ಮಂಡ್ಯ ಜಿಲ್ಲೆಯ ಪಾಂಡಪುರ ತಾಲೂಕಿನ ಮೇಲುಕೋಟೆ ಯೋಗನರಸಿಂಹ ಸ್ವಾಮಿ ಬೆಟ್ಟಕ್ಕೆ  ಪ್ರವಾಸಕ್ಕೆ ಬಂದಿದ್ದ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ  ಮೇಲೆ ಮರ ಬಿದ್ದು, ಹಲವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

BIGG NEWS : ‘ಎಬೋಲಾ ವೈರಸ್ ‘ಎಂದರೇನು? ಎಚ್ಚರಿಕೆ ಚಿಹ್ನೆ & ರೋಗಲಕ್ಷಣಗಳ ಮಾಹಿತಿ ಇಲ್ಲಿದೆ |Ebola virus disease

 

ಧಾರ್ಮಿಕ ಪ್ರವಾಸ ಕೈಗೊಂಡಿದ್ದ ಮೈಸೂರು ಜಿಲ್ಲೆಯ ನಂಜನಗೂಡು ಲಯನ್ಸ್ ಶಾಲೆಯ ವಿದ್ಯಾರ್ಥಿಗಳು ಮೇಲುಕೋಟೆಯ ನರಸಿಂಹಸ್ವಾಮಿ ಬೆಟ್ಟ ಹತ್ತು ವೇಳೆ ಒಣಗಿದ್ದ ಮರವೊಂದು ಇದ್ದಕ್ಕಿದ್ದಂತೆ ಮುರಿದು ಬಿದ್ದಿದೆ. ಈ ವೇಳೆ ಮರದ ಕೊಂಬೆಗಳು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ಬಿದ್ದಿದೆ. ಇದರಿಂದ ಹಲವರಿಗೆ ಗಂಭೀರ ಗಾಯಗಳಾಗಿವೆ.

BIGG NEWS : ‘ಎಬೋಲಾ ವೈರಸ್ ‘ಎಂದರೇನು? ಎಚ್ಚರಿಕೆ ಚಿಹ್ನೆ & ರೋಗಲಕ್ಷಣಗಳ ಮಾಹಿತಿ ಇಲ್ಲಿದೆ |Ebola virus disease

ವಿದ್ಯಾರ್ಥಿಗಳಾದ ನಿಶಾಂತ್, ವರುಣ್, ಯೋಗೇಶ್ ಹಾಗೂ ಶಿಕ್ಷಕ ಕೇಶವರಾವ್‌ಗೆ ಘಟನೆಯಲ್ಲಿ ಗಂಭೀರ ಗಾಯಗಳಾಗಿವೆ. ಮೇಲುಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಅಂಬುಲೆನ್ಸ್ ಇದ್ದರೂ ಕೂಡಾ ಸಿಬ್ಬಂದಿಯಿಲ್ಲದ ಕಾರಣ ಗಾಯಗೊಂಡ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಕರೆದೊಯ್ಯಲು ಪರದಾಡುವ ಸ್ಥಿತಿ ನಿರ್ಮಾಣವಾಯಿತು. 1 ಗಂಟೆಯ ಬಳಿಕ ಪಾಂಡವಪುರದಿಂದ ಬಂದ ಅಂಬುಲೆನ್ಸ್ನಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು

BIGG NEWS : ‘ಎಬೋಲಾ ವೈರಸ್ ‘ಎಂದರೇನು? ಎಚ್ಚರಿಕೆ ಚಿಹ್ನೆ & ರೋಗಲಕ್ಷಣಗಳ ಮಾಹಿತಿ ಇಲ್ಲಿದೆ |Ebola virus disease

Share.
Exit mobile version