Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತದಲ್ಲಿ ಬದುಕುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ’: ಕಪಿಲ್ ಸಿಬಲ್ ಹೇಳಿಕೆಗೆ ಭಾರಿ ವಿರೋಧ | Kapil Sibal

ಭಾರತ-ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದಕ್ಕೆ ಮುಹೂರ್ತ: ಎಲ್ಲಾ ಪ್ರಮುಖ ಅಂಶಗಳ ಇತ್ಯರ್ಥ, ಶೀಘ್ರವೇ ಮೊದಲ ಕಂತಿನ ಒಪ್ಪಂದ!

ಟ್ವಿಶಾ ಶರ್ಮಾ ನಿಗೂಢ ಸಾವು: ಕುಣಿಕೆ, ಬೆಲ್ಟ್ ಹಾಗೂ 80 ಕೆಜಿ ತೂಕದ ಡಮ್ಮಿ ಬಳಸಿ ಮರುಸೃಷ್ಟಿಸಿದ CBI!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ
KARNATAKA

BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ವಿಧಾನ ಸೌಧವು ನಮ್ಮ ರಾಜ್ಯದ ಪ್ರಜಾಪ್ರಭುತ್ವದ ಜೀವಂತ ಕಥೆಯಾಗಿದ್ದು, ಇದನ್ನು ಸಾರ್ವಜನಿಕರಿಗೆ ತೆರೆದಿರುವುದು ಪಾರದರ್ಶಕತೆ, ಪರಂಪರೆ ಮತ್ತು ನಾಗರಿಕ ಹೆಮ್ಮೆಯ ಕಾರ್ಯಕ್ರಮವಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ಅವರು ತಿಳಿಸಿದರು.

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರವಾಸೋದ್ಯಮ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಕರ್ನಾಟಕ ವಿಧಾನ ಸಭೆಯ ಸಚಿವಾಲಯದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಮಾರ್ಗದರ್ಶಿ ನಡಿಗೆ ಪ್ರವಾಸ (Walking Guided Tour) ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ವಿಧಾನ ಸೌಧವು ಇನ್ನು ಮುಂದೆ ಸಾರ್ವಜನಿಕರಿಗೂ ಮುಕ್ತವಾಗಲಿದೆ. ಕಲಾಕೌಶಲ್ಯದ ವಿರಳ ದಾಖಲೆಯಾಗಿ ಇತಿಹಾಸದಲ್ಲಿ ದಾಖಲಾಗಿರುವ ಆಡಳಿತಸೌಧವನ್ನು ದೂರದಿಂದಲೇ ನೋಡಿ ಫೊಟೋ ತೆಗೆದು ಸಂತಸ ಪಡುತ್ತಿದ್ದ ಜನರಿಗೆ ಈಗ ಇದನ್ನ ಹತ್ತಿರದಿಂದ ನೋಡುವ ಸದವಕಾಶ ಲಭ್ಯವಿದೆ ಎಂದರು.

ಇದು ಕೇವಲ ಕಟ್ಟಡವಲ್ಲ. ಜಗತ್ತಿನ ಅತ್ಯಂತ ಸುಂದರವಾದ ಕಟ್ಟಡ, ವಿದ್ಯಾರ್ಥಿಗಳಿಗೆ, ಆಸಕ್ತರಿಗೆ ಇದರ ದರ್ಶನ ಮಾಡಿಸುವ ದೃಷ್ಟಿಯಿಂದ ಅವಕಾಶವನ್ನು ಕಲ್ಪಸಿಕೊಡಲಾಗುತ್ತಿದೆ. ಇಲ್ಲಿಯವರಿಗೆ ಕೇವಲ ಆಡಳಿತ ಕಾರ್ಯಗಳಿಗಷ್ಟೇ ಸೀಮಿತವಾಗಿದ್ದ ವಿಧಾನಸೌಧವು ಇನ್ನು ಮುಂದೆ ಪ್ರವಾಸಿ, ಪ್ರೇಕ್ಷಣೀಯ ಸ್ಥಳದ ಸಾಲಿಗೆ ಸೇರ್ಪಡೆಯಾಗಲಿದೆ. ಜೂನ್ 1ರಿಂದ ಸೀಮಿತ ದಿನಗಳಲ್ಲಿ ವಿಧಾನಸೌಧವು ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ತಿಳಿಸಿದರು.

