Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಕೀಲರ ಸಂಘಕ್ಕೆ 5 ಕೋಟಿ, ಕೆಂಪೇಗೌಡ ಜಯಂತಿಗೆ ವಾರ್ಷಿಕ 5 ಲಕ್ಷ ಅನುದಾನ: DKS ಘೋಷಣೆ

11/07/2025 6:22 PM

ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

11/07/2025 6:12 PM

BREAKING: ಜು.14ರಂದು ಶುಭಾಂಶು ಶುಕ್ಲಾ, ಆಕ್ಸ್-4 ಸಿಬ್ಬಂದಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹೊರಡಲಿದ್ದಾರೆ: ಆಕ್ಸಿಯಮ್

11/07/2025 6:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಯಜಮಾನಿ’ಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ‘ಗೃಹಲಕ್ಷ್ಮೀ ಯೋಜನೆ’ ಎಂದಿಗೂ ನಿಲ್ಲಲ್ಲವೆಂದು ಅಭಯ
KARNATAKA

‘ಯಜಮಾನಿ’ಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ‘ಗೃಹಲಕ್ಷ್ಮೀ ಯೋಜನೆ’ ಎಂದಿಗೂ ನಿಲ್ಲಲ್ಲವೆಂದು ಅಭಯ

By kannadanewsnow0913/07/2024 7:06 PM

ಮಂಗಳೂರು : ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.

ಶನಿವಾರ ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. ಹಾಗಾಗಿ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳು ನಿತ್ಯ ನಿರಂತರವಾಗಿ ಮುಂದುವರೆಯಲಿವೆ ಎಂದರು.

ಅಂಗನವಾಡಿ ಹೆಸರು ಬದಲಾವಣೆ

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಅಂಗನವಾಡಿ ಎನ್ನುವುದು 50 ವರ್ಷದ ಹಿಂದಿನ ಹೆಸರು. ಅವುಗಳನ್ನು ಇನ್ನು ಮುಂದೆ ಗೌರ್ನಮೆಂಟ್ ಮೊಂಟೆಸರಿ ಎಂದು ಕರೆಯಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ

ರಾಜ್ಯದ ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯವಾಗಿದೆ. ಮನೆಗೆಲಸ ಮಾಡುವ ಪೋಷಕರ ಜತೆಗೆ ಐಎಎಸ್ ಅಧಿಕಾರಿಗಳಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬ ಆಕಾಂಕ್ಷೆ ಇರುತ್ತದೆ. ಹಾಗಾಗಿ, ಎಲ್ಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವುದರೊಂದಿಗೆ ಅಂಗನವಾಡಿಗಳನ್ನು ಗೌರ್ನಮೆಂಟ್ ಮೊಂಟೆಸರಿಗಳಾಗಿ ಪರಿವರ್ತಿಸಲಾಗುವುದು ಎಂದರು.

ದ.ಕ.ಜಿಲ್ಲೆಗೆ 10 ಸರ್ಕಾರಿ ಮೊಂಟೆಸರಿ ಸೇರಿ 25 ಅಂಗನವಾಡಿ

ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಹೇಳಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ದಕ್ಷಿಣ ಕನ್ನಡದ ಜಿಲ್ಲೆಗೆ 10 ಸರಕಾರಿ ಮೊಂಟೆಸರಿಗಳು ಸೇರಿದಂತೆ 25 ಅಂಗನವಾಡಿ ಕೇಂದ್ರಗಳನ್ನು ಈ ವರ್ಷವೇ ನೀಡಲಾಗುವುದು. ಈ ಅಂಗನವಾಡಿ ಕೇಂದ್ರಗಳಿಗೆ ತಲಾ 20 ಲಕ್ಷ ರೂಪಾಯಿ ಅನುದಾನ ದೊರಕಿಸಲಾಗುವುದು ಎಂದರು.

ಕರಾವಳಿ ಲೇಖಕಿಯರ – ವಾಚಿಕೆಯರ ಸಂಘಕ್ಕೆ ರಾಜ್ಯ ಪ್ರಶಸ್ತಿ

ಕರಾವಳಿ ಲೇಖಕಿಯರು ಮತ್ತು ವಾಚಕಿಯರ ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಮಹಿಳಾ ಲೇಖಕಿಯರ ಜೊತೆ ವಾಚಕಿಯರನ್ನು ಸೇರಿಸಿಕೊಂಡು ಸಂಘವನ್ನು ಮುನ್ನಡೆಸುತ್ತಿರುವುದನ್ನು ಕಂಡು ವಿಶೇಷ ಎನಿಸುತ್ತದೆ ಎಂದರು.

