ಬೆಂಗಳೂರು: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತ 1000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದಾರೆ.
2023ರಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದಂತ 2000 ಚಾಲಕ ಕಂ ನಿರ್ವಾಹಕರ ಹುದ್ದಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿತ್ತು. ಆ ಬಳಿಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಲ್ಲಿ 1000 ಚಾಲಕರನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, 1000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಭರ್ತಿ ಮಾಡಿಕೊಳ್ಳಬೇಕಿದೆ.
2000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಬರೋಬ್ಬರಿ 57,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. 2023ರ ಅಧಿಸೂಚನೆಯ ನೇಮಕಾತಿಗೆ 2025ರಲ್ಲಿ 1000 ಚಾಲಕರನ್ನು ನೇಮಕ ಮಾಡಿಕೊಂಡಿದ್ದರೇ, ಇನ್ನೂ 1000 ಹುದ್ದೆ ಬಾಕಿ ಇವೆ. ಅವುಗಳನ್ನು ಚಾಲಕ ಕಂ ನಿರ್ವಾಹಕರನ್ನು ಮಾತ್ರವೇ ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
ಇಂದಿಗೆ ಚಾಲಕ ಕಂ ನಿರ್ವಾಹಕರ ಹುದ್ದೆ ಅರ್ಜಿ ಸಲ್ಲಿಸಿದ್ದಂತ ಅನೇಕ ಅಭ್ಯರ್ಥಿಗಳು ವಯೋಮಿತಿ ಮೀರಿದ್ದಾರೆ. ಅವರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ, ಅವರಿಗೆ ಅನ್ಯಾಯವಾಗಬಾರದು ಎನ್ನುವ ಸದುದ್ದೇಶದಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಗಾಗಿ ಡಿಪಿಎಆರ್ ಮತ್ತು ಕಾನೂನು ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಆ ಪ್ರಸ್ತಾವನೆಗೆ ಅನುಮೋದಿಸಿದ ಬಳಿಕ, NWKRTCಯ 1000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತ ವಯೋಮಿತಿ ಮೀರಿದಂತ ಅಭ್ಯರ್ಥಿಗಳಿಗೂ ಅವಕಾಶ ಸಿಗುವಂತೆ ಆಗಲಿದೆ. ಆ ಮೂಲಕ ಚಾಲಕ ಕಂ ನಿರ್ವಾಹಕರ 1000 ಹುದ್ದೆಗೆ ನೇಮಕಗೊಳ್ಳಲು ಅರ್ಹತೆ ಪಡೆದಂತೆ ಆಗಲಿದೆ.
ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!