Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ದೆಹಲಿ ಏರ್ ಪೋರ್ಟ್ ನಲ್ಲಿ ಬಸ್ಸಿಗೆ ಬೆಂಕಿ: ವಿಮಾನದ ಪಕ್ಕದಲ್ಲೇ ಹೊತ್ತಿ ಉರಿದ ಬಸ್

28/10/2025 2:12 PM

SHOCKING : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಅಪಘಾತ : ಬಾಲಕಿ ಸಾವು, ನಾಲ್ವರು ಅರೆಸ್ಟ್

28/10/2025 2:09 PM

BREAKING : ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯಕರ : ಐಫೋನ್ 17 ಸೇರಿದಂತೆ 30 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ!

28/10/2025 2:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಕ್ರೋ ಫೈನಾನ್ಸ್‌ ಕಾಟದಿಂದ ತತ್ತರಿಸಿದ್ದ ಕುಟುಂಬಕ್ಕೆ ನೆರವಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
KARNATAKA

ಮೈಕ್ರೋ ಫೈನಾನ್ಸ್‌ ಕಾಟದಿಂದ ತತ್ತರಿಸಿದ್ದ ಕುಟುಂಬಕ್ಕೆ ನೆರವಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

By kannadanewsnow0904/02/2025 8:22 PM

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಮೈಕ್ರೋ ಫೈನಾನ್ಸ್‌ ಕಾಟಕ್ಕೆ ಬೇಸತ್ತಿದ್ದ ಮತ್ತೊಂದು ಕುಟುಂಬಕ್ಕೆ ನೆರವಾಗಿದ್ದಾರೆ.

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಸರಿಕಟ್ಟಿಯ ಬಸವರಾಜ ಮಾರುತಿ ಕೊಂಡಸ್ಕೊಪ್ಪ ಅವರು ಖಾಸಗಿ ಹಣಕಾಸು ಸಂಸ್ಥೆಯಿಂದ 7 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಸಾಲ ಮರುಪಾವತಿಸಲು ವಿಫಲರಾದ ಹಿನ್ನೆಲೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಯವರು 3 ತಿಂಗಳ ಹಿಂದೆ ಬಸವರಾಜ ಅವರ ಮನೆಗೆ ಬೀಗ ಹಾಕಿದ್ದರು.

ಮೈಕ್ರೋ ಫೈನಾನ್ಸ್‌ ಅವರ ಕಾಟಕ್ಕೆ ಬೇಸತ್ತ ಬಸವರಾಜ ಸಚಿವರ ಬಳಿಕ ತಮ್ಮ ಅಳಲು ತೋಡಿಕೊಂಡಿದ್ದರು. ನೊಂದ ರೈತನ ಮನವಿ ಸ್ವೀಕರಿಸಿದ ಸಚಿವರು, ತಮ್ಮ ಆಪ್ತ ಸಹಾಯಕ ಮಹಾಂತೇಶ್‌ ಹಿರೇಮಠ ಮೂಲಕ ಖಾಸಗಿ ಹಣಕಾಸು ಸಂಸ್ಥೆ ಸಿಬ್ಬಂದಿ ಜೊತೆ ಮಾತುಕತೆ ನಡೆಸಿ, ಸಾಲ ಮರು ಪಾವತಿಸಲು ಎರಡು ತಿಂಗಳ ಸಮಯಾವಕಾಶ ಕೊಡಿಸಿದರು. ಜೊತೆಗೆ ಅನಾವಶ್ಯಕವಾಗಿ ಸಾಲಗಾರರಿಗೆ ಕಾಟ ನೀಡದಂತೆ ಖಾಸಗಿ ಹಣಕಾಸು ಸಂಸ್ಥೆಯವರಿಗೆ ಸಚಿವರು ತಾಕೀತು ಮಾಡಿದರು.

ಕಳೆದ ವಾರವಷ್ಟೇ ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಮಾಧುರಿ ಲೋಹಾರ್‌ ಎನ್ನುವ ಬಾಣಂತಿ ಮತ್ತು ಅವರ ಕುಟುಂಬದವರು ಸಾಲ ತೀರಿಸಿಲ್ಲ ಎಂದು ಆರೋಪಿಸಿ ಖಾಸಗಿ ಹಣಕಾಸು ಸಂಸ್ಥೆಯವರು ಹಸಿ ಬಾಣಂತಿ ಸೇರಿದಂತೆ ಕುಟುಂಬ ಸದಸ್ಯರನ್ನು ಮನೆಯಿಂದ ಹೊರಹಾಕಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಸಚಿವರು, ಸಾಲ ಮರುಪಾವತಿಸಲು ಸಮಯಾವಕಾಶ ಕೊಡಿಸಿದ್ದಲ್ಲದೆ, ಮನೆಯ ಬೀಗ ತೆರವು ಮಾಡಿಸಿದ್ದರು.

