Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲಘಟಗಿಯಲ್ಲಿನ ಸಚಿವ ಸಂತೋಷ್ ಲಾಡ್ ಜನತಾ ದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್, 3,000ಕ್ಕೂ ಹೆಚ್ಚು ಅರ್ಜಿ ವಿಲೇವಾರಿ

28/10/2025 7:22 PM

Good News: ಇಂದಿನಿಂದ ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ, ಹೆಸರುಕಾಳು, ಖರೀದಿ ಆರಂಭ

28/10/2025 7:17 PM

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

28/10/2025 7:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳ ಆಸ್ತಿ ವರ್ಗಾವಣೆ ರದ್ದತಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಸೂಚನೆ
KARNATAKA

ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳ ಆಸ್ತಿ ವರ್ಗಾವಣೆ ರದ್ದತಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಸೂಚನೆ

By kannadanewsnow0916/03/2025 3:05 PM

ಬೆಂಗಳೂರು : ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ “ಬ್ರೇಕ್‌” ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ.

ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಈ ವಿಷಯವನ್ನು ಅರಿತ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್, ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ, ಕೂಡಲೇ
ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ

ಕಳೆದ ಒಂದು ವಾರದಿಂದ ವಿಕಾಸ ಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಇತರ ಸದಸ್ಯರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು, ಈ ಕುರಿತ ಪ್ರಕರಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು (ಡಿಎಂಇ) ಕೂಡಲೇ ಸಹಾಯಕ ಆಯುಕ್ತರಿಗೆ (ಕಂದಾಯ ಉಪವಿಭಾಗ) ದೂರುಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದರು.

ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಪರಿತ್ಯಕ್ತ ಪೋಷಕರಿಗೆ ಸಚಿವರು ಕರೆ ನೀಡಿದರು.

ತಮ್ಮ ಮಕ್ಕಳು ನಮ್ಮನ್ನು ನೋಡಿಕೊಳ್ಳಲು ಆಗದೇ, ತೊರೆದಿದ್ದಾರೆ. ಕೆಲವರು ಆರ್ಥಿಕ ಸಂಕಷ್ಟಗಳಿಂದ ನಮ್ಮನ್ನು ಇಲ್ಲಿ ಬಿಟ್ಟಿದ್ದಾರೆ. ನಮ್ಮ ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ನಂತರ ಮಕ್ಕಳು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಸೇರಿಸಿ ಹೊರಟುಹೋಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಊಟ, ವಸತಿ, ಆಶಯ ಉಚಿತವಾಗಿ ಸಿಗುತ್ತದೆ ಎಂಬ ಉದ್ದೇಶದಿಂದ ನಮ್ಮನ್ನು ಇಲ್ಲಿ ಬಿಟ್ಟುಹೋಗಿದ್ದಾರೆ ಎಂದು ಪರಿತ್ಯಕ್ತ ಪೋಷಕರು ತಿಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂಥ ಪರಿತ್ಯಕ್ತ ಹಿರಿಯ ನಾಗರಿಕರನ್ನು ಬಿಐಎಂಎಸ್ ಅಧಿಕಾರಿಗಳು ಬೆಳಗಾವಿ ಮತ್ತು ಸುತ್ತಮುತ್ತಲಿನ 70 ಹಿರಿಯ ನಾಗರಿಕರ ನಿವೃತ್ತಿ ಗೃಹಗಳಲ್ಲಿ ಅಥವಾ ವೃದ್ಧಾಶ್ರಮಗಳಲ್ಲಿ ಆಶ್ರಯ ಕಲ್ಪಿಸಿಕೊಟ್ಟಿದ್ದಾರೆ. ಆದರೆ ಇನ್ನೂ ಅನೇಕರು ಆಸ್ಪತ್ರೆಗಳಲ್ಲಿಯೇ ಇದ್ದಾರೆ.

ಹಿರಿಯ ನಾಗರಿಕರ ಕಾಯ್ದೆಯಡಿ ಕಾನೂನು ಕ್ರಮ

ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಅಡಿಯಲ್ಲಿ ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ದೂರುಗಳನ್ನು ಸಲ್ಲಿಸಬೇಕು ಎಂದು ಡಾ. ಪಾಟೀಲ್ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

“ಈ ಕಾನೂನಿನ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರಿಗೆ ಆರ್ಥಿಕ ಮತ್ತು ವೈದ್ಯಕೀಯ ಬೆಂಬಲವನ್ನು ಒದಗಿಸಬೇಕು ಎಂಬ ನಿಯಮವಿದೆ. ಅವರು ಹಾಗೆ ಮಾಡಲು ವಿಫಲವಾದರೆ, ಪೋಷಕರು ತಮ್ಮ ಮಕ್ಕಳ ಪರವಾಗಿ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ” ಎಂದು ಡಾ. ಪಾಟೀಲ್ ಹೇಳಿದರು.

ಕಾಯ್ದೆಯ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ತಿಳಿಸಲಾಗಿದೆ.

‘ದಡೇಸೂಗುರು ಪತ್ನಿ’ ಎಂದು ಹೇಳಿಕೊಂಡಿದ್ದ ಮಹಿಳಾ ಅಧಿಕಾರಿ ವಿರುದ್ಧ ‘ಸುಮೋಟೋ ಕೇಸ್’ ದಾಖಲು

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!

Share. Facebook Twitter LinkedIn WhatsApp Email

Related Posts

ಕಲಘಟಗಿಯಲ್ಲಿನ ಸಚಿವ ಸಂತೋಷ್ ಲಾಡ್ ಜನತಾ ದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್, 3,000ಕ್ಕೂ ಹೆಚ್ಚು ಅರ್ಜಿ ವಿಲೇವಾರಿ

28/10/2025 7:22 PM2 Mins Read

Good News: ಇಂದಿನಿಂದ ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ, ಹೆಸರುಕಾಳು, ಖರೀದಿ ಆರಂಭ

28/10/2025 7:17 PM1 Min Read

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

28/10/2025 7:13 PM1 Min Read
Recent News

ಕಲಘಟಗಿಯಲ್ಲಿನ ಸಚಿವ ಸಂತೋಷ್ ಲಾಡ್ ಜನತಾ ದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್, 3,000ಕ್ಕೂ ಹೆಚ್ಚು ಅರ್ಜಿ ವಿಲೇವಾರಿ

28/10/2025 7:22 PM

Good News: ಇಂದಿನಿಂದ ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ, ಹೆಸರುಕಾಳು, ಖರೀದಿ ಆರಂಭ

28/10/2025 7:17 PM

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

28/10/2025 7:13 PM

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

28/10/2025 7:04 PM
State News
KARNATAKA

ಕಲಘಟಗಿಯಲ್ಲಿನ ಸಚಿವ ಸಂತೋಷ್ ಲಾಡ್ ಜನತಾ ದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್, 3,000ಕ್ಕೂ ಹೆಚ್ಚು ಅರ್ಜಿ ವಿಲೇವಾರಿ

By kannadanewsnow0928/10/2025 7:22 PM KARNATAKA 2 Mins Read

ಹುಬ್ಬಳ್ಳಿ : ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನವನ್ನು ಆಯೋಜನೆ ಮಾಡಲಾಗುತ್ತಿದ್ದು, ಈವರೆಗೆ 3 ಸಾವಿರಕ್ಕೂ…

Good News: ಇಂದಿನಿಂದ ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ, ಹೆಸರುಕಾಳು, ಖರೀದಿ ಆರಂಭ

28/10/2025 7:17 PM

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

28/10/2025 7:13 PM

ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

28/10/2025 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.