ವಿಧಾನಸೌಧ ಪ್ರವಾಸ ಕಾರ್ಯಕ್ರಮವು ಮನೋರಂಜನೆಯ ಪ್ರವಾಸವಾಗಬಾರದು, ಶೈಕ್ಷಣಿಕ ಅಧ್ಯಯನದ ಪ್ರವಾಸವಾಗಬೇಕು. ಪ್ರಜಾಪ್ರಭುತ್ವದ ಮಹತ್ವವನ್ನು ಸಾರ್ವಜನಿಕರು ತಿಳಿದುಕೊಳ್ಳುವಂತಾಗಬೇಕು. ವಿದ್ಯಾರ್ಥಿಗಳು ಮುಂದೆ ರಾಜಕೀಯ ಕ್ಷೇತ್ರಕ್ಕೂ ಬರಬೇಕು, ಉತ್ತಮ ರಾಜಕೀಯ ಪಟುಗಳಾಗಲು ಶಕ್ತಿಸೌಧ ಸ್ಪೂರ್ತಿ ನೀಡುವಂತಾಗಲಿದೆ ಎಂದು ಹೇಳಿದರು.

ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಮಾತನಾಡಿ ವಿಧಾನಸೌಧದ ಕಟ್ಟಡದಲ್ಲಿ ಓಡಾಡಿದ್ರೆ ಅನೇಕ ಪಾರಂಪರಿಕ ಕಟ್ಟಡಗಳು ಕಣ್ಣಿಗೆ ಕಟ್ಟುವಂತೆ ಮಾಡಲಿದೆ. 75 ವರ್ಷಗಳ ಕಾಲ ವಿಧಾನಸೌಧದ ಒಳಗೆ ಯಾರನ್ನೂ ಬಿಟ್ಟಿರಲಿಲ್ಲ. ಸಾರ್ವಜನಿಕರು ಪಾಸ್ ಪಡೆದುಕೊಂಡು ಬರಬೇಕಿತ್ತು. ಆದರೆ ಈಗ ಕರ್ನಾಟಕ ಮಾತ್ರವಲ್ಲ ದೇಶದ ಜನತೆಗೆ ತೋರಿಸುವ ಕೆಲಸ ಮಾಡಿದ್ದೇವೆ ಎಂದರು.

ಮಾರ್ಗದರ್ಶಿ ಪ್ರವಾಸದ ಮೂಲಕ ವಿದ್ಯಾರ್ಥಿಗಳಿಗೆ ನಮ್ಮ ನಾಡಿನ ಇತಿಹಾಸ ಅರ್ಥಮಾಡಿಸುವ ಕೆಲಸವಾಗಲಿದೆ. ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯದವರು ದೇಶದ ಇತಿಹಾಸವನ್ನು ಅರ್ಥ ಮಾಡಿಕೊಳ್ಳಬೇಕು. ವಿಧಾನಸೌಧ ನಮ್ಮದು ಎಂಬ ಭಾವನೆಯನ್ನು ನಮ್ಮ ರಾಜ್ಯದ ಜನರಲ್ಲಿ ಮೂಡುವಂತೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ವಿಧಾನ ಸೌಧ, ಬೆಂಗಳೂರಿನ ಪ್ರಮುಖ ಐತಿಹಾಸಿಕ ಮತ್ತು ಆಡಳಿತದ ಸಂಕೇತವಾಗಿದ್ದು. ಮಾರ್ಗದರ್ಶಿ ಪ್ರವಾಸಿ ನಡಿಗೆಯು ಈ ಕಟ್ಟಡದ ಐತಿಹಾಸಿಕದ ಮಹತ್ವ, ಶಿಲ್ಪಕಲೆಯ ವೈಭವ ಮತ್ತು ಅದರ ಪ್ರಮುಖ ಭಾಗಗಳನ್ನು ಪರಿಚಯಿಸುತ್ತದೆ. ಸಾರ್ವಜನಿಕರು ಇದರ ವೀಕ್ಷಣೆ ಮಾಡಬಹುದಾಗಿದೆ. ನುರಿತ ಗೈಡ್‌ಗಳು ವಿಧಾನಸೌಧ ಆವರಣದ ಕುರಿತು ಸಮಗ್ರ ಪರಿಚಯ ಸಹಿತ ಮಾಹಿತಿಯನ್ನು ಪ್ರವಾಸಿಗರಿಗೆ ಒದಗಿಸಲಿದ್ದಾರೆ ಎಂದು ತಿಳಿಸಿದರು.

ರಾಜಕೀಯ ಅಕಾಡೆಮಿ ತೆರೆಯಲು ಚಿಂತಿಸಲಾಗುತ್ತಿದೆ, ರಾಜಕೀಯ ಕಾಲೇಜು ಆರಂಭಿಸಿ ತರಬೇತಿ ನೀಡುವ ಬಗ್ಗೆ ಕಾನೂನಾತ್ಮಕವಾಗಿ ಚರ್ಚಿಸಿ ಅನುಷ್ಟಾನದ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.