ಕರಾವಳಿ ಲೇಖಕಿಯರ – ವಾಚಕಿಯರ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರಕಿರುವುದು ಸಂತಸದ ವಿಷಯ. ಹಾಗೆಯೇ ಈ ಸಂಘಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೊಡ ಮಾಡುವ ರಾಜ್ಯ ಪ್ರಶಸ್ತಿಯನ್ನು ನೀಡುವುದಾಗಿ ಇದೇ ವೇಳೆ ಸಚಿವರು ಘೋಷಿಸಿದರು.

ಮಹಿಳೆಯರ ಮಾನಸಿಕ ಸದೃಢತೆ ಹಿರಿಮೆ

ಮಹಿಳೆ ಎಂದರೆ ಸಂಘರ್ಷ. ಮಹಿಳೆಯರು ತಮ್ಮ ಅಸ್ತಿತ್ವಕ್ಕೆ ಹೋರಾಟ ಮಾಡುವುದು ಸ್ವಾತಂತ್ರ ಬಂದು 76 ವರ್ಷಗಳ ನಂತರವೂ ಮುಂದುವರಿದಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು

ಸಮಾಜದಲ್ಲಿ ಇಂದು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ, ಬಾಲಗರ್ಭಿಣಿ, ದೌರ್ಜನ್ಯ ಹೀಗೆ ನಿರಂತರ ಶೋಷಣೆ ನಡೆಯುವುದನ್ನು ಕಾಣುತ್ತಿದ್ದೇವೆ. ಆದರೂ, ಮಹಿಳೆ ಮಾನಸಿಕ ಸದೃಢತೆ ಹೊಂದಿರುವವಳು. ಇದರಿಂದಾಗಿಯೇ ಒಲಿಂಪಿಕ್ಸ್ ಕ್ರೀಡೆ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಮಹಿಳೆ ಮುಂದೆ ಇದ್ದಾಳೆ. ಹೀಗಿದ್ದರೂ ರಾಜಕೀಯದಲ್ಲಿ ಮಹಿಳೆಯರ ಹಾಜರಾತಿಗೆ ಇನ್ನೂ ಒತ್ತು ನೀಡಬೇಕಾದ ಪ್ರಸಂಗ ಸಮಾಜದಲ್ಲಿದೆ. ಆ ನಿಟ್ಟಿನಲ್ಲಿ ಕರಾವಳಿ ಲೇಖಕಿಯರ ಮತ್ತು ರಾಜಕೀಯ ಸಂಘದಂತಹ ಮಹಿಳಾಪರ ಸಂಘ- ಸಂಸ್ಥೆಗಳ ಕಾರ್ಯಾಚರಣೆಗಳು ಪೂರಕವಾಗಿವೆ ಎಂದು ಸಚಿವರು ಹೇಳಿದರು.

ಸಮಾರಂಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ಮಾತನಾಡಿದರು. ಸಂಘದ ಅಧ್ಯಕ್ಷರಾದ ಜ್ಯೋತಿ ಚೇಳ್ಯಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ಮಾಜಿ ಸಂಸದೀಯ ಕಾರ್ಯದರ್ಶಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ, ಎಂಆರ್ ಪಿಎಲ್ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿ ಮೀನಾಕ್ಷಿ, ಕಾರ್ಪೊರೇಟರ್ ಗಣೇಶ್ ಕುಲಾಲ್, ಪ್ರಾಧ್ಯಾಪಕಿ ಡಾ. ಸಬಿತಾ ಬನ್ನಾಡಿ, ಹಿರಿಯ ಲೇಖಕಿ ಇಂದಿರಾ ಹಾಲಂಬಿ ಸೇರಿದಂತೆ ಕರಾವಳಿಯ ಲೇಖಕರು, ವಾಚಿಕೆಯರು ಉಪಸ್ಥಿತರಿದ್ದರು.

