Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ತಂಬಾಕು ಸೇವನೆಯಿಂದ ಭಾರತದಲ್ಲಿ ಪ್ರತಿವರ್ಷ 13.5 ಲಕ್ಷ ಮಂದಿ ಸಾವು.!

15/09/2025 6:16 AM

ಶಿವಮೊಗ್ಗ: ಇಂದು ಸೊರಬದ ಉಳವಿ ಸೇರಿದಂತೆ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ | Power Cut

15/09/2025 6:15 AM

BIG NEWS: ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ನಾಳೆ ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

15/09/2025 6:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಶಾಕಿಂಗ್ ನ್ಯೂಸ್
KARNATAKA

ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಸಚಿವ ಕೃಷ್ಣ ಬೈರೇಗೌಡ’ ಶಾಕಿಂಗ್ ನ್ಯೂಸ್

By kannadanewsnow0918/08/2025 2:58 PM

ಬೆಂಗಳೂರು: ಬಗರ್ ಹುಕುಂ ಅರ್ಜಿಗಳ ವಿಲೇ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ, ಒಂದು ವೇಳೆ ರೈತರಿಗೆ ಅನ್ಯಾಯವಾಗಿದ್ದರೆ ನಮ್ಮ ಗಮನಕ್ಕೆ ತನ್ನಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಸದನದಲ್ಲಿ ಭರವಸೆ ನೀಡಿದರು.

ವಿಧಾನಸೌಧದಲ್ಲಿ ಸೋಮವಾರ ಪ್ರಶ್ನಾವಳಿ ವೇಳೆ ಶಾಸಕರಾದ ಎಂ.ಟಿ. ಕೃಷ್ಣಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಬಗರ್ ಹುಕುಂ ಸಮಿತಿ ಮುಂದೆ ಅಧಿಕಾರಿಗಳು ಅರ್ಹ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು ಎಂಬ ಕಾನೂನು ಇದೆ. ಹೀಗಾಗಿ ಅಧಿಕಾರಿಗಳು ಅನರ್ಹ ಅರ್ಜಿಗಳನ್ನು ಆರಂಭಿಕ ಹಂತದಲ್ಲೇ ತ್ಯಜಿಸಿಬಿಡುತ್ತಾರೆ. ಈ ಎಲ್ಲಾ ಪ್ರಕ್ರಿಯೆಗಳೂ ಕಾನೂನಿನಲ್ಲೇ ಇದ್ದು, ಕಾನೂನು ಮೀರಿ ಏನೂ ಮಾಡಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಒಂದೆರಡು ರೈತರಿಗೆ ಅನ್ಯಾಯ ಆಗಿದ್ದರೆ ಶಾಸಕರು ನನ್ನ ಗಮನಕ್ಕೆ ತನ್ನಿ, ಸಮಸ್ಯೆಯನ್ನು ನಾನು ಸರಿಪಡಿಸುತ್ತೇನೆ” ಎಂದು ಆಶ್ವಾಸನೆ ನೀಡಿದರು.

