Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ರಾಜ್ಯದಲ್ಲಿ ಮುಂದಿನ 5 ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

09/07/2025 7:35 AM

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

09/07/2025 7:30 AM

Good News ; ‘ಸ್ತನ ಕ್ಯಾನ್ಸರ್’ನಿಂದ ಶಾಶ್ವತ ಮುಕ್ತಿ, 75% ರೋಗ ನಿರೋಧಕ ಪ್ರತಿಕ್ರಿಯೆ ತೋರಿಸಿದ ‘ಹೊಸ ಲಸಿಕೆ’!

09/07/2025 7:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಮುಂದಿನ ವರ್ಷದಿಂದ ಐವರಿಗೆ ಕಾಯಕ ಶರಣರ ಹೆಸರಿನಲ್ಲಿ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ
KARNATAKA

BIG NEWS: ಮುಂದಿನ ವರ್ಷದಿಂದ ಐವರಿಗೆ ಕಾಯಕ ಶರಣರ ಹೆಸರಿನಲ್ಲಿ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ

By kannadanewsnow0910/02/2025 9:27 PM

ಬೆಂಗಳೂರು: ಮುಂದಿನ ವರ್ಷದಿಂದ ಐವರು ಶರಣರಾದ ಮಾದರ ಚೆನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ಎಸ್ .ತಂಗಡಗಿ ಅವರು ಘೋಷಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಬಸವಹರಳಯ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾಯಕ ಶರಣರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಐವರು ಶರಣರ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕೆಂದು ವೇದಿಕೆ ಮೇಲಿದ್ದ ಗಣ್ಯರ ಮನವಿಗೆ ಕೂಡಲೇ ಸ್ಪಂದಿಸಿದ ಸಚಿವರು, ಪ್ರಶಸ್ತಿ ನೀಡುವ ಸಂಬಂಧ ಸಮಿತಿಯನ್ನು ರಚಿಸಿ, ಮುಂದಿನ ವರ್ಷದಿಂದ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.

ಬೀದರ್ ನಲ್ಲಿ ದೋಹರ್ ಕಕ್ಕಯ್ಯ ಅವರ ಸ್ಮಾರಕ ನಿರ್ಮಿಸಲು ಇಲಾಖೆ ವತಿಯಿಂದ ಕ್ರಮಕೈಗೊಳ್ಳಲಾಗುವುದು ಸಚಿವರು ಇದೇ ವೇಳೆ ಸಚಿವರು ಭರವಸೆ ನೀಡಿದರು.

ಇನ್ನು ಸಮಾಜದ ವಿವಿಧ ಸ್ತರಗಳಿಂದ ಬಂದ ಪ್ರತಿಯೊಬ್ಬ ವಚನಕಾರರೂ ತಮ್ಮ ಕಾಯಕಗಳನ್ನು ಮಾಡುತ್ತಲೇ, ತಮ್ಮ ಜೀವನಾನುಭವಗಳನ್ನು ವಚನಗಳ ಮೂಲಕ ಹಾಡಿ ಈ ಲೋಕಕ್ಕೆ ಬಹುದೊಡ್ಡ ಉಪಕಾರ ಮಾಡಿದ್ದಾರೆ ಎಂದರು.

ಸಮಾಜದ ಎಲ್ಲಾ ಸೌಲಭ್ಯ ಮತ್ತು ಅವಕಾಶಗಳು ಸಮಾಜದ ಅತ್ಯಂತ ಕಟ್ಟಕಡೆಯ ಸ್ತರದ ವ್ಯಕ್ತಿಗೂ ಸಲ್ಲಬೇಕು ಎಂಬ ಉದ್ದೇಶದಿಂದಾಗಿ ಎಲ್ಲರಿಗೂ ವಿದ್ಯೆ, ದಾಸೋಹ, ಲಿಂಗಸಂಸ್ಕಾರ ನೀಡಿ ವಚನಕಾರರನ್ನಾಗಿಸುವ ಮೂಲಕ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ನೀತಿಯನ್ನು ತೋರಿದ ಈ ಯುಗದಲ್ಲಿ ಸಾವಿರಾರು ಶರಣರು, ನೂರಾರು ವಚನಕಾರರು ಆಗಿಹೋಗಿದ್ದಾರೆ ಎಂದು ಮೆಲುಕು ಹಾಕಿದರು.

