ನವದೆಹಲಿ : ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಐದು ಬಾರಿ ಸಂಸದರಾಗಿ ಸಂಸತ್ ಪ್ರವೇಶಿಸಿರುವ ಪ್ರಹ್ಲಾದ ಜೋಶಿ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಪ್ರಹ್ಲಾದ್ ಜೋಶಿ ಅವರು ಸತತವಾಗಿ 5 ಬಾರಿ ಸಂಸದರಾಗಿ ಸಂಸತ್ತು ಪ್ರವೇಶಿಸಿದ್ದಾರೆ. 2004ರಲ್ಲಿ ಧಾರವಾಡ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದರಾಗಿದ್ದು, 2009 ರಂದು ಮತ್ತೆ ಎರಡನೇ ಬಾರಿಗೆ ಸಂಸದರಾಗಿದ್ದಾರೆ. 2014 ರಂದು ಧಾರವಾಡ ಕ್ಷೇತ್ರದಿಂದ ಮೂರನೇ ಬಾರಿಗೆ ಸಂಸದರಾಗಿದ್ದು, 2019 ರಂದು ಧಾರವಾಡ ಕ್ಷೇತ್ರದಿಂದ ನಾಲ್ಕನೇ ಬಾರಿ ಸಂಸದರಾಗಿದ್ದಾರೆ. 2019 ರಲ್ಲಿ ಕೇಂದ್ರ ಸರ್ಕಾರದ ವ್ಯವಹಾರ ಸಚಿವರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.
ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ.
ಇದಕ್ಕೂ ಮೊದಲು ಕೇಂದ್ರ ಸಚಿವರಾಗಿ ಜೆಪಿ ನಡ್ದ, ನಿತಿನ್ ದಡ್ಕರಿ ಅಂಬ್ಚ್ ಷಾ ರಾಜನಾಥ್ ಸಿಂಗ್, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.