Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

20/03/2026 4:45 AM

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM

‘ನೋವು ನಿವಾರಕ’ಗಳ ಅತಿಯಾದ ಬಳಕೆ ನಿಮ್ಮ ಕಿಡ್ನಿಗೆ ಕಂಟಕ ; ಮೌನವಾಗಿ ಹಾನಿ ಮಾಡುತ್ತೆ! ವೈದ್ಯರ ಎಚ್ಚರಿಕೆ

19/03/2026 10:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಮುಂದಿನ ವರ್ಷದಿಂದ ಐವರಿಗೆ ಕಾಯಕ ಶರಣರ ಹೆಸರಿನಲ್ಲಿ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ
KARNATAKA

BIG NEWS: ಮುಂದಿನ ವರ್ಷದಿಂದ ಐವರಿಗೆ ಕಾಯಕ ಶರಣರ ಹೆಸರಿನಲ್ಲಿ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ

By kannadanewsnow0910/02/2025 9:27 PM

ಬೆಂಗಳೂರು: ಮುಂದಿನ ವರ್ಷದಿಂದ ಐವರು ಶರಣರಾದ ಮಾದರ ಚೆನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ಎಸ್ .ತಂಗಡಗಿ ಅವರು ಘೋಷಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಬಸವಹರಳಯ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾಯಕ ಶರಣರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಐವರು ಶರಣರ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕೆಂದು ವೇದಿಕೆ ಮೇಲಿದ್ದ ಗಣ್ಯರ ಮನವಿಗೆ ಕೂಡಲೇ ಸ್ಪಂದಿಸಿದ ಸಚಿವರು, ಪ್ರಶಸ್ತಿ ನೀಡುವ ಸಂಬಂಧ ಸಮಿತಿಯನ್ನು ರಚಿಸಿ, ಮುಂದಿನ ವರ್ಷದಿಂದ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.

ಬೀದರ್ ನಲ್ಲಿ ದೋಹರ್ ಕಕ್ಕಯ್ಯ ಅವರ ಸ್ಮಾರಕ ನಿರ್ಮಿಸಲು ಇಲಾಖೆ ವತಿಯಿಂದ ಕ್ರಮಕೈಗೊಳ್ಳಲಾಗುವುದು ಸಚಿವರು ಇದೇ ವೇಳೆ ಸಚಿವರು ಭರವಸೆ ನೀಡಿದರು.

ಇನ್ನು ಸಮಾಜದ ವಿವಿಧ ಸ್ತರಗಳಿಂದ ಬಂದ ಪ್ರತಿಯೊಬ್ಬ ವಚನಕಾರರೂ ತಮ್ಮ ಕಾಯಕಗಳನ್ನು ಮಾಡುತ್ತಲೇ, ತಮ್ಮ ಜೀವನಾನುಭವಗಳನ್ನು ವಚನಗಳ ಮೂಲಕ ಹಾಡಿ ಈ ಲೋಕಕ್ಕೆ ಬಹುದೊಡ್ಡ ಉಪಕಾರ ಮಾಡಿದ್ದಾರೆ ಎಂದರು.

ಸಮಾಜದ ಎಲ್ಲಾ ಸೌಲಭ್ಯ ಮತ್ತು ಅವಕಾಶಗಳು ಸಮಾಜದ ಅತ್ಯಂತ ಕಟ್ಟಕಡೆಯ ಸ್ತರದ ವ್ಯಕ್ತಿಗೂ ಸಲ್ಲಬೇಕು ಎಂಬ ಉದ್ದೇಶದಿಂದಾಗಿ ಎಲ್ಲರಿಗೂ ವಿದ್ಯೆ, ದಾಸೋಹ, ಲಿಂಗಸಂಸ್ಕಾರ ನೀಡಿ ವಚನಕಾರರನ್ನಾಗಿಸುವ ಮೂಲಕ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ನೀತಿಯನ್ನು ತೋರಿದ ಈ ಯುಗದಲ್ಲಿ ಸಾವಿರಾರು ಶರಣರು, ನೂರಾರು ವಚನಕಾರರು ಆಗಿಹೋಗಿದ್ದಾರೆ ಎಂದು ಮೆಲುಕು ಹಾಕಿದರು.

