ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಉತ್ತರ ಕರ್ನಾಟಕದ ಬಗೆಗಿನ ಆರೋಪಗಳ ಕುರಿತಂತೆ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಈ ಕೆಳಕಂಡಂತೆ ದಾಖಲೆ ಸಹಿತ ಉತ್ತರ ನೀಡಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅರವಿಂದ್ ಬೆಲ್ಲದ್ ಅವರೇ, ಉತ್ತರ ಕರ್ನಾಟಕದ ಬಗೆಗಿನ ತಮ್ಮ ಕಾಳಜಿಗೆ ಸ್ಪಂದಿಸುತ್ತಾ, ಈ ಕಾಳಜಿಯು ತಮ್ಮ ಬಿ.ಜೆ.ಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ತೋರಿದ್ದರೆ, ಉತ್ತರ ಕರ್ನಾಟಕದ ಜನರಿಗೆ ಸಾಕಷ್ಟು ಸಾರಿಗೆ ಸೌಲಭ್ಯವನ್ನು ನೀಡಿ, ಸಮಗ್ರ ಅಭಿವೃದ್ಧಿ ಕಾರ್ಯವನ್ನು ಮಾಡಬಹುದಿತ್ತೇನೋ. ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಂದು ನಷ್ಟಕ್ಕೆ ಸಿಲುಕಿಸಿ ಹೋಗಿರುವ ತಮ್ಮ ಪಕ್ಷದ ಬಗ್ಗೆ ಕೆಲವೊಷ್ಟು ಸರಿಯಾದ ಮಾಹಿತಿ ಇಟ್ಟುಕೊಳ್ಳಿ, ಟ್ಟೀಟ್ ಮಾಡಲು ಇದು ಸಹಕಾರಿಯಾಗುತ್ತದೆ. ಇಲ್ಲವಾದರೆ ಕೈ ತೋರಿಸಿ ಅವಲಕ್ಷಣ ಮಾಡಿಸಿಕೊಂಡಂತೆ ಆಗುತ್ತದೆ ಎಂದಿದ್ದಾರೆ.
ಯಡಿಯೂರಪ್ಪ , ಬೊಮ್ಮಾಯಿ ಆಡಳಿತದಲ್ಲಿ ಬಿಟ್ಟು ಹೋಗಿದ್ದ ರೂ.5900 ಕೋಟಿ ನಷ್ಟ ಹಾಗೂ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ , ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿ ಗಳನ್ನು ತೀರಿಸುವ ಹೊಣೆಗಾರಿಕೆ ಬಿಟ್ಟು ಹೋಗಿರುವ ತಮ್ಮ ವಿಫಲ ಆಡಳಿತದ ಭಾರವನ್ನು ಹೊತ್ತು ಸಂಸ್ಥೆಗಳನ್ನು ನಾವು ಮುನ್ನಡೆಸುತ್ತಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.
@BelladArvind ಅವರೇ, ಉತ್ತರ ಕರ್ನಾಟಕದ ಬಗೆಗಿನ ತಮ್ಮ ಕಾಳಜಿಗೆ ಸ್ಪಂದಿಸುತ್ತಾ, ಈ ಕಾಳಜಿಯು ತಮ್ಮ @BJP4Karnataka ಸರ್ಕಾರದ ಆಡಳಿತದ ಅವಧಿಯಲ್ಲಿ ತೋರಿದ್ದರೆ, ಉತ್ತರ ಕರ್ನಾಟಕದ ಜನರಿಗೆ ಸಾಕಷ್ಟು ಸಾರಿಗೆ ಸೌಲಭ್ಯವನ್ನು ನೀಡಿ, ಸಮಗ್ರ ಅಭಿವೃದ್ಧಿ ಕಾರ್ಯವನ್ನು ಮಾಡಬಹುದಿತ್ತೇನೋ.
ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಂದು ನಷ್ಟಕ್ಕೆ… https://t.co/LmYm7xBEsM
— Ramalinga Reddy (@RLR_BTM) March 26, 2025
ತಮ್ಮ ಪಕ್ಷದ ಆಡಳಿತದ ಅವಧಿಯಲ್ಲಿ ಬಿ.ಎಂ.ಟಿ.ಸಿ ಹೊರತುಪಡಿಸಿ, ಇತರೆ ಸಾರಿಗೆ ಸಂಸ್ಥೆಗಳಲ್ಲಿ ಒಂದೇ ಒಂದು ಹೊಸ ಬಸ್ ಸೇರ್ಪಡೆ ಆಗಿಲ್ಲ. ಒಂದೇ ಒಂದು ನೇಮಕಾತಿ ಮಾಡಿಲ್ಲ. ಡಕೋಟ ಬಸ್ ದಯಪಾಲಿಸಿರುವ ಕೀರ್ತಿ ತಮ್ಮ ಬಿ.ಜೆಪಿ ಆಡಳಿತಕ್ಕೆ ಸಲ್ಲಬೇಕು. ತಮ್ಮ ಬಿ.ಜೆ.ಪಿ ಪಕ್ಷದ ಆಡಳಿತದ ಅವಧಿಯಲ್ಲಿ, ಬಿ.ಎಂ.ಟಿ.ಸಿ ಯಲ್ಲಿ ಕಾರ್ಯಾಚರಣೆಗೊಳಿಸಿ ಹಳೆಯದಾದ 100 ಬಸ್ಸುಗಳನ್ನು 2022 ರಲ್ಲಿ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯವರಿಗೆ ಕಳುಹಿಸಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಭಾಗದಲ್ಲಿ ಓಡಿಸಿದ್ದು ಮರೆತಿದೆಯೇ ಬೆಲ್ಲದ್ ಅವರೇ? ಎಂದು ಪ್ರಶ್ನಿಸಿದ್ದಾರೆ.
ನಮ್ಮ ಎರಡು ವರ್ಷಕ್ಕೂ ಕಡಿಮೆ ಆಡಳಿತ ಅವಧಿಯಲ್ಲಿ 4956 ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 856 ಹೊಸ ಬಸ್ಸುಗಳು ,ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 1023 ಹೊಸ ಬಸ್ಸುಗಳನ್ನು ಅಮೋಘವರ್ಷ, ಕಲ್ಯಾಣ ರಥ ಎಂಬ ವಿವಿಧ ಮಾದರಿ ಹಾಗೂ ಹೆಸರಿನಲ್ಲಿ ಕಳೆದ ಎರಡು ವರ್ಷದಲ್ಲಿ ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ನೇಮಕಾತಿ ಸ್ಥಗಿತಗೊಳಿಸಿದ್ದ ತಮ್ಮ ಪಕ್ಷವು, ನಾವು ಅಧಿಕಾರಕ್ಮೆಬಂದ ಕೂಡಲೇ ಸಾರಿಗೆ ಸಂಸ್ಥೆಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದ್ದು, 2300 ಹುದ್ದೆಗಳಿಗೆ ಈಗಾಗಲೇ ಆದೇಶ ಪತ್ರ ನೀಡಲಾಗಿದ್ದು, 6500 ಹುದ್ದೆಗಳ ನೇಮಕಾತಿ ಪ್ರಗತಿಯಲ್ಲಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 1609 ಚಾಲಕ/ ನಿರ್ವಾಹಕರಿಗೆ ನೇಮಕಾತಿ ಆದೇಶ ನೀಡಲಾಗಿದ್ದು, ವಾಯವ್ಯ ರಸ್ತೆ ಸಾರಿಗೆ ನಿಗಮದಲ್ಲಿ 2000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿದೆ ಎಂದಿದ್ದಾರೆ.
ಸಾರಿಗೆ ಸಂಸ್ಥೆಗಳಲ್ಲಿ ಕಳೆದ ಎರಡು ವರ್ಷದಲ್ಲಿ, 1000 ಅನುಕಂಪದ ಆಧಾರದ ನೇಮಕಾತಿ ಮಾಡಲಾಗಿದ್ದು, ಇದರಲ್ಲಿ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 223, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 207 ಅವಲಂಬಿತರಿಗೆ ಹುದ್ದೆ ನೀಡಲಾಗಿದೆ. ಮುಖ್ಯಮಂತ್ರಿಗಳು ಘೋಷಿಸಿರುವ 2000 ಹೊಸ ಬಸ್ಸುಗಳ ಸೇರ್ಪಡೆ ಕೂಡ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳನ್ನು ಒಳಗೊಂಡಂತೆ ಎಂಬುದು ತಮಗೆ ತಿಳಿಯದಿರುವುದು ನಿಜಕ್ಕೂ ವಿಷಾದನೀಯ ಎಂಬುದಾಗಿ ಹೇಳಿದ್ದಾರೆ.
BIG NEWS : ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ರಾಜ್ಯದ 224 ಶಾಸಕರ ಪೈಕಿ ನಾನು ಒಬ್ಬ : ಶಾಸಕ ಶಿವರಾಂ ಹೆಬ್ಬಾರ್