Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜುಲೈ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್ : `LPG ವಾಣಿಜ್ಯ ಸಿಲಿಂಡರ್’ ಬೆಲೆ 58.50 ರೂ. ಇಳಿಕೆ | LPG Cylinder Price

01/07/2025 6:39 AM

BIG NEWS: 1 ಲಕ್ಷ ಕೋಟಿ ರೂ.ಗಳ ಮಿಲಿಟರಿ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಅನುಮೋದನೆ

01/07/2025 6:34 AM

BIG UPDATE : ತೆಲಂಗಾಣದ ‘ಕೆಮಿಕಲ್ ಫ್ಯಾಕ್ಟರಿ’ಯಲ್ಲಿ ಭೀಕರ ಸ್ಫೋಟ : 15 ಮಂದಿ ಸಾವು, ಹಲವರಿಗೆ ಗಾಯ |WATCH VIDEO

01/07/2025 6:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಸಿ ನ್ಯಾಯಾಲಯಗಳಲ್ಲಿ ಬಾಕಿ ಅರ್ಜಿ ಇತ್ಯರ್ಥಕ್ಕೆ ‘ಸಚಿವ ಕೃಷ್ಣ ಬೈರೇಗೌಡ’ ಈ ಡೆಡ್ ಲೈನ್ ಫಿಕ್ಸ್
KARNATAKA

ರಾಜ್ಯದ ಎಸಿ ನ್ಯಾಯಾಲಯಗಳಲ್ಲಿ ಬಾಕಿ ಅರ್ಜಿ ಇತ್ಯರ್ಥಕ್ಕೆ ‘ಸಚಿವ ಕೃಷ್ಣ ಬೈರೇಗೌಡ’ ಈ ಡೆಡ್ ಲೈನ್ ಫಿಕ್ಸ್

By kannadanewsnow0927/03/2025 8:12 PM

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ.20ಕ್ಕೆ ಎರಡು ವರ್ಷವಾಗಲಿದೆ. ಅಷ್ಟರೊಳಗೆ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದರು.

ಗುರುವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 32,787 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ ಶೇ.82 ರಷ್ಟು ಸರಾಸರಿಯಲ್ಲಿ 26,961 ಪ್ರಕರಣಗಳಿಗೆ ಇದೀಗ ಮುಕ್ತಿ ನೀಡಲಾಗಿದೆ. ಇದೇ ಸಮಯದಲ್ಲಿ ಒಂದು ವರ್ಷಕ್ಕೆ ಮೇಲ್ಪಟ್ಟ 59,339 ಪ್ರಕರಣಗಳ ಪೈಕಿ 40,394 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ” ಎಂದು ಅಧಿಕಾರಿಗಳ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದರು.

ಮುಂದುವರೆದು, “ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದೀರಿ. ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ವಿಲೇವಾರಿ ವೇಗ ಪಡೆಯುತ್ತಿದೆ. ಆದರೂ, ಎರಡು ವರ್ಷದಲ್ಲಿ ಎಲ್ಲಾ ಬಾಕಿ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು ಎಂಬ ಇಲಾಖೆಯ ಗುರಿಯನ್ನು ಮುಟ್ಟಲು ಸಾಧ್ಯವಾಗಿಲ್ಲ. ಪರಿಣಾಮ ಇನ್ನೂ 22,967 ಪ್ರಕರಣಗಳು ಬಾಕಿ ಇವೆ. ಮುಂದಿನ ಮೇ 20ಕ್ಕೆ ಸರ್ಕಾರಕ್ಕೂ ಎರಡು ವರ್ಷ ತುಂಬುತ್ತಿದ್ದು, ಅಷ್ಟರೊಳಗೆ ಈ ಪೈಕಿ ಕನಿಷ್ಟ 10 ರಿಂದ 12 ಸಾವಿರ ಪ್ರಕರಣಗಳನ್ನು ಇತ್ಯರ್ಥಗೊಳಿಸಿ” ಎಂದರು.

