಯನ್ನು ಸ್ಮರಿಸಿದ್ದಾರೆ.

ಎಸ್.ಎಂ. ಕೃಷ್ಣ ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿ, ಶಾಸಕನಾಗಿ, ವಿಧಾನಸಭೆಯ ಅಧ್ಯಕ್ಷರಾಗಿ, ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ, ಕರ್ನಾಟಕ ವಿಧಾನ ಮಂಡಳದ ಎರಡೂ ಸದನಗಳ ಸದಸ್ಯರಾಗಿ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗಿ ಸಲ್ಲಿಸಿದ ಸೇವೆ ಅನುಪಮವಾದದ್ದು. ಕರ್ನಾಟಕ ಕಂಡ ಅಪರೂಪದ ಹಿರಿಯ ಚೈತನ್ಯವೊಂದು ಇಂದು ನಮ್ಮನ್ನು ಅಗಲಿ ನಾಡನ್ನು ಬಡವಾಗಿಸಿದೆ. ರಾಷ್ಟçಕ್ಕೆ ತುಂಬಿಬಾರದ ಹಾನಿಯಾಗಿದೆ. ಎಸ್.ಎಂ.ಕೃಷ್ಣ ಅವರ ನಿಧನದಿಂದ ಮಡುಗಟ್ಟಿರುವ ಶೋಕವನ್ನು ಸೈರಿಸುವ ಶಕ್ತಿಯನ್ನು ಎಲ್ಲರಿಗೂ ನೀಡಲಿ ಮತ್ತು ಅವರ ಆತ್ಮಕ್ಕೆ ಚಿರಶಾಂತಿಯನ್ನು ದಯಾಘನನಾದ ಭಗವಂತನು ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

09/06/2025 9:38 AM3 Mins Read

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM1 Min Read

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರು ಗುತ್ತಿಗೆದಾರರ ವಿರುದ್ಧ `FIR’ ದಾಖಲು

09/06/2025 9:10 AM1 Min Read
Recent News

ಭೂಮಿ ಕಂಪಿಸುತ್ತದೆ, ಜಾಗತಿಕ ಆರ್ಥಿಕ ಬಿಕ್ಕಟ್ಟು: ಬಾಬಾ ವಂಗಾ ಟಾಪ್ 3 ಭವಿಷ್ಯವಾಣಿ | Baba Vanga

09/06/2025 10:24 AM

BREAKING : ಮಹಾರಾಷ್ಟ್ರದ ಥಾಣೆಯಲ್ಲಿ ಘೋರ ದುರಂತ : ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು.!

09/06/2025 10:22 AM

BREAKING : ಮಹಾರಾಷ್ಟ್ರದಲ್ಲಿ ಘೋರ ದುರಂತ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು.!

09/06/2025 10:12 AM

ಹನಿಮೂನಿಗೆ ಹೋದವ ಹೆಣವಾದ ಪ್ರಕರಣ : ಅರೆಸ್ಟ್ ಆದ ಪತ್ನಿಯ ಮೊದಲ ಫೋಟೋ ಬಹಿರಂಗ !

09/06/2025 10:07 AM
State News
KARNATAKA

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

By kannadanewsnow0909/06/2025 9:38 AM KARNATAKA 3 Mins Read

ತಿಂಗಳ ಕೊನೆಯಲ್ಲಿ ಬಹಳಷ್ಟು ಜನರ ಕೈಯಲ್ಲಿ ನಗದು ಇರುವುದಿಲ್ಲ. ಮುಂದಿನ ತಿಂಗಳು ಸಂಬಳ ಬಂದರೆ ಮಾತ್ರ ಹಣ ಬರುವ ಪರಿಸ್ಥಿತಿ…

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರು ಗುತ್ತಿಗೆದಾರರ ವಿರುದ್ಧ `FIR’ ದಾಖಲು

09/06/2025 9:10 AM

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.