Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಗೆಳೆಯನಿಂದ ಬೇರ್ಪಟ್ಟಿದ್ದಕ್ಕೆ 10,000 ಅಡಿ ಎತ್ತರದಿಂದ ಬಿದ್ದು ‘ಸ್ಕೈ ಡೈವ್ ಗೆಳತಿ’ ಸಾವು

27/05/2025 6:18 PM

BREAKING: 2026ನೇ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ದಿನಾಂಕ CBDTಯಿಂದ ವಿಸ್ತರಣೆ

27/05/2025 6:16 PM

BREAKING: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿದ CBDT | Income Tax

27/05/2025 5:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೋದಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹೆಚ್ಚಿಸಿ ಜನಾಕ್ರೋಶ ಯಾತ್ರೆಯ ರಾಜ್ಯ ಬಿಜೆಪಿ ನಾಯಕರಿಗೆ ಕಪಾಳಮೋಕ್ಷ: ಸಿದ್ಧರಾಮಯ್ಯ
KARNATAKA

ಮೋದಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹೆಚ್ಚಿಸಿ ಜನಾಕ್ರೋಶ ಯಾತ್ರೆಯ ರಾಜ್ಯ ಬಿಜೆಪಿ ನಾಯಕರಿಗೆ ಕಪಾಳಮೋಕ್ಷ: ಸಿದ್ಧರಾಮಯ್ಯ

By kannadanewsnow0907/04/2025 6:36 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿರುವ ಸತ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರೇ ದೇಶದ ಜನರ ಮುಂದೆ ಬಿಚ್ಚಿಟ್ಟು ಒಪ್ಪಿಕೊಂಡಿದ್ದಾರೆ ಎಂದು ಗುಡುಗಿದ್ದಾರೆ.

ಈಗ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ತೆರಿಗೆಯನ್ನು ಎರಡು ರೂಪಾಯಿಗಳಷ್ಟು ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50 ರೂಪಾಯಿಯಷ್ಟು ಏರಿಕೆ ಮಾಡಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು ಎಂಬುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಯುತ್ತಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಒಂದೇ ಸಮನೆ ಏರಿಸುತ್ತಾ ಹೋಗಲು ಕಾರಣ ಏನು ಎಂಬುದನ್ನು ಬಿಜೆಪಿ ನಾಯಕರು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಕ್ಕಿ, ಬೇಳೆ, ಮೀನು, ಮಾಂಸ, ತರಕಾರಿಯಿಂದ ಹಿಡಿದು ಹೊಟೇಲ್ ತಿಂಡಿ ವರೆಗೆ ಎಲ್ಲದರ ಬೆಲೆ ಏರಿಕೆಗೆ ಮೂಲ ಕಾರಣ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಲೇ ಇರುವ ಕೇಂದ್ರ ಸರ್ಕಾರದ ಜನವಿರೋಧೀ ನೀತಿ ಎನ್ನುವುದು ಆರ್ಥಿಕ ವ್ಯವಹಾರದ ಸಾಮಾನ್ಯ ಜ್ಞಾನ ಇದ್ದವರಿಗೆಲ್ಲ ಗೊತ್ತು. ಹೀಗಿದ್ದರೂ ಬೆಲೆ ಏರಿಕೆಯ ಪಾಪದ ಹೊರೆಯನ್ನು ನಮ್ಮ ತಲೆ ಮೇಲೆ ಕಟ್ಟಲು ಹೊರಟಿರುವ ಬಿಜೆಪಿ ನಾಯಕರ ಮುಖಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಮಸಿ ಬಳಿದಿದ್ದಾರೆ ಎಂಬುದಾಗಿ ಕಿಡಿಕಾರಿದ್ದಾರೆ.

ಜನಾಕ್ರೋಶ ಯಾತ್ರೆ ಹೊರಟವರ ಮುಂದೆ ಈಗ ಇರುವುದು ಎರಡೇ ಎರಡು ಆಯ್ಕೆ: ಒಂದೋ ಅವರು ಪ್ರಧಾನ ಮಂತ್ರಿಯವರ ಮೇಲೆ ಒತ್ತಡ ಹೇರಿ ಕೇಂದ್ರ ಸರ್ಕಾರ ಹೆಚ್ಚಿಸಿರುವ ಬೆಲೆಯನ್ನು ಇಳಿಸುವಂತೆ ಮಾಡಬೇಕು, ಇಲ್ಲವೇ ಯಾತ್ರೆಯನ್ನು ಕೊನೆಗೊಳಿಸಿ ಗಂಟುಮೂಟೆ ಕಟ್ಟಿಕೊಂಡು ತಮ್ಮ ತಮ್ಮ ಮನೆಗೆ ಮರಳಬೇಕು. ಇದರ ಹೊರತಾಗಿ ಈ ಯಾತ್ರೆಯ ಪ್ರಹಸನವನ್ನು ಮುಂದುವರಿಸಿದರೆ ಜನರ ಆಕ್ರೋಶಕ್ಕೆ ತುತ್ತಾಗುವುದು ಖಂಡಿತ ಎಂದಿದ್ದಾರೆ.