ಅಲ್ಲದೆ, “ಸರ್ಕಾರದ ಕಾನೂನಿನಂತೆ ಎಸಿ ನ್ಯಾಯಾಲಯದ ಪ್ರಕಣಗಳನ್ನು ಆರು ತಿಂಗಳ ಒಳಗೆ ಮುಗಿಸಬೇಕು ಎಂಬ ನಿಯಮ ಇದೆ. ಆದರೂ, ನಿಮಯ ಮೀರಿ ಐದು ವರ್ಷಕ್ಕೂ ಮೇಲ್ಪಟ್ಟ 5826ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಆದ್ಯತೆ ಮೇರೆ ಶೀಘ್ರ ವಿಲೇವಾರಿಗೊಳಿಸಬೇಕು. ಜೊತೆಗೆ ಉಪ ವಿಭಾಗಾಧಿಕಾರಿಗಳು ತಿಂಗಳಿಗೆ 300 ಹಾಗೂ ವಿಶೇಷ ಉಪ ವಿಭಾಗಾಧಿಕಾರಿಗಳು ತಿಂಗಳಿಗೆ ಕನಿಷ್ಟ 150 ಪ್ರಕರಣಗಳನ್ನು ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಗುಣಮಟ್ಟದ ವಿಲೇವಾರಿಗೆ ಸಚಿವರ ಮೆಚ್ಚುಗೆ:

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಅಭಿಯಾನ ಮಾದರಿಯಲ್ಲಿ ಇತ್ಯರ್ಥಗೊಳಿಸಲಾಗುತ್ತಿದೆ. ಬಾಕಿ ಪ್ರಕರಣಗಳ ಇತ್ಯರ್ಥ ಹಿಂದೆದಿಗಿಂತಲೂ ಭಾರೀ ಮಟ್ಟದಲ್ಲಿ ಸುಧಾರಣೆಯಾಗಿದೆ. ಈ ನಡುವೆ ಪ್ರಕರಣಗಳ ಗುಣಮಟ್ಟದ ವಿಲೇವಾರಿಗೂ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಿರುವುದು ಉತ್ತಮ ಬೆಳವಣಿಗೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮೆಚ್ಚುಗೆ ಸೂಚಿಸಿದರು.

ಎಸಿ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ ಪ್ರಕರಣಗಳ ಪೈಕಿ ಶೇ.80 ರಷ್ಟು ಹಾಗೂ ಒಂದು ವರ್ಷಕ್ಕೆ ಮೇಲ್ಪಟ್ಟ ಶೇ.70 ರಷ್ಟು ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಆದರೆ, ಡಿಸಿ ನ್ಯಾಯಾಲಯಕ್ಕೆ ಬಂದಿರುವ ಮೇಲ್ಮನವಿಗಳ ಸಂಖ್ಯೆ ಕೇವಲ ಶೇ.6 ರಷ್ಟು ಮಾತ್ರ. ಈ ಸಂಖ್ಯೆ ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಗುಣಮಟ್ಟದ ಇತ್ಯರ್ಥಕ್ಕೆ ಸಾಕ್ಷಿಯಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಗುಣಮಟ್ಟದ ಬಗ್ಗೆ ಪ್ರಶ್ನೆ ಏಳಬಹುದು. ಹೀಗಾಗಿ ಅಧಿಕಾರಿಗಳು ಎಂದಿನಂತೆ ಎಚ್ಚರ ವಹಿಸಬೇಕಿದೆ” ಎಂದು ತಿಳಿಸಿದರು.

