Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಸ್ತಿ ವಿವರ ಘೋಷಣೆಯಲ್ಲಿ ಲೋಪ : ನಟ ವಿಜಯ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್ !

20/04/2026 8:28 PM

ಚುನಾವಣಾ ನೀತಿ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ಧ ಆಯೋಗಕ್ಕೆ 700 ನಾಯಕರು, ಕಾರ್ಯಕರ್ತರಿಂದ ದೂರು

20/04/2026 8:27 PM

ಕೇಜ್ರಿವಾಲ್ ಮನವಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್: ಮದ್ಯ ನೀತಿ ಹಗರಣದ ವಿಚಾರಣೆಯಿಂದ ಹಿಂದೆ ಸರಿಯಲು ನ್ಯಾಯಾಧೀಶರ ನಿರಾಕರಣೆ

20/04/2026 8:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನುದಾನಿತ ಪದವಿಪೂರ್ವ ಹುದ್ದೆಗಳನ್ನು ತುಂಬಿಸಿಕೊಳ್ಳಿ- ಸರ್ಕಾರಕ್ಕೆ ಎಂಎಲ್‌ಸಿ ಎಸ್.ವಿ.ಸಂಕನೂರ್ ಒತ್ತಾಯ
KARNATAKA

ಅನುದಾನಿತ ಪದವಿಪೂರ್ವ ಹುದ್ದೆಗಳನ್ನು ತುಂಬಿಸಿಕೊಳ್ಳಿ- ಸರ್ಕಾರಕ್ಕೆ ಎಂಎಲ್‌ಸಿ ಎಸ್.ವಿ.ಸಂಕನೂರ್ ಒತ್ತಾಯ

By kannadanewsnow0708/07/2024 10:47 AM

ಉತ್ತರ ಕನ್ನಡ: 2015ರ ನಂತರ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ಮರಣ ಮತ್ತು ರಾಜೀನಾಮೆಯಿಂದ ತೆರವಾದ ಹುದ್ದೆಗಳನ್ನು ಕೂಡಲೇ ತುಂಬಿಕೊಳ್ಳಲು ಅನುಮತಿ ನೀಡಬೇಕೆಂದು ವಿಧಾನಪರಿಷತ್ತಿನ ಶಾಸಕರಾದ ಎಸ್ .ವಿ .ಸಂಕನೂರ್ ಇವರು ಸರಕಾರವನ್ನು ಒತ್ತಾಯಿಸಿದರು .

ಅವರು ಎಂ.ಪಿ.ಇ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘ(ರಿ) ಧಾರವಾಡ ಇದರ ಘಟಕವಾದ ಕಾರವಾರ ಶೈಕ್ಷಣಿಕ ಜಿಲ್ಲಾ ಪದವಿ ಪೂರ್ವ ನೌಕರರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು .ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಅನುದಾನಿತ ಶಿಕ್ಷಕರ ಕೊರತೆಯಿಂದಾಗಿ ಶಿಕ್ಷಣ ಸಂಸ್ಥೆಗಳು ಸಂಕಷ್ಟದಲ್ಲಿದೆ. ಈ ಹಿಂದೆ ಅನುದಾನಕ್ಕೆ ಒಳಪಟ್ಟ ಪದವಿ ಕಾಲೇಜಿನಿಂದ ಬೇರ್ಪಟ್ಟ ಪದವಿಪೂರ್ವ ಕಾಲೇಜುಗಳಿಗೆ ಅನುದಾನಿತ ಹುದ್ದೆಯನ್ನು ಹೊಸದಾಗಿ ಸೃಜಿಸದೆ ಇಂತಹ ಕಾಲೇಜುಗಳು ಸಂಕಷ್ಟಕ್ಕೆ ಒಳಗಾಗಿದ್ದು ಶೀಘ್ರವಾಗಿ ಅಗತ್ಯ ಇರುವ ಹುದ್ದೆಗಳನ್ನು ತುಂಬಬೇಕು ಹಾಗೂ ಅನುದಾನಕ್ಕೆ ಒಳಪಡಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. 2006ರ ನಂತರ ನೇಮಕವಾದ ಅನುದಾನಿತ ಉಪನ್ಯಾಸಕರಿಗೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತಂದು ಅವರ ನಿವೃತ್ತಿ ಜೀವನಕ್ಕೆ ದಾರಿ ಮಾಡಿಕೊಡಬೇಕೆಂದು ಸರಕಾರವನ್ನು ಒತ್ತಾಯಿಸಿದರು .

ಕಾರ್ಯಕ್ರಮದ ಅತಿಥಿಗಳಾದ ಎಂ.ಪಿ.ಇ ಸೊಸೈಟಿಯ ಅಧ್ಯಕ್ಷರಾದ ಕೃಷ್ಣಮೂರ್ತಿ ಭಟ್ ಇವರು ಮಾತನಾಡಿ ಪದವಿಯಿಂದ ಬೇರ್ಪಟ್ಟ ಪದವಿಪೂರ್ವ ಕಾಲೇಜುಗಳಿಗೆ ಕೂಡಲೇ ಹೊಸ ಅನುದಾನಿತ ಹುದ್ದೆಯನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕೆಂದು ಸರಕಾರವನ್ನು ಒತ್ತಾಯಿಸಿದರು.