ಇದೇ ವೇಳೆ ಬಗರ್ ಹುಕುಂ ಹೆಸರಿನಲ್ಲಿ ಭೂ ಮಂಜೂರಾತಿಗೆ ಯಾವ್ಯಾವ ರೀತಿಯ ಅನರ್ಹ ಅರ್ಜಿಗಳು ಸಲ್ಲಿಕೆಯಾಗುತ್ತವೆ ಎಂದೂ ಸದನದ ಗಮನ ಸೆಳೆದ ಸಚಿವರು, “5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವ 7,564 ಜನ ಅರ್ಜಿ ಸಲ್ಲಿಸಿದ್ದಾರೆ. ರಸ್ತೆ ಗುಂಡು ತೋಪು ಒತ್ತುವರಿ ಮಾಡಿರುವವರು 33,632, ಅರಣ್ಯ ಭೂಮಿಯ ಮಂಜೂರಾತಿಗೆ 1,00,565, ನಗರ-ನಗರಸಭೆ ವ್ಯಾಪ್ತಿಯಲ್ಲಿ ಭೂ ಮಂಜೂರಾತಿಗೆ 69,850, ಆ ತಾಲೂಕಿನಲ್ಲೇ ವಾಸಿಸದ ಪಕ್ಕದ ತಾಲೂಕಿನಲ್ಲೂ ವಾಸ ಇಲ್ಲದ 1,620, ಕೃಷಿಕರೇ ಅಲ್ಲದ 13,488, ಜಮೀನಿನ ಸ್ವಾಧೀನದಲ್ಲೇ ಇಲ್ಲದ 44,517, ಅಮೃತ್ ಮಹಲ್ ಕಾವಲ್‌ ಭೂ ಮಂಜೂರಾತಿಗೆ 13,488 ಹಾಗೂ ಕೆರೆ ಮಂಜೂರಿಗೂ 3040 ಅರ್ಜಿಗಳು ಬಂದಿವೆ” ಎಂದು ಮಾಹಿತಿ ನೀಡಿದರು.

ಪಡಾ ಭೂ ಮಂಜೂರಿಗೆ ಅಧ್ಯಯನ

“ಪಡಾ-ಬೀಳು ಜಮೀನಿನ ಸ್ವಾದೀನವನ್ನು ಹಲವು ಈ ಹಿಂದೆಯೇ ಬಿಟ್ಟಿದ್ದಾರೆ. ಹೀಗಾಗಿ ಈ ಪೈಕಿ ಕೆಲ ಜಮೀನು ಅರಣ್ಯ ಪ್ರದೇಶಗಳಿಗೆ ಮಂಜೂರಾಗಿದೆ. ಕೆಲವು ಸರ್ಕಾರಿ ಕಚೇರಿಗಳಿಗೆ, ಸ್ಮಶಾನ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಗ್ರ್ಯಾಂಟ್ ಆಗಿದೆ. ಈ ಬಗ್ಗೆ ಮೊದಲು ಅಧ್ಯಯನ ನಡೆಸಿ ಆ ನಂತರ ಯಾರು ಕೃಷಿಯಲ್ಲಿ ತೊಡಗಿದ್ದಾರೆ ಅಂತವರಿಗೆ ಜಮೀನು ಮಂಜೂರು ಮಾಡುವ ಕೆಲಸ ಆಗಬೇಕು. ಅದನ್ನು ಬಿಟ್ಟು ಎಲ್ಲರ ಅರ್ಜಿಯನ್ನೂ ಸ್ವೀಕರಿಸಿದರೆ ಭವಿಷ್ಯದಲ್ಲಿ ಈ ಸಮಸ್ಯೆ ಇನ್ನೂ ನೂರುಪಟ್ಟು ದೊಡ್ಡದಾಗುವ ಸಾಧ್ಯತೆ ಇದೆ. ಪ್ರಸ್ತುತ ಈಗ ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದು, ಬಗರ್ಹುಕುಂ ಕೆಲಸಗಳು ಮುಗಿದ ನಂತರ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಗೋಮಾಳ ಜಮೀನನ್ನು ಬಗರ್‌ ಹುಕುಂ ಅಡಿಯಲ್ಲಿ ಮಂಜೂರಾತಿ ಸಂಬಂಧಿಸಿದ ಪ್ರಶ್ನೆಗೂ ಉತ್ತರಿಸಿದ ಅವರು, “ಕೆಲವು ಶಾಸಕರು ಗೋಮಾಳ ಭೂಮಿಗೆ ಸಂಬಂಧಿಸಿ ತೀರ್ಮಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಟ್ಟಿದ್ದೇವೆ ಎಂಬ ಆರೋಪ ಮಾಡುತ್ತಿದ್ದಾರೆ. ಆದರೆ, ನಾವು ನಮ್ಮ ಸರ್ಕಾರ ಬಂದ ಮೇಲೆ ಕಾನೂನನ್ನು ಮೀರಿ ಏನೂ ಮಾಡುತ್ತಿಲ್ಲ. ನಾವು ಯಾವುದನ್ನೂ ಜಿಲ್ಲಾಧಿಕಾರಿಗಳಿಗೆ ಕೊಟ್ಟಿಲ್ಲ. ಕಾನೂನನ್ನು ಯತಾವತ್ ಅನುಸರಿಸುತ್ತಿದ್ದೇವೆ. ಕಾನೂನಿನಲ್ಲಿ ಒಂದು ಅಕ್ಷರ ಕೂಡ ಬದಲಿಸಿಲ್ಲ. ನಾವೇನಾದ್ರೂ ಕಾನೂನು ಬದಲಿಸಿದ್ದರೆ ಸದಸ್ಯರು ತಿಳಿಸಲಿ ತಿದ್ದಿಕೊಳ್ಳುತ್ತೇವೆ” ಎಂದರು.

