Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPO ಅಖಾಡಕ್ಕೆ ಫೋನ್ ಪೇ ಎಂಟ್ರಿ: $1.5 ಬಿಲಿಯನ್ ಹಣ ಸಂಗ್ರಹಕ್ಕೆ ಮೆಗಾ ಪ್ಲಾನ್!

22/01/2026 1:01 PM

ALERT : ರಾಜ್ಯ ಕಾರ್ಮಿಕ ಇಲಾಖೆಯಿಂದ ಮಹತ್ವದ ಪ್ರಕಟಣೆ : ಸುಳ್ಳು ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದ್ರೆ `FIR’ ಫಿಕ್ಸ್.!

22/01/2026 12:52 PM

BREAKING : `ಭೋಜಶಾಲಾ’ ಪೂಜಾ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು | Bhojshala controversy

22/01/2026 12:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಎಸ್ ಡಿಎಲ್ ಲಾಭಾಂಶ ₹108 ಕೋಟಿ ಚೆಕ್ ಸಿಎಂ ಸಿದ್ಧರಾಮಯ್ಯಗೆ ಸಚಿವ ಎಂ.ಬಿ ಪಾಟೀಲ್ ಹಸ್ತಾಂತರ
KARNATAKA

ಕೆಎಸ್ ಡಿಎಲ್ ಲಾಭಾಂಶ ₹108 ಕೋಟಿ ಚೆಕ್ ಸಿಎಂ ಸಿದ್ಧರಾಮಯ್ಯಗೆ ಸಚಿವ ಎಂ.ಬಿ ಪಾಟೀಲ್ ಹಸ್ತಾಂತರ

By kannadanewsnow0917/12/2024 6:17 PM

ಬೆಳಗಾವಿ: ಡಿಸೆಂಬರ್ 17ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್.ಡಿ.ಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರು ಮಂಗಳವಾರ ಇಲ್ಲಿ ಹಸ್ತಾಂತರಿಸಿದರು.

ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು.

ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು.

ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು.

ನಂತರ ಮಾತನಾಡಿದ ಮುಖ್ಯಮಂತ್ರಿಯವರು, ‘ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವ ಎಂ ಬಿ ಪಾಟೀಲ ಮಾತನಾಡಿ, ‘ಈಗಿನ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕೆಎಸ್ ಡಿಲ್ ಕಾರ್ಖಾನೆಯು ಉನ್ನತಿ ಕಾಣುತ್ತಿದೆ. ಈ ಲಾಭವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮತ್ತು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಸೃಷ್ಟಿಸಲು ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಹೊಸಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದರು.

ಸಾರ್ವಜನಿಕ ಉದ್ದಿಮೆಗಳು ತಮ್ಮ ಲಾಭಾಂಶದಲ್ಲಿ ಶೇ.30ರಷ್ಟನ್ನು ಸರಕಾರಕ್ಕೆ ಕೊಡಬೇಕಾದ್ದು ನಿಯಮವಾಗಿದೆ. ಇದಕ್ಕೆ ತಕ್ಕಂತೆ ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧ್ಯಕ್ಷ ನಾಡಗೌಡ ವಿವರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವ್ಯವಸ್ಥಾಪಕ ನಿರ್ದೇಶಕ ಡಾ. ಪಿ.ಕೆ.ಎಂ.ಪ್ರಶಾಂತ್, ಕಾರ್ಖಾನೆ ಪ್ರಧಾನ ವ್ಯವಸ್ಥಾಪಕರಾದ ಕೆ.ಎಲ್.ರವೀಶ, ಗಂಗಪ್ಪ ಅವರು ಉಪಸ್ಥಿತರಿದ್ದರು.

BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi

ಇನ್ಮುಂದೆ ಆನ್‌ಲೈನ್‌ ಮೂಲಕ NEET ಪರೀಕ್ಷೆ.?: ಶೀಘ್ರ ನಿರ್ಧಾರವೆಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NEET exam

Share. Facebook Twitter LinkedIn WhatsApp Email

Related Posts

ALERT : ರಾಜ್ಯ ಕಾರ್ಮಿಕ ಇಲಾಖೆಯಿಂದ ಮಹತ್ವದ ಪ್ರಕಟಣೆ : ಸುಳ್ಳು ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದ್ರೆ `FIR’ ಫಿಕ್ಸ್.!

22/01/2026 12:52 PM1 Min Read

BIG NEWS : `MGNREGA’ ಕಾಯ್ದೆ ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ : CM ಸಿದ್ದರಾಮಯ್ಯ

22/01/2026 12:29 PM3 Mins Read

BIG NEWS : ಪೂರ್ವಜರ ಆಸ್ತಿಯನ್ನು ಕಾನೂನುಬದ್ಧವಾಗಿ ಮರಳಿ ಪಡೆಯುವುದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ

22/01/2026 12:25 PM2 Mins Read
Recent News

IPO ಅಖಾಡಕ್ಕೆ ಫೋನ್ ಪೇ ಎಂಟ್ರಿ: $1.5 ಬಿಲಿಯನ್ ಹಣ ಸಂಗ್ರಹಕ್ಕೆ ಮೆಗಾ ಪ್ಲಾನ್!

22/01/2026 1:01 PM

ALERT : ರಾಜ್ಯ ಕಾರ್ಮಿಕ ಇಲಾಖೆಯಿಂದ ಮಹತ್ವದ ಪ್ರಕಟಣೆ : ಸುಳ್ಳು ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದ್ರೆ `FIR’ ಫಿಕ್ಸ್.!

22/01/2026 12:52 PM

BREAKING : `ಭೋಜಶಾಲಾ’ ಪೂಜಾ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು | Bhojshala controversy

22/01/2026 12:40 PM

ಪೌರತ್ವ ಕೋರಿ ಶ್ರೀಲಂಕಾ ವ್ಯಕ್ತಿಯ ಮನವಿಯನ್ನು ಮಾನವೀಯತೆಯಿಂದ ಪರಿಗಣಿಸಿ: ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ

22/01/2026 12:37 PM
State News
KARNATAKA

ALERT : ರಾಜ್ಯ ಕಾರ್ಮಿಕ ಇಲಾಖೆಯಿಂದ ಮಹತ್ವದ ಪ್ರಕಟಣೆ : ಸುಳ್ಳು ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದ್ರೆ `FIR’ ಫಿಕ್ಸ್.!

By kannadanewsnow5722/01/2026 12:52 PM KARNATAKA 1 Min Read

ಬೆಂಗಳೂರು : ಸುಳ್ಳು ದಾಖಲೆ ಸಲ್ಲಿಸಿ ಕಾರ್ಮಿಕ ಕಾರ್ಡ್ ಪಡೆದ ಅನರ್ಹರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಎಫ್…

BIG NEWS : `MGNREGA’ ಕಾಯ್ದೆ ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ : CM ಸಿದ್ದರಾಮಯ್ಯ

22/01/2026 12:29 PM

BIG NEWS : ಪೂರ್ವಜರ ಆಸ್ತಿಯನ್ನು ಕಾನೂನುಬದ್ಧವಾಗಿ ಮರಳಿ ಪಡೆಯುವುದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ

22/01/2026 12:25 PM

BREAKING : ಭಾಷಣ ಮಾಡದೇ ಹೊರಟ ರಾಜ್ಯಪಾಲರನ್ನು ಅಡ್ಡಗಟ್ಟುವ ವೇಳೆ ಹರಿದ ಬಿ.ಕೆ ಹರಿಪ್ರಸಾದ್ ಬಟ್ಟೆ : ವೀಡಿಯೋ ವೈರಲ್ |WATCH VIDEO

22/01/2026 12:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.