ದಾಖಲೆಗಳ ಡಿಜಿಟಲೀಕರಣ:

ʼಭೂ ಸುರಕ್ಷಾ ʼ ಯೋಜನೆಯ ಅಡಿಯಲ್ಲಿ ಈಗಾಗಲೇ ಭೂ ಮಾಪನಾ ಇಲಾಖೆ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಉಪ ವಿಭಾಗಾಧಿಕಾರಿಗಳ ಕಚೇರಿಗಳಲ್ಲೂ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಬೇಕು. ಅಲ್ಲದೆ, ಇಂಟರ್ ಲಿಂಕ್ ಮಾಡಿ ಸಾರ್ವಜನಿಕ ಡೊಮೈನ್ನಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಮುಂದುವರೆದು, “ಕಂದಾಯ ಇಲಾಖೆಯಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಿದ್ರೆ ಜನ ಗುರುತಿಸುತ್ತಾರೆ. ಇದನ್ನೇ ಪ್ರೇರಕ ಶಕ್ತಿಯನ್ನಾಗಿಸಿಕೊಂಡು ಜನರಿಗಾಗಿ ಮತ್ತಷ್ಟು ಕೆಲಸ ಮಾಡಲು ಶಕ್ತಿಮೀರಿ ಶ್ರಮಿಸಬೇಕು. ಇದರಿಂದ ಇಲಾಖೆ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ, ಜನರಿಗೂ ಒಳ್ಳೆಯದಾಗುತ್ತದೆ” ಎಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದಿಂದ ಕಳಪೆ ಮೂಲಸೌಕರ್ಯ ಹೊಂದಿರುವ ‘ಪ್ಯಾರಾ ಮೆಡಿಕಲ್ ಸಂಸ್ಥೆ’ ಮುಚ್ಚಲು ಆದೇಶ

ಕರ್ನಾಟಕದಲ್ಲಿ ‘393 ಹುಲಿ’ಗಳಿವೆ: ಸಮೀಕ್ಷೆ ವರದಿ | Tiger In Karnataka

Share. Facebook Twitter LinkedIn WhatsApp Email

Related Posts

ಇಂದಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike

01/07/2025 6:15 AM2 Mins Read

ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ

01/07/2025 6:10 AM3 Mins Read

BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

01/07/2025 6:05 AM2 Mins Read
Recent News

BREAKING : ಜುಲೈ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್ : `LPG ವಾಣಿಜ್ಯ ಸಿಲಿಂಡರ್’ ಬೆಲೆ 58.50 ರೂ. ಇಳಿಕೆ | LPG Cylinder Price

01/07/2025 6:39 AM

BIG NEWS: 1 ಲಕ್ಷ ಕೋಟಿ ರೂ.ಗಳ ಮಿಲಿಟರಿ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಅನುಮೋದನೆ

01/07/2025 6:34 AM

BIG UPDATE : ತೆಲಂಗಾಣದ ‘ಕೆಮಿಕಲ್ ಫ್ಯಾಕ್ಟರಿ’ಯಲ್ಲಿ ಭೀಕರ ಸ್ಫೋಟ : 15 ಮಂದಿ ಸಾವು, ಹಲವರಿಗೆ ಗಾಯ |WATCH VIDEO

01/07/2025 6:17 AM

ಇಂದಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike

01/07/2025 6:15 AM
State News
KARNATAKA

ಇಂದಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike

By kannadanewsnow0901/07/2025 6:15 AM KARNATAKA 2 Mins Read

ಬೆಂಗಳೂರು: ಬೆಂಗಳೂರು ಎಲಿವೇಟೆಡ್ ಟೋಲ್‌ವೇಯನ್ನು ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಎಲೆಕ್ಟ್ರಾನಿಕ್ಸ್ ಸಿಟಿಗೆ ಮತ್ತು ಕರ್ನಾಟಕ-ತಮಿಳುನಾಡು ಗಡಿಯ ಬಳಿಯ ಅತ್ತಿಬೆಲೆಯವರೆಗೆ ಬಳಸುವ…

ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ

01/07/2025 6:10 AM

BIG NEWS: ಇಂದು ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

01/07/2025 6:05 AM

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | II PUC Exam Result 2025

01/07/2025 5:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.