ಆದರ್ಶಗಳನ್ನು ಪಾಲಿಸಿ:

ಶರಣರು ನಡೆದ ಬಂದ ಹಾದಿಯಲ್ಲೇ ನಾವು ಸಾಗಬೇಕು. ಶರಣರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಪ್ರತಿಯೊಂದು ಸಮಾಜದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿರುತ್ತವೆ. ಆದರೆ ಅದೆಲ್ಲವನ್ನು ಪಕ್ಕಕ್ಕಿಟ್ಟು ಮುನ್ನಡೆದಾಗ ಸಮಾಜಕ್ಕೆ ಒಳಿತಾಗುತ್ತದೆ. ಒಗ್ಗಟ್ಟಿನಿಂದ ಆಯಾ ಸಮುದಾಯಗಳು ಗಟ್ಟಿಯಾಗುತ್ತವೆ. ಸಂಘಟನೆ ಮತ್ತು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ಸಣ್ಣ ಸಮಾಜಗಳ ಬಗ್ಗೆ ಒಲವು ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ರಾಜ್ಯದಲ್ಲಿ ಎಸ್ ಸಿಪಿ ಮತ್ತು ಟಿಎಸ್ಪಿ ಯೋಜನೆಗಳನ್ನು ಜಾರಿಗೆ ತಂದವರು ನಮ್ಮ ಮುಖ್ಯಮಂತ್ರಿಗಳು. ಹಿಂದುಳಿದ ಮತ್ತು ಅತೀ ಹಿಂದುಳಿದ ಸಮುದಾಯದವರ ಅಭಿವೃದ್ಧಿಗೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಅಖಿಲ ಕರ್ನಾಟಕ ಡೋಹರ ಕಕ್ಕಯ್ಯ ಸಮಾಜದ ಅಧ್ಯಕ್ಷ ಸಂತೋಷ್ ಸುರೇಂದ್ರ ಸವಣೂರು, ಮಾದಿಗ ಸಮುದಾಯದ ಎಂ.ಗುರುಮೂರ್ತಿ, ಆದಿಜಾಂಬವ ಸಮಾಜದ ಕಾರ್ಯಾಧ್ಯಕ್ಷ ಸಿದ್ದರಾಕು, ಇಲಾಖೆ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

BREAKING: ಜೆಇಇ ಮೇನ್ 2025 ಅಂತಿಮ ಕೀ ಉತ್ತರ ಪ್ರಕಟ: 12 ಪ್ರಶ್ನೆಗಳನ್ನು ಔಟ್ | JEE Main 2025

Shocking News: ಆಸ್ಪತ್ರೆಯಲ್ಲಿ ಸತ್ತಿದ್ದಾನೆಂದು ಊರಿಗೆ ತರುವಾಗ ಬದುಕಿದ ವ್ಯಕ್ತಿ: ಶಾಕ್ ಆದ ಹಾವೇರಿ ಜನರು

‘ಆಧಾರ್’ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲ.! ಈಗಲೇ ಆನ್ ಲೈನ್’ನಲ್ಲಿ ಅರ್ಜಿ ಸಲ್ಲಿಸಿ!

Share. Facebook Twitter LinkedIn WhatsApp Email

Related Posts

ಗಮನಿಸಿ : ರಾಜ್ಯದಲ್ಲಿ ಮುಂದಿನ 5 ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

09/07/2025 7:35 AM1 Min Read

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

09/07/2025 7:30 AM2 Mins Read

BIG NEWS : ಮೀಸಲು ಹೆಚ್ಚಳ ಆದೇಶ ಹಿನ್ನೆಲೆ : 384 `KAS’ ನೇಮಕಾತಿ ಪ್ರಕ್ರಿಯೆ ಹಠಾತ್ತನೆ ಸ್ಥಗಿತ.!

09/07/2025 7:22 AM1 Min Read
Recent News

ಗಮನಿಸಿ : ರಾಜ್ಯದಲ್ಲಿ ಮುಂದಿನ 5 ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

09/07/2025 7:35 AM

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

09/07/2025 7:30 AM

Good News ; ‘ಸ್ತನ ಕ್ಯಾನ್ಸರ್’ನಿಂದ ಶಾಶ್ವತ ಮುಕ್ತಿ, 75% ರೋಗ ನಿರೋಧಕ ಪ್ರತಿಕ್ರಿಯೆ ತೋರಿಸಿದ ‘ಹೊಸ ಲಸಿಕೆ’!

09/07/2025 7:27 AM

ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 109ಕ್ಕೆ ಏರಿಕೆ, 160ಕ್ಕೂ ಹೆಚ್ಚು ಮಂದಿ ನಾಪತ್ತೆ | Texas floods

09/07/2025 7:25 AM
State News
KARNATAKA

ಗಮನಿಸಿ : ರಾಜ್ಯದಲ್ಲಿ ಮುಂದಿನ 5 ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5709/07/2025 7:35 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ಚುರುಕಾಗಿದೆ. ಈಗಾಗಲೇ ಮಲೆನಾಡು ಹಾಗೂ ಕರಾವಳಿ…

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!

09/07/2025 7:30 AM

BIG NEWS : ಮೀಸಲು ಹೆಚ್ಚಳ ಆದೇಶ ಹಿನ್ನೆಲೆ : 384 `KAS’ ನೇಮಕಾತಿ ಪ್ರಕ್ರಿಯೆ ಹಠಾತ್ತನೆ ಸ್ಥಗಿತ.!

09/07/2025 7:22 AM

ರೈತರು ಸೇರಿದಂತೆ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 15 ಲಕ್ಷ ರೂ.ಸಹಾಯಧನ.!

09/07/2025 7:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.