ಸಿಎಂ ವಿರುದ್ಧದ ಕೇಸಷ್ಟೇ ಅಲ್ಲ ‘ಮಹೇಶ್ ತಿಮರೋಡಿ’ ವಿರುದ್ಧ ಇರುವ ಪ್ರಕರಣಗಳೆಷ್ಟು ಗೊತ್ತಾ?

BREAKING : ‘CM‘ ವಿರುದ್ಧ ಕೊಲೆ ಆರೋಪ : ಮಹೇಶ್ ತಿಮರೋಡಿ ವಿರುದ್ಧ `FIR’ ದಾಖಲು.!

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಇಂದು ಸೊರಬದ ಉಳವಿ ಸೇರಿದಂತೆ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ | Power Cut

15/09/2025 6:15 AM1 Min Read

BIG NEWS: ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ನಾಳೆ ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

15/09/2025 6:10 AM1 Min Read

ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ, ಎಲ್ಲಾ ವಿದ್ಯಾರ್ಥಿಗಳಿಗೂ `CET’ ತರಬೇತಿ : ಸಚಿವ ಮಧು ಬಂಗಾರಪ್ಪ

15/09/2025 6:10 AM1 Min Read
Recent News

SHOCKING : ತಂಬಾಕು ಸೇವನೆಯಿಂದ ಭಾರತದಲ್ಲಿ ಪ್ರತಿವರ್ಷ 13.5 ಲಕ್ಷ ಮಂದಿ ಸಾವು.!

15/09/2025 6:16 AM

ಶಿವಮೊಗ್ಗ: ಇಂದು ಸೊರಬದ ಉಳವಿ ಸೇರಿದಂತೆ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ | Power Cut

15/09/2025 6:15 AM

BIG NEWS: ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ನಾಳೆ ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

15/09/2025 6:10 AM

ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ, ಎಲ್ಲಾ ವಿದ್ಯಾರ್ಥಿಗಳಿಗೂ `CET’ ತರಬೇತಿ : ಸಚಿವ ಮಧು ಬಂಗಾರಪ್ಪ

15/09/2025 6:10 AM
State News
KARNATAKA

ಶಿವಮೊಗ್ಗ: ಇಂದು ಸೊರಬದ ಉಳವಿ ಸೇರಿದಂತೆ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ | Power Cut

By kannadanewsnow0915/09/2025 6:15 AM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಗ್ರಾಮ ಸೇರಿದಂತೆ ಇತರೆ ಪ್ರದೇಶಗಳಲ್ಲಿ ಮೆಸ್ಕಾಂನಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಇಂದು…

BIG NEWS: ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ನಾಳೆ ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

15/09/2025 6:10 AM

ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ, ಎಲ್ಲಾ ವಿದ್ಯಾರ್ಥಿಗಳಿಗೂ `CET’ ತರಬೇತಿ : ಸಚಿವ ಮಧು ಬಂಗಾರಪ್ಪ

15/09/2025 6:10 AM

BIG NEWS: ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ವಾಪಸ್: ಸಿಎಂ ಸಿದ್ಧರಾಮಯ್ಯ ಸುಳಿವು?

15/09/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.