ಸಚಿವರ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ

ಅಪಘಾತದಿಂದ ಗಾಯಗೊಂಡು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶ್ರಾಂತಿಯಲ್ಲಿದ್ದರೂ ಮೈಕ್ರೋ ಫೈನಾನ್ಸ್‌ ಕಾಟದಿಂದ ಬಳಲುತ್ತಿರುವ ಜನರಿಗೆ ನೆರವಾಗಿದ್ದಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಜನವರಿ 14 ರಂದು ಬೆಳಗಾವಿಯ ಕಿತ್ತೂರು ಬಳಿ ಸಚಿವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. 13 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ವೈದ್ಯರು ಸಚಿವರಿಗೆ ಒಂದು ತಿಂಗಳ ಕಾಲ ವಿಶ್ರಾಂತಿ ಸೂಚಿಸಿದರೂ ಸಚಿವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯವೈಖರಿ ಬಗ್ಗೆ ನಿಗಾವಹಿಸುತ್ತಿದ್ದಾರೆ. ಜೊತೆಗೆ ಮೈಕ್ರೋ ಫೈನಾನ್ಸ್‌ ಕಾಟದಿಂದ ಬೇಸತ್ತಿರುವ ಜನರ ನೆರವಿಗೂ ಬರುತ್ತಿದ್ದಾರೆ.

BREAKING: ಜೆಇಇ ಮೇನ್ 2025 ಸೆಷನ್ 1 ತಾತ್ಕಾಲಿಕ ‘ಕೀ ಉತ್ತರ’ ಬಿಡುಗಡೆ | JEE Main 2025

BIG NEWS : ವಿವಾಹಿತ ಸಹೋದರಿಯ ಆಸ್ತಿಯಲ್ಲಿ ಸಹೋದರನಿಗೆ ಹಕ್ಕಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

Share. Facebook Twitter LinkedIn WhatsApp Email

Related Posts

SHOCKING : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಅಪಘಾತ : ಬಾಲಕಿ ಸಾವು, ನಾಲ್ವರು ಅರೆಸ್ಟ್

28/10/2025 2:09 PM1 Min Read

BREAKING : ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯಕರ : ಐಫೋನ್ 17 ಸೇರಿದಂತೆ 30 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ!

28/10/2025 2:01 PM1 Min Read

BREAKING : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ `ಪಿ-ಕ್ಯಾಪ್‌’ ವಿತರಿಸಿದ CM ಸಿದ್ದರಾಮಯ್ಯ

28/10/2025 1:49 PM2 Mins Read
Recent News

BREAKING: ದೆಹಲಿ ಏರ್ ಪೋರ್ಟ್ ನಲ್ಲಿ ಬಸ್ಸಿಗೆ ಬೆಂಕಿ: ವಿಮಾನದ ಪಕ್ಕದಲ್ಲೇ ಹೊತ್ತಿ ಉರಿದ ಬಸ್

28/10/2025 2:12 PM

SHOCKING : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಅಪಘಾತ : ಬಾಲಕಿ ಸಾವು, ನಾಲ್ವರು ಅರೆಸ್ಟ್

28/10/2025 2:09 PM

BREAKING : ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯಕರ : ಐಫೋನ್ 17 ಸೇರಿದಂತೆ 30 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ!

28/10/2025 2:01 PM

BREAKING : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ `ಪಿ-ಕ್ಯಾಪ್‌’ ವಿತರಿಸಿದ CM ಸಿದ್ದರಾಮಯ್ಯ

28/10/2025 1:49 PM
State News
KARNATAKA

SHOCKING : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಅಪಘಾತ : ಬಾಲಕಿ ಸಾವು, ನಾಲ್ವರು ಅರೆಸ್ಟ್

By kannadanewsnow0528/10/2025 2:09 PM KARNATAKA 1 Min Read

ಬೆಂಗಳೂರು : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ…

BREAKING : ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯಕರ : ಐಫೋನ್ 17 ಸೇರಿದಂತೆ 30 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ!

28/10/2025 2:01 PM

BREAKING : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ `ಪಿ-ಕ್ಯಾಪ್‌’ ವಿತರಿಸಿದ CM ಸಿದ್ದರಾಮಯ್ಯ

28/10/2025 1:49 PM

BIG NEWS : ರಾಜ್ಯದ ಎಲ್ಲಾ ಗ್ರಾ.ಪಂಗಳಲ್ಲಿ `ಮಹಿಳೆಯರು & ಮಕ್ಕಳ ಕಾವಲು ಸಮಿತಿ, ಶಿಕ್ಷಣ ಕಾರ್ಯಪಡೆ’ ರಚನೆ ಕಡ್ಡಾಯ : ಸರ್ಕಾರ ಆದೇಶ

28/10/2025 1:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.