ರಾಮನಗರ : ಕನಕಪುರ ದೇವಸ್ಥಾನ ಮಠದ ಮೂವರು ಮಕ್ಕಳು ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣ ಸುಖಾಂತ್ಯ ಕಂಡಿದ್ದು, ಮಕ್ಕಳು ಮಠಕ್ಕೆ ವಾಪಸ್ ಆಗಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿರುವ ದೇವಸ್ಥಾನದ ಮಠದಲ್ಲಿದ್ದ ಮೂವರು ಬಾಲಕರಾದ ಶಿವಕುಮಾರ್ (15), ಪ್ರತಾಪ್ (16) ಹಾಗೂ ಕಾರ್ತಿಕ್ (15) ನಾಪತ್ತೆಯಾಗಿದ್ದಾರೆ. ನವೆಂಬರ್ 9 ರ ರಾತ್ರಿಯಿಂದ ಮಠದಿಂದ ನಾಪತ್ತೆಯಾಗಿದ್ದರು. ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ, ಮೂವರು ಮಕ್ಕಳು ಮಠಕ್ಕೆ ವಾಪಸ್ ಆಗಿದ್ದಾರೆ. ಈ ಕುರಿತು ಸ್ವತಹ ಬಾಲಕರೇ ಪ್ರತಿಕ್ರಿಯೆ ನೀಡಿದ್ದು, ನಾವು ನಮ್ಮ ಸ್ನೇಹಿತರ ಮನೆಗೆ ಹೋಗಿದ್ದೆವು ಎಂದು ತಿಳಿಸಿದ್ದಾರೆ.
ಬಾಲಕರ ನಾಪತ್ತೆ ಸಂಬಂಧ ಮಠದ ಸಿಬ್ಬಂದಿ ಮಹದೇವಸ್ವಾಮಿ ನವೆಂಬರ್ 11ರಂದು ಕನಕಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮೂವರು ಬಾಲಕರಿಗಾಗಿ ಕನಕಪುರ ಪೊಲೀಸರು ಶೋಧ ಕಾರ್ಯಕ್ಕೆ ಮುಂದಾಗಿದ್ದರುಹಾಸ್ಟೆಲ್ ನಲ್ಲಿ ಊಟ ಮುಗಿಸಿದ ನಂತರ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆಂದು ಕನಕಪುರ ನಗರ ಪೊಲೀಸ್ ಠಾಣೆಗೆ ಮಠದ ಸಿಬ್ಬಂದಿ ನವೆಂಬರ್ 11 ರಂದು ದೂರು ದಾಖಲಾಗಿತ್ತು.
ಶಬರಿಮಲೆಗೆ ತೆರಳೋ ಭಕ್ತರಿಗೆ ಗುಡ್ ನ್ಯೂಸ್: ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲುಗಳ ಸಂಚಾರ