Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video : ಚೀನಾದ ‘ಲೈವ್ ಕನ್ಸರ್ಟ್’ನಲ್ಲಿ ಮನುಷ್ಯರಂತೆ ‘ರೋಬೋಟ್’ಗಳು ಮಸ್ತ್ ಡ್ಯಾನ್ಸ್, ವಿಡಿಯೋ ವೈರಲ್

20/12/2025 3:13 PM

ಕಲ್ಯಾಣ ಕರ್ನಾಟಕ ಜನತೆಗೆ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್: 112 ನಗರ ಸಾರಿಗೆ ವಾಹನಗಳಿಗೆ ಚಾಲನೆ

20/12/2025 3:03 PM

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಸಚಿವ ಶರಣಪ್ರಕಾಶ್‌ ಪಾಟೀಲ್‌

20/12/2025 2:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲ್ಯಾಣ ಕರ್ನಾಟಕ ಜನತೆಗೆ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್: 112 ನಗರ ಸಾರಿಗೆ ವಾಹನಗಳಿಗೆ ಚಾಲನೆ
KARNATAKA

ಕಲ್ಯಾಣ ಕರ್ನಾಟಕ ಜನತೆಗೆ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್: 112 ನಗರ ಸಾರಿಗೆ ವಾಹನಗಳಿಗೆ ಚಾಲನೆ

By kannadanewsnow0920/12/2025 3:03 PM

ವಿಜಯಪುರ: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಿದ್ದಾರೆ.

ಇಂದು ವಿಜಯಪುರದಲ್ಲಿ 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಲಾಯಿತು. ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆಗೆ 400 ಹೊಸ ಬಸ್ಸುಗಳನ್ನು ಸೇರ್ಪಡೆ ಗೊಳಿಸಲು ಈಗಾಗಲೇ ಕಾರ್ಯಾದೇಶ ನೀಡಲಾಗಿದೆ.

ಇಂದು ಚಾಲನೆ ನೀಡಲಾದ ಒಟ್ಟು 112 ನೂತನ ನಗರ ಸಾರಿಗೆ ಬಸ್ ಗಳನ್ನು ನಗರ ಭೂ ಸಾರಿಗೆ ನಿರ್ದೇಶನಾಲಯ, (Directorate of Urban Land Transport (DULT)) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಯೋಜನೆ ಯಡಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಈ ವಾಹನಗಳನ್ನು ವಿಜಯಪುರ ವಿಭಾಗಕ್ಕೆ 27, ವಿಜಯನಗರಕ್ಕೆ 25, ಕಲಬುರಗಿಗೆ 25, ರಾಯಚೂರಿಗೆ 18, ಬಳ್ಳಾರಿಗೆ 10, ಬೀದರಕ್ಕೆ 04 ಮತ್ತು ಯಾದಗಿರಿಗೆ 03 ಹಂಚಿಕೆ ಮಾಡಲಾಗಿದೆ.

ಇದೇ ಯೋಜನೆಯಡಿಯಲ್ಲಿ ಮುಂದಿನ ದಿನಗಳಲ್ಲಿ ಸೇರ್ಪಡೆಗೊಳ್ಳಲಿರುವ 30 ಬಸ್ ಗಳನ್ನು ಅವಶ್ಯವಿರುವ ವಿಭಾಗ/ಘಟಕಕ್ಕೆ ಮಾನ್ಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕಕರಸಾ ನಿಗಮ ರವರು ತೀರ್ಮಾನಿಸಿ ನಿಯೋಜಿಸಲು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ 56 ಪ್ರತಿಷ್ಠಿತ ವಾಹನಗಳ ಸೇರ್ಪಡೆ ಮಾಡಲಾಗುತ್ತಿದ್ದು, ಕಾರ್ಯಾದೇಶ ನೀಡಲಾಗಿದೆ

ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೊಸದಾಗಿ 56 ಪ್ರತಿಷ್ಠಿತ ಬಸ್ ಗಳನ್ನು ಸೇರ್ಪಡೆಗೊಳಿಸಲಾಗುತ್ತಿದ್ದು, ಅದರಲ್ಲಿ, 20 ಎಸಿ ಸ್ಲೀಪರ್, 20 ನಾನ್ ಎಸಿ ಸ್ಲೀಪರ್ ಮತ್ತು 16 ಎಸಿ ಸೀಟರ್ ವಾಹನಗಳಾಗಿರುತ್ತದೆ.