ವಿಧಾನ ಪರಿಷತ್ತಿನ ಸಭಾಧ್ಯಕ್ಷರಾದ ಬಸವರಾಜ ಎಸ್ ಹೊರಟ್ಟಿ ಮಾತನಾಡಿ ಸಾರ್ವಜನಿಕರಿಗೆ ವಿಧಾನಸೌಧ ವೀಕ್ಷಣೆಗೆ ಅವಕಾಶ ಕಲ್ಪಿಸಿರುವುದು ಒಳ್ಳೆಯ ಬೆಳವಣಿಗೆ. ಶಕ್ತಿ ಸೌಧದ ಬಗ್ಗೆ ಜನರಿಗೆ ಸೂಕ್ತ ಮಾಹಿತಿ ನೀಡುವ ಕೆಲಸವಾಗಲಿದೆ ಎಂದು ಹೇಳಿದರು.

ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸದ ವಿಶೇಷತೆಗಳು:

ಪ್ರತೀ ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ವಿಧಾನಸೌಧ ಪ್ರವಾಸ ನಡಿಗೆ ಇರಲಿದೆ. ಇದಕ್ಕಾಗಿ ಆನ್‌ಲೈನ್ ನಲ್ಲಿ ಮುಂಚಿತವಾಗಿ ಟಿಕೆಟ್ ಮಾಡಿಕೊಳ್ಳಬೇಕು. ಜೂನ್ 1 ರಿಂದ ಅಧಿಕೃತ ವಿಧಾನಸೌಧ ಪ್ರವಾಸ ಆರಂಭವಾಗಲಿದೆ. ಪ್ರಾರಂಭಿಕ ದರವು 16 ವರ್ಷ ಮೇಲ್ಪಟ್ಟವರಿಗೆ 50 ರೂಪಾಯಿ ದರ ನಿಗಧಿಯಾಗಿದ್ದು. 15 ವರ್ಷ ವಯಸ್ಸಿಗಿಂತ ಕಡಿಮೆ ಇರುವ ಮಕ್ಕಳಿಗೆ ಉಚಿತ. ಟಿಕೆಟ್‌ಗಳನ್ನು https://kstdc.co/activities ವೆಬ್‌ಸೈಟ್ ನಲ್ಲಿ ಬುಕ್ ಮಾಡಿಕೊಳ್ಳಬೇಕು. ಪ್ರತಿ ಎರಡನೇ ಮತ್ತು ನಾಲ್ಕನೇ ಶನಿವಾರಗಳು ಹಾಗೂ ಎಲ್ಲಾ ಭಾನುವಾರಗಳು ವೀಕ್ಷಿಸಬಹುದು. ಪ್ರವಾಸವು ಬೆಳಗ್ಗೆ 8 ರಿಂದ ಸಂಜೆ 5 ಗಂಟೆವರೆಗೆ ಇರಲಿದೆ.

Wtch Video: ಹಿಮಾಚಲ ಪ್ರದೇಶದ ಮೇಘ ಸ್ಫೋಟ: ಪ್ರವಾಹದಲ್ಲಿ ಕೊಚ್ಚಿ ಹೋದ 5-6 ವಾಹನಗಳು | Himachal Pradesh Cloud Burst

BIG NEWS : ರಾಜ್ಯದಲ್ಲಿ ಮೇ.29ರಿಂದ ಶಾಲೆಗಳು ಪುನಾರಂಭ : ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ವಿತರಣೆ.!

Share. Facebook Twitter LinkedIn WhatsApp Email

Related Posts

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

1 Min Read

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

2 Mins Read

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

1 Min Read
Recent News

‘ಭಾರತದಲ್ಲಿ ಬದುಕುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ’: ಕಪಿಲ್ ಸಿಬಲ್ ಹೇಳಿಕೆಗೆ ಭಾರಿ ವಿರೋಧ | Kapil Sibal

ಭಾರತ-ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದಕ್ಕೆ ಮುಹೂರ್ತ: ಎಲ್ಲಾ ಪ್ರಮುಖ ಅಂಶಗಳ ಇತ್ಯರ್ಥ, ಶೀಘ್ರವೇ ಮೊದಲ ಕಂತಿನ ಒಪ್ಪಂದ!

ಟ್ವಿಶಾ ಶರ್ಮಾ ನಿಗೂಢ ಸಾವು: ಕುಣಿಕೆ, ಬೆಲ್ಟ್ ಹಾಗೂ 80 ಕೆಜಿ ತೂಕದ ಡಮ್ಮಿ ಬಳಸಿ ಮರುಸೃಷ್ಟಿಸಿದ CBI!

ವಿಮಾನ ನಿಲ್ದಾಣಗಳಲ್ಲಿ ರೀಲ್ಸ್ ಮಾಡಿದರೆ ಎಚ್ಚರ: ಭಾರಿ ದಂಡದ ಜೊತೆಗೆ ವಿಮಾನಯಾನ ನಿಷೇಧದ ಭೀತಿ!

State News
KARNATAKA

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ…

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿಯ ಈ ಅಂಗಗಳನ್ನು ತಿನ್ನುವುದು ಆರೋಗ್ಯಕ್ಕೆ ಮಾರಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.