ಆದರ್ಶಗಳನ್ನು ಪಾಲಿಸಿ:

ಶರಣರು ನಡೆದ ಬಂದ ಹಾದಿಯಲ್ಲೇ ನಾವು ಸಾಗಬೇಕು. ಶರಣರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಪ್ರತಿಯೊಂದು ಸಮಾಜದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿರುತ್ತವೆ. ಆದರೆ ಅದೆಲ್ಲವನ್ನು ಪಕ್ಕಕ್ಕಿಟ್ಟು ಮುನ್ನಡೆದಾಗ ಸಮಾಜಕ್ಕೆ ಒಳಿತಾಗುತ್ತದೆ. ಒಗ್ಗಟ್ಟಿನಿಂದ ಆಯಾ ಸಮುದಾಯಗಳು ಗಟ್ಟಿಯಾಗುತ್ತವೆ. ಸಂಘಟನೆ ಮತ್ತು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ಸಣ್ಣ ಸಮಾಜಗಳ ಬಗ್ಗೆ ಒಲವು ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ರಾಜ್ಯದಲ್ಲಿ ಎಸ್ ಸಿಪಿ ಮತ್ತು ಟಿಎಸ್ಪಿ ಯೋಜನೆಗಳನ್ನು ಜಾರಿಗೆ ತಂದವರು ನಮ್ಮ ಮುಖ್ಯಮಂತ್ರಿಗಳು. ಹಿಂದುಳಿದ ಮತ್ತು ಅತೀ ಹಿಂದುಳಿದ ಸಮುದಾಯದವರ ಅಭಿವೃದ್ಧಿಗೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಅಖಿಲ ಕರ್ನಾಟಕ ಡೋಹರ ಕಕ್ಕಯ್ಯ ಸಮಾಜದ ಅಧ್ಯಕ್ಷ ಸಂತೋಷ್ ಸುರೇಂದ್ರ ಸವಣೂರು, ಮಾದಿಗ ಸಮುದಾಯದ ಎಂ.ಗುರುಮೂರ್ತಿ, ಆದಿಜಾಂಬವ ಸಮಾಜದ ಕಾರ್ಯಾಧ್ಯಕ್ಷ ಸಿದ್ದರಾಕು, ಇಲಾಖೆ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

BREAKING: ಜೆಇಇ ಮೇನ್ 2025 ಅಂತಿಮ ಕೀ ಉತ್ತರ ಪ್ರಕಟ: 12 ಪ್ರಶ್ನೆಗಳನ್ನು ಔಟ್ | JEE Main 2025

Shocking News: ಆಸ್ಪತ್ರೆಯಲ್ಲಿ ಸತ್ತಿದ್ದಾನೆಂದು ಊರಿಗೆ ತರುವಾಗ ಬದುಕಿದ ವ್ಯಕ್ತಿ: ಶಾಕ್ ಆದ ಹಾವೇರಿ ಜನರು

‘ಆಧಾರ್’ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲ.! ಈಗಲೇ ಆನ್ ಲೈನ್’ನಲ್ಲಿ ಅರ್ಜಿ ಸಲ್ಲಿಸಿ!

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

20/03/2026 4:45 AM2 Mins Read

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM1 Min Read

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM1 Min Read
Recent News

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

20/03/2026 4:45 AM

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM

‘ನೋವು ನಿವಾರಕ’ಗಳ ಅತಿಯಾದ ಬಳಕೆ ನಿಮ್ಮ ಕಿಡ್ನಿಗೆ ಕಂಟಕ ; ಮೌನವಾಗಿ ಹಾನಿ ಮಾಡುತ್ತೆ! ವೈದ್ಯರ ಎಚ್ಚರಿಕೆ

19/03/2026 10:14 PM

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM
State News
KARNATAKA

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

By kannadanewsnow5720/03/2026 4:45 AM KARNATAKA 2 Mins Read

ಬೆಂಗಳೂರು : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಪ್ರಾಧಿಕಾರದಿಂದ…

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM

BREAKING: ಬೆಂಗಳೂರಲ್ಲಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

19/03/2026 9:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.