Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಾವ `RSS’ ನಾಯಕರು ಹೇಳಿದರೂ `ಸಂವಿಧಾನ’ ಬದಲಾಯಿಸಲು ಸಾಧ್ಯವಿಲ್ಲ ಎಂದು ಮೋದಿ ಹೇಳಬೇಕಿತ್ತು : ಸಿಎಂ ಸಿದ್ದರಾಮಯ್ಯ
KARNATAKA

ಯಾವ `RSS’ ನಾಯಕರು ಹೇಳಿದರೂ `ಸಂವಿಧಾನ’ ಬದಲಾಯಿಸಲು ಸಾಧ್ಯವಿಲ್ಲ ಎಂದು ಮೋದಿ ಹೇಳಬೇಕಿತ್ತು : ಸಿಎಂ ಸಿದ್ದರಾಮಯ್ಯ

By kannadanewsnow5714/04/2024 1:09 PM

ಬೆಂಗಳೂರು : ಯಾವ ಆರ್ ಎಸ್ ಎಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ ಎಂದು ಪ್ರಧಾನಿ ಮೋದಿ ಅವರು ಹೇಳಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಂಬೇಡ್ಕರ್ ಅವರು ಮತ್ತೆ ಹುಟ್ಟಿಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ’’ ಎಂದು ಪ್ರಧಾನಿ Narendra Modi ಅವರು ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, ‘‘ಯಾವ ಆರ್ ಎಸ್ ಎಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ’’ ಎಂದು ಹೇಳಬೇಕಾಗಿತ್ತು ಎಂದಿದ್ದಾರೆ.

ನರೇಂದ್ರ ಮೋದಿಯವರೇ, ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲವೇ ಅವರ ಅನುಯಾಯಿಗಳಿಂದ ಅಲ್ಲ, ಅಪಾಯ ಎದುರಾಗಿರುವುದು ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಮತ್ತು ಅದರ ನಾಯಕರಿಂದ. ಇದಕ್ಕೆ ಇತಿಹಾಸ ಸಾಕ್ಷಿ ಇದೆ. ಇತಿಹಾಸವನ್ನು ಮರೆಯಬಾರದೆಂದು ನಮಗೆ ಪಾಠ ಮಾಡಿದವರು ಇದೇ ಬಾಬಾಸಾಹೇಬ್ ಅಂಬೇಡ್ಕರ್ ಎಂದರು.

“ಭಾರತ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ ಏನಂದ್ರೆ, ಅದರಲ್ಲಿ ಭಾರತೀಯತೆ ಎನ್ನುವುದೇ ಇಲ್ಲ ಪುರಾತನ ಭಾರತದ ಕಾನೂನು-ಕಟ್ಟಳೆಗಳಾಗಲಿ, ಸಂರಚನೆಗಳಾಗಲಿ, ನುಡಿಗಟ್ಟುಗಳಾಗಲಿ ಯಾವುದೂ ಇಲ್ಲ… ಸ್ಪಾರ್ತದ ಲೈಕುರ್ಗಸ್ ಅಥವಾ ಪರ್ಸಿಯಾದ ಸೊಲೊನ್ ಬರೆಯುವುದಕ್ಕು ಮೊದಲೇ ಮನು ಈ ನಿಯಮಗಳನ್ನು ಇಲ್ಲಿ ರಚಿಸಿದ್ದರು. ಇವತ್ತಿಗೂ ಮನುಸಂಸ್ಮೃತಿಯಲ್ಲಿ ಮನು ಉಲ್ಲೇಖಿಸಿರುವ ಕಾನೂನುಗಳು ಪ್ರಪಂಚದ ಗೌರವಕ್ಕೆ ಪಾತ್ರವಾಗಿವೆ ಮತ್ತು ಸ್ವಾಭಾವಿಕ ವಿಧೇಯತೆ ಮತ್ತು ಅನುಸರಣೆಯಲ್ಲಿವೆ. ಆದರೆ ನಮ್ಮ ಸಂವಿಧಾನವನ್ನು ರಚಿಸಿದ ಪಂಡಿತರಿಗೆ ಇದ್ಯಾವುದೂ ಲೆಕ್ಕಕ್ಕಿಲ್ಲ” – ಇದು ಆರ್ ಎಸ್ ಎಸ್ ಮುಖವಾಣಿಯಾದ “ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದ ಸಾಲುಗಳು ಎಂದು ತಿಳಿಸಿದರು.