ಅದೇ ರೀತಿ ಮುಂದಿನ ದಿನಗಳಲ್ಲಿ ಕ.ಕ.ರ.ಸಾ. ನಿಗಮಕ್ಕೆ ಹೊಸದಾಗಿ ಸೇರ್ಪಡೆಯಾಗಲಿರುವ 225 ವಿದ್ಯುತ್ ಚಾಲಿತ ವಾಹನಗಳನ್ನು ಸೇರಿಸಲಾಗುತ್ತಿದ್ದು, ಕಲಬುರ್ಗಿ ಜಿಲ್ಲೆಗೆ 100, ವಿಜಯಪುರ ಜಿಲ್ಲೆಗೆ 75 ಮತ್ತು 50 ಬಸ್ಸುಗಳನ್ನು ಬಳ್ಳಾರಿಗೆ ನೀಡಲು ತೀರ್ಮಾನಿಸಲಾಗಿದೆ.

ಇಂದು ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂ.ಬಿ ಪಾಟೀಲ್, ಬೃಹತ್ ಮತ್ತು ಮಧ್ಯಮ ಕೈಗಾರಿಗೆಗಳ ಸಚಿವರು, ಬಸನಗೌಡ ಆರ್. ಪಾಟೀಲ್ ಯತ್ನಾಳ್, ಶಾಸಕರು, ವಿಜಯಪುರ, ಕಟಕದೊಂಡ ವಿಠ್ಠಲ, ಶಾಸಕರು, ನಾಗಠಾಣ, ಅರುಣ್ ಕುಮಾರ್ ಎಂ.ವೈ. ಪಾಟೀಲ, ಅಧ್ಯಕ್ಷರು, ಕಕರಸಾ ನಿಗಮ ಮತ್ತು ಡಾ. ಸುಶೀಲ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಕಕರಸಾ ನಿಗಮ ರವರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಸಚಿವ ಶರಣಪ್ರಕಾಶ್‌ ಪಾಟೀಲ್‌

20/12/2025 2:57 PM1 Min Read

ಮಂಡ್ಯ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

20/12/2025 2:53 PM1 Min Read

BREAKING : ಬಾಗಲಕೋಟೆಯಲ್ಲಿ ಬುದ್ಧಿಮಾಂದ್ಯ ಮಕ್ಕಳ ಕಣ್ಣಿಗೆ ಕಾರದಪುಡಿ ಎರಚಿ, ಬೆಲ್ಟ್ ನಿಂದ ಹಲ್ಲೆ ಮಾಡಿದ ನೀಚ ಶಿಕ್ಷಕ!

20/12/2025 2:48 PM1 Min Read
Recent News

Watch Video : ಚೀನಾದ ‘ಲೈವ್ ಕನ್ಸರ್ಟ್’ನಲ್ಲಿ ಮನುಷ್ಯರಂತೆ ‘ರೋಬೋಟ್’ಗಳು ಮಸ್ತ್ ಡ್ಯಾನ್ಸ್, ವಿಡಿಯೋ ವೈರಲ್

20/12/2025 3:13 PM

ಕಲ್ಯಾಣ ಕರ್ನಾಟಕ ಜನತೆಗೆ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್: 112 ನಗರ ಸಾರಿಗೆ ವಾಹನಗಳಿಗೆ ಚಾಲನೆ

20/12/2025 3:03 PM

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಸಚಿವ ಶರಣಪ್ರಕಾಶ್‌ ಪಾಟೀಲ್‌

20/12/2025 2:57 PM

ಮಂಡ್ಯ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

20/12/2025 2:53 PM
State News
KARNATAKA

ಕಲ್ಯಾಣ ಕರ್ನಾಟಕ ಜನತೆಗೆ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್: 112 ನಗರ ಸಾರಿಗೆ ವಾಹನಗಳಿಗೆ ಚಾಲನೆ

By kannadanewsnow0920/12/2025 3:03 PM KARNATAKA 2 Mins Read

ವಿಜಯಪುರ: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು 112 ನಗರ ಸಾರಿಗೆ ವಾಹನಗಳಿಗೆ…

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಸಚಿವ ಶರಣಪ್ರಕಾಶ್‌ ಪಾಟೀಲ್‌

20/12/2025 2:57 PM

ಮಂಡ್ಯ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

20/12/2025 2:53 PM

BREAKING : ಬಾಗಲಕೋಟೆಯಲ್ಲಿ ಬುದ್ಧಿಮಾಂದ್ಯ ಮಕ್ಕಳ ಕಣ್ಣಿಗೆ ಕಾರದಪುಡಿ ಎರಚಿ, ಬೆಲ್ಟ್ ನಿಂದ ಹಲ್ಲೆ ಮಾಡಿದ ನೀಚ ಶಿಕ್ಷಕ!

20/12/2025 2:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.