ಶ್ರೀಲಂಕಾದಲ್ಲಿ ಟೀಮ್ ಇಂಡಿಯಾದ ವೈಟ್ ಬಾಲ್ ಪ್ರವಾಸದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ ಬಿಸಿಸಿಐ | IND vs SL 2024

BIG NEWS: ‘ರಾಜ್ಯ ಸರ್ಕಾರ’ದಿಂದ ಮಹಾ ಎಡವಟ್ಟು: ‘ಸತ್ತ ಅಧಿಕಾರಿ’ಯನ್ನೇ ವರ್ಗಾವಣೆ

Share. Facebook Twitter LinkedIn WhatsApp Email

Related Posts

ವಕೀಲರ ಸಂಘಕ್ಕೆ 5 ಕೋಟಿ, ಕೆಂಪೇಗೌಡ ಜಯಂತಿಗೆ ವಾರ್ಷಿಕ 5 ಲಕ್ಷ ಅನುದಾನ: DKS ಘೋಷಣೆ

11/07/2025 6:22 PM4 Mins Read

ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

11/07/2025 6:12 PM1 Min Read

ಕಸದ ಸಮಸ್ಯೆ ನಿವಾರಣೆಗಾಗಿ ಹೆಚ್ಚುವರಿಯಾಗಿ ವಾಹನಗಳ ವ್ಯವಸ್ಥೆ : ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್

11/07/2025 5:10 PM2 Mins Read
Recent News

ವಕೀಲರ ಸಂಘಕ್ಕೆ 5 ಕೋಟಿ, ಕೆಂಪೇಗೌಡ ಜಯಂತಿಗೆ ವಾರ್ಷಿಕ 5 ಲಕ್ಷ ಅನುದಾನ: DKS ಘೋಷಣೆ

11/07/2025 6:22 PM

ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

11/07/2025 6:12 PM

BREAKING: ಜು.14ರಂದು ಶುಭಾಂಶು ಶುಕ್ಲಾ, ಆಕ್ಸ್-4 ಸಿಬ್ಬಂದಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹೊರಡಲಿದ್ದಾರೆ: ಆಕ್ಸಿಯಮ್

11/07/2025 6:11 PM

Watch Video : ಚೆಂಡು ಬದಲಾಯಿಸಿದ್ಕೆ ಅಂಪೈರ್ ಜೊತೆ ವಾಗ್ವಾದಕ್ಕಿಳಿದ ‘ಶುಭ್ಮನ್ ಗಿಲ್’, ವಿಡಿಯೋ ವೈರಲ್

11/07/2025 5:50 PM
State News
KARNATAKA

ವಕೀಲರ ಸಂಘಕ್ಕೆ 5 ಕೋಟಿ, ಕೆಂಪೇಗೌಡ ಜಯಂತಿಗೆ ವಾರ್ಷಿಕ 5 ಲಕ್ಷ ಅನುದಾನ: DKS ಘೋಷಣೆ

By kannadanewsnow0911/07/2025 6:22 PM KARNATAKA 4 Mins Read

ಬೆಂಗಳೂರು:“ವಕೀಲರ ಸಂಘಕ್ಕೆ ಪ್ರತಿ ವರ್ಷ ರೂ.5 ಲಕ್ಷವನ್ನು ಕೆಂಪೇಗೌಡ ಜಯಂತಿ ಆಚರಣೆಗೆ ನೀಡಲಾಗುವುದು. ಸಂಘದ ಉಪಯೋಗಕ್ಕಾಗಿ ರೂ.5 ಕೋಟಿಯನ್ನು ಜಿಬಿಎಯಿಂದ…

ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

11/07/2025 6:12 PM

ಕಸದ ಸಮಸ್ಯೆ ನಿವಾರಣೆಗಾಗಿ ಹೆಚ್ಚುವರಿಯಾಗಿ ವಾಹನಗಳ ವ್ಯವಸ್ಥೆ : ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್

11/07/2025 5:10 PM

ನಾವೆಲ್ಲ ಚೇರ್ ಗಾಗಿ ಬಡಿದಾಡ್ತಿದ್ದೇವೆ, ಚೇರ್ ಸಿಕ್ಕರೆ ಥಟ್ಟನೆ ಬಂದು ಕೂತ್ಕೋಳೋದು ಕಲೀರಿ : ‘CM’ ಆಸೆ ಬಿಚ್ಚಿಟ್ಟ ಡಿಸಿಎಂ ಡಿಕೆ ಶಿವಕುಮಾರ್

11/07/2025 5:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.