BIG NEWS: ರಾಜ್ಯದ 208 ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿ ಆರಂಭ: ರಾಜ್ಯ ಸರ್ಕಾರ ಅಧಿಕೃತ ಆದೇಶ.!

BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

ರಾಜ್ಯ ಕಾಂಗ್ರೇಸ್ ಸರ್ಕಾರದ 2 ವರ್ಷದ ಸಾಧನೆ ‘ಬೆಲೆ ಏರಿಕೆ’ ಮಾತ್ರ: ದೇವೇಂದ್ರಪ್ಪ ಯಲಕುಂದ್ಲಿ

27/05/2025 5:44 PM2 Mins Read

CM ಸಿದ್ದರಾಮಯ್ಯ ಬಳಿಕ ರಾಜ್ಯದಲ್ಲಿ ಜನಪ್ರಿಯ ನಾಯಕ ನಾನೆ : ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

27/05/2025 5:34 PM1 Min Read

ಉರ್ದು ಭಾಷೆಗೆ ಸರ್ಕಾರ ಹೆಚ್ಚಿನ ಅನುದಾನ ಆರೋಪ: ಈ ಸ್ಪಷ್ಟನೆ ಕೊಟ್ಟ ಸಿಎಂ ಸಿದ್ಧರಾಮಯ್ಯ

27/05/2025 5:18 PM2 Mins Read
Recent News

SHOCKING: ಗೆಳೆಯನಿಂದ ಬೇರ್ಪಟ್ಟಿದ್ದಕ್ಕೆ 10,000 ಅಡಿ ಎತ್ತರದಿಂದ ಬಿದ್ದು ‘ಸ್ಕೈ ಡೈವ್ ಗೆಳತಿ’ ಸಾವು

27/05/2025 6:18 PM

BREAKING: 2026ನೇ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ದಿನಾಂಕ CBDTಯಿಂದ ವಿಸ್ತರಣೆ

27/05/2025 6:16 PM

BREAKING: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿದ CBDT | Income Tax

27/05/2025 5:58 PM

ರಾಜ್ಯ ಕಾಂಗ್ರೇಸ್ ಸರ್ಕಾರದ 2 ವರ್ಷದ ಸಾಧನೆ ‘ಬೆಲೆ ಏರಿಕೆ’ ಮಾತ್ರ: ದೇವೇಂದ್ರಪ್ಪ ಯಲಕುಂದ್ಲಿ

27/05/2025 5:44 PM
State News
KARNATAKA

ರಾಜ್ಯ ಕಾಂಗ್ರೇಸ್ ಸರ್ಕಾರದ 2 ವರ್ಷದ ಸಾಧನೆ ‘ಬೆಲೆ ಏರಿಕೆ’ ಮಾತ್ರ: ದೇವೇಂದ್ರಪ್ಪ ಯಲಕುಂದ್ಲಿ

By kannadanewsnow0927/05/2025 5:44 PM KARNATAKA 2 Mins Read

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನೆ ಅಂದ್ರೆ ಅದು ಜನರಿಗೆ ಬೆಲೆ ಏರಿಕೆಯ ಬಿಸಿ ನೀಡಿದ್ದಾಗಿದೆ.…

CM ಸಿದ್ದರಾಮಯ್ಯ ಬಳಿಕ ರಾಜ್ಯದಲ್ಲಿ ಜನಪ್ರಿಯ ನಾಯಕ ನಾನೆ : ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

27/05/2025 5:34 PM

ಉರ್ದು ಭಾಷೆಗೆ ಸರ್ಕಾರ ಹೆಚ್ಚಿನ ಅನುದಾನ ಆರೋಪ: ಈ ಸ್ಪಷ್ಟನೆ ಕೊಟ್ಟ ಸಿಎಂ ಸಿದ್ಧರಾಮಯ್ಯ

27/05/2025 5:18 PM

BREAKING: ದಕ್ಷಿಣ ಕನ್ನಡದಲ್ಲಿ ಮತ್ತೆ ಮಾರಕಾಸ್ತ್ರಗಳ ಸದ್ದು: ವಾಹನ ಚಾಲಕನ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನ

27/05/2025 5:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.