ನರೇಂದ್ರ ಮೋದಿಯವರೇ, ಬಾಬಾಸಾಹೇಬ್ ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನಾ ಸಮಿತಿ ನೀಡಿದ ಕರಡು ಪ್ರತಿಯನ್ನು ನಮ್ಮ ದೇಶ ಅಂಗೀಕರಿಸಿದ್ದು 1949ರ ನವಂಬರ್ 26ರಂದು. ಅದಾಗಿ ಕೇವಲ ನಾಲ್ಕೇ ದಿನಕ್ಕೆ ಅಂದರೆ 1949ರ ನವಂಬರ್ 30ರಂದು ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಬರೆದಿರುವ ಈ ಸಂಪಾದಕೀಯದ ಬಗ್ಗೆ ಈಗಿನ ನಿಮ್ಮ ನಿಲುವು ಏನು? ಇದನ್ನು ಒಪ್ಪುತ್ತೀರಾ? ನಿರಾಕರಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆಬೇರೆ ಕಲಮ್ಮುಗಳನ್ನು ಹೆಕ್ಕಿತಂದು ಒಟ್ಟುಗೂಡಿಸಿದ ಕಂತೆಯಾಗಿದ್ದು ಇದರಲ್ಲಿ ಹಲವಾರು ತೊಡಕುಗಳು ಮತ್ತು ಭಿನ್ನನಿಲುವುಗಳು ಎದ್ದು ಕಾಣುತ್ತವೆ. ನಮ್ಮದು ಅಂತ ಕರೆದುಕೊಳ್ಳುವ ಯಾವ ಭಾರತೀಯ ಅಂಶವೂ ಇದರಲ್ಲಿಲ್ಲ. ನಮ್ಮ ರಾಷ್ಟ್ರೀಯ ಕಾರ್ಯಯೋಜನೆ ಏನು ಮತ್ತು ನಮ್ಮ ಬದುಕಿನ ಮುಖ್ಯ ಧಾತುವೇನು ಎಂಬುದರ ಬಗ್ಗೆ ಇದರ ನಿರ್ದೇಶಕ ತತ್ವಗಳಲ್ಲಿ ಒಂದೇಒಂದು ಪದವಿದೆಯೇ? ಇಲ್ಲ!” ಎಂದು ಹೇಳಿದವರು ಗೋಳ್ವಾಲ್ಕರ್ ಅವರು.

ನರೇಂದ್ರ ಮೋದಿಯವರೇ, ನೀವು ಗುರೂಜಿ ಎಂದೇ ಗೌರವದಿಂದ ಕರೆಯುವ ಆರ್ ಎಸ್ ಎಸ್ ನ ಎರಡನೇ ಸಂರಸಂಘ ಚಾಲಕರಾದ ಎಂ.ಎಸ್. ಗೋಳ್ವಾಲ್ಕರ್ ನಿಮ್ಮ “ಧರ್ಮ ಗ್ರಂಥ’’ವಾದ ಬಂಚ್ ಆಫ್ ಥಾಟ್ಟ್ ನಲ್ಲಿ ವ್ಯಕ್ತಪಡಿಸಿರುವ ಈ ಅಭಿಪ್ರಾಯವನ್ನು ಇಲ್ಲಿಯ ವರೆಗೆ ನೀವು ನಿರಾಕರಿಸಿಲ್ಲ. ಈಗಲಾದರೂ ಹೇಳಿ ಈ ಅಭಿಪ್ರಾಯಕ್ಕೆ ನಿಮ್ಮ ಸಹಮತ ಇದೆಯೇ? ಭಿನ್ನಮತ ಇದೆಯೇ? ಎಂದಿದ್ದಾರೆ.

“ವೇದಗಳ ನಂತರ ನಮ್ಮ ಹಿಂದೂ ರಾಷ್ಟ್ರಕ್ಕೆ ಪೂಜನೀಯವಾದ ಗ್ರಂಥವೆಂದರೆ ಮನುಸ್ಮೃತಿಯಾಗಿದ್ದು, ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ – ಸಂಪ್ರದಾಯ, ಆಲೋಚನೆಗಳು ಮತ್ತು ಆಚಾರಗಳಿಗೆ ಅದುವೇ ಆಧಾರವಾಗಿದೆ. ಶತಮಾನಗಳಿಂದ ನಮ್ಮ ದೇಶವು ಸಾಗಿಬಂದ ಆಧ್ಯಾತ್ಮಿಕ ಮತ್ತು ದೈವಿಕ ಪಥಗಳಿಗೆ ಈ ಕೃತಿಯೇ ಕ್ರೋಢೀಕೃತ ರೂಪವಾಗಿದೆ. ಇವತ್ತಿಗೂ ಕೋಟ್ಯಂತರ ಹಿಂದೂಗಳು ತಮ್ಮ ಜೀವನ ಮತ್ತು ಆಚರಣೆಗಳಲ್ಲಿ ಅನುಸರಿಸುತ್ತಿರುವ ಕಟ್ಟಳೆಗಳಿಗೆ ಈ ಮನುಸ್ಮೃತಿಯೇ ಮೂಲವಾಗಿದೆ. ಇವತ್ತು ಮನುಸ್ಮೃತಿಯೇ ಹಿಂದೂ ಕಾನೂನು” ಎಂದು ಹೇಳಿದವರು ವಿನಾಯಕ ದಾಮೋದರ ಸಾವರ್ಕರ್.

ದೆಹಲಿಯ ಪ್ರಭಾತ್ ಸಂಸ್ಥೆ ಹಿಂದಿಯಲ್ಲಿ ಪ್ರಕಟಿಸಿರುವ ಸಾವರ್ಕರ್ ಸಮಗ್ರ ಬರಹಗಳ ಪುಸ್ತಕದ ಸಂಪುಟ 4ರ 416ನೇ ಪುಟದಲ್ಲಿ ಸಂವಿಧಾನದ ಬಗೆಗಿನ ಸಾವರ್ಕರ್ ಅಭಿಪ್ರಾಯ ಇದು. ನರೇಂದ್ರ ಮೋದಿಯವರೇ, ನೀವು ