ಕಲಬುರಗಿ : ಸ್ಮಾರ್ಟ್ ಮೀಟರ್ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ವಜಾಗೊಳಿಸಬೇಕು; ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸಿದ್ದರಾಮಯ್ಯನವರ ಕಿರೀಟಕ್ಕೆ ಈ ಭ್ರಷ್ಟಾಚಾರ ಹಗರಣವು ಮತ್ತೊಂದು ಹೊಸ ಗರಿ ಎಂದರು. ಈ ವಿಚಾರದಲ್ಲಿ ಮುಖ್ಯಮಂತ್ರಿಗಳ ಉತ್ತರವೇನು ಎಂದು ಪ್ರಶ್ನಿಸಿದರು. 15 ಸಾವಿರ ಕೋಟಿ ಎಂದರೆ ಸಣ್ಣ ಮೊತ್ತವಲ್ಲ. ಹಾಗಾಗಿ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
ಅರ್ಹತೆ ಇಲ್ಲದ ಗುತ್ತಿಗೆದಾರನಿಗೆ ಗುತ್ತಿಗೆ, ಬ್ಲ್ಯಾಕ್ ಲಿಸ್ಟೆಡ್ ಕಂಪೆನಿ ಜೊತೆ ಒಡಂಬಡಿಕೆ, ನಿಯಮಾವಳಿ ಉಲ್ಲಂಘನೆ ಮಾಡಿದ್ದನ್ನು ಹಾಗೂ ರಾಷ್ಟ್ರದಲ್ಲೇ ಗರಿಷ್ಠ- ದುಬಾರಿ ದರ ವಿಧಿಸುತ್ತಿರುವುದು, ಕಡ್ಡಾಯ ಇಲ್ಲದಿದ್ದರೂ ಕಡ್ಡಾಯ ಮಾಡಿದ್ದಾರೆ ಎಂದು ದೂರಿದರು.
ಜನರಿಗೆ ಅಭಿವೃದ್ಧಿ ಕೊಡಿ. ಗುಣಮಟ್ಟದ ಶಿಕ್ಷಣ ಕೊಡಿ. ತಂತ್ರಜ್ಞಾನ ಬಳಕೆ ಮಾಡಿ. ಒಕ್ಕಲೆಬ್ಬಿಸುವುದು, ಊರು ಬಿಟ್ಟು ವಲಸೆ ಹೋಗುವ ಪರಿಸ್ಥಿತಿ ಬರುವಂತೆ ಮಾಡುವುದನ್ನು ಬಿಟ್ಟು ಬಿಡಿ. ಕೋವಿಡ್ ನಂತರವೂ ವಾಸವಿದ್ದಲ್ಲೇ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂಬುದನ್ನು ನಾವು ಕಣ್ಮುಂದೆ ಕಂಡಿದ್ದೇವೆ. ಅದನ್ನು ಬಲಪಡಿಸುವ ಪ್ರಯತ್ನ ಮಾಡಿ. ಎಂದು ತಿಳಿಸಿದರು.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆದ ಕುರಿತು ರಾಹುಲ್ ಗಾಂಧಿಯವರು ಆಪಾದಿಸಿದ ಬಗ್ಗೆ ಆಗ ಕಾಂಗ್ರೆಸ್ ಪಕ್ಷವೇ ಇಲ್ಲಿ ಆಡಳಿತದಲ್ಲಿತ್ತು. ಇದು ಆಧಾರರಹಿತ ಹೇಳಿಕೆ; ಇದನ್ನು ಖಂಡಿಸುತ್ತೇವೆ. ಇದಕ್ಕೆ ಚುನಾವಣಾ ಇಲಾಖಾಧಿಕಾರಿಗಳು, ಸರಕಾರವೇ ಉತ್ತರ ಕೊಡಬೇಕಾಗುತ್ತದೆ ಎಂದು ನುಡಿದರು.
ಹಣ ಮಾಡಲೆಂದೇ ಸ್ಮಾರ್ಟ್ ಮೀಟರ್ ಅಳವಡಿಕೆ
ಹಣ ಮಾಡುವ ಏಕೈಕ ಉದ್ದೇಶಕ್ಕಾಗಿ ಸರಕಾರವು ಸ್ಮಾರ್ಟ್ ಮೀಟರನ್ನು ಅಳವಡಿಸಲು ಮುಂದಾಗಿದೆ ಎಂದು ಆರೋಪಿಸಿದರು.
ಎಲ್ಲ ನಿಯಮ ಗಾಳಿಗೆ ತೂರಿ ಸ್ಮಾರ್ಟ್ ಮೀಟರ್ ಖರೀದಿ ಕುರಿತಂತೆ ಮುಖ್ಯಮಂತ್ರಿ, ಇಂಧನ ಸಚಿವರು ಉತ್ತರಿಸಬೇಕಿದೆ ಎಂದು ತಿಳಿಸಿದರು.
ಜಾರ್ಜ್ ಅವರು ರಾಜೀನಾಮೆ ಕೊಡಬೇಕು; ಇಲ್ಲವಾದರೆ ಮುಖ್ಯಮಂತ್ರಿಗಳು ಅವರ ರಾಜೀನಾಮೆ ಪಡೆಯಬೇಕೆಂದು ತೇಲ್ಕೂರ ಆಗ್ರಹಿಸಿದರು.
ಕಾಲ್ತುಳಿತ ದುರಂತ ಕೇಸ್: ನ್ಯಾ.ಮೈಕಲ್ ಡಿ ಕುನ್ಹಾ ಆಯೋಗದ ವರದಿ ಅಂಗೀಕಾರಕ್ಕೆ ರಾಜ್ಯ ಸಂಪುಟದ ತೀರ್ಮಾನ
ಸಾಗರದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪರಿಹಾರದ ಚೆಕ್ ವಿತರಣೆ