ಈ ಕಾರ್ಯಕ್ರಮದಲ್ಲಿ ಕಳೆದ ಸಾಲಿನ ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಕುಮಟಾದ ನೆಲ್ಲಿಕೇರಿ ಪಿ.ಯು ಕಾಲೇಜಿನ ಕು.ಧ್ಯಾನ ಭಟ್ ಹಾಗೂ ಹೊನ್ನಾವರ ತಾಲೂಕಿನಲ್ಲಿ ಕಲಾ ,ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಪ್ರಥಮ ,ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಸಾಧನೆ ಮಾಡಿದ ಐವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಪ.ಪೂ ನೌಕರರ ಸಂಘ ಕಾರವಾರ ಇದರ ಅಧ್ಯಕ್ಷ ಭಾಸ್ಕರ್ ಹೆಗಡೆ ಇವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಕಾರವಾರ ಶೈಕ್ಷಣಿಕ ಜಿಲ್ಲಾ ಪದವಿಪೂರ್ವ ನೌಕರರ ಸಂಘಕ್ಕೆ ಹೊಸದಾಗಿ ಅಧ್ಯಕ್ಷರಾಗಿ ನಿಯುಕ್ತಿಗೊಂಡ . ರಮೇಶ್ ಎಸ್ ಪತ್ರೇಕರ್ ಎಲ್ಲರನ್ನೂ ಸ್ವಾಗತಿಸಿದರು. ನಿಯುಕ್ತಿಗೊಂಡ ಎಲ್ಲಾ ಪದಾಧಿಕಾರಿಗಳನ್ನು ಎಸ್ .ವಿ .ಸಂಕನೂರ್ ಇವರು ಶಾಲು ಹೊದಿಸಿ ಸನ್ಮಾನಿಸಿದರು. ಸಂಘಟನೆಯ ಉಪಾಧ್ಯಕ್ಷರಾದ .ಎಂ. ಎಚ್. ಭಟ್, ಪ್ರಾಚಾರ್ಯರು ಗಣ್ಯರಿಗೆ ಧನ್ಯವಾದವನ್ನು ಸಮರ್ಪಿಸಿದರು. ಸಂಘಟನೆಯ ಪ್ರಧಾನ ಕಾರ್ಯದರ್ಶಿಗಳಾದ . ಶ್ರೀನಿವಾಸ್ ಯು. ಕೆ ಇವರು ಪ್ರತಿಭಾ ಪುರಸ್ಕಾರಕ್ಕೆ ಸಹಕರಿಸಿದರು. ಉಪನ್ಯಾಸಕ ವಿನಾಯಕ ಭಟ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿಯರಾದ ಕುಮಾರಿ ಮಾನಸ ಹಾಗೂ ಕೃತಿಕಾ ಇವರು ಪ್ರಾರ್ಥಿಸಿದರು.

MLC SV Sankanur Arjas Govt to Fill UP Aided Undergraduate Posts MLC SV Sankanur urges govt to fill up aided undergraduate posts ಅನುದಾನಿತ ಪದವಿಪೂರ್ವ ಹುದ್ದೆಗಳನ್ನು ತುಂಬಿಸಿಕೊಳ್ಳಿ- ಸರ್ಕಾರಕ್ಕೆ ಎಂಎಲ್‌ಸಿ ಎಸ್.ವಿ.ಸಂಕನೂರ್ ಒತ್ತಾಯ
Share. Facebook Twitter LinkedIn WhatsApp Email

Related Posts

ಗಮನಿಸಿ : ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

20/04/2026 8:13 PM2 Mins Read

ನಾಳೆ ಸಾಗರದ ಜೋಸೆಫ್ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

20/04/2026 8:10 PM1 Min Read

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

20/04/2026 7:54 PM3 Mins Read
Recent News

ಆಸ್ತಿ ವಿವರ ಘೋಷಣೆಯಲ್ಲಿ ಲೋಪ : ನಟ ವಿಜಯ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್ !

20/04/2026 8:28 PM

ಚುನಾವಣಾ ನೀತಿ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ಧ ಆಯೋಗಕ್ಕೆ 700 ನಾಯಕರು, ಕಾರ್ಯಕರ್ತರಿಂದ ದೂರು

20/04/2026 8:27 PM

ಕೇಜ್ರಿವಾಲ್ ಮನವಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್: ಮದ್ಯ ನೀತಿ ಹಗರಣದ ವಿಚಾರಣೆಯಿಂದ ಹಿಂದೆ ಸರಿಯಲು ನ್ಯಾಯಾಧೀಶರ ನಿರಾಕರಣೆ

20/04/2026 8:21 PM

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಮರುಜೀವ: ವಾಷಿಂಗ್ಟನ್‌ನಲ್ಲಿ ಇಂದಿನಿಂದ ನಿರ್ಣಾಯಕ ಮಾತುಕತೆ; ಸುಂಕ ಕಡಿತದ ಮೇಲೆ ಎಲ್ಲರ ಕಣ್ಣು!

20/04/2026 8:20 PM
State News
KARNATAKA

ಗಮನಿಸಿ : ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

By kannadanewsnow5720/04/2026 8:13 PM KARNATAKA 2 Mins Read

ನಮ್ಮ ದಿನನಿತ್ಯದ ಹವ್ಯಾಸಗಳು ನಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ವಿಷಯಗಳನ್ನು ಬಿಚ್ಚಿಡುತ್ತವೆ. ಅದರಲ್ಲಿ ಪ್ರಮುಖವಾದುದು ನಾವು ಮಲಗುವ ರೀತಿ. ಪ್ರತಿಯೊಬ್ಬರೂ…

ನಾಳೆ ಸಾಗರದ ಜೋಸೆಫ್ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

20/04/2026 8:10 PM

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

20/04/2026 7:54 PM

ಮಂಡ್ಯದಲ್ಲಿ ಬಸವಣ್ಣರವರ ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ; ಮದ್ದೂರು ತಾಲೂಕು ಕಛೇರಿ ಮುಂದೆ ಪ್ರತಿಭಟನೆ

20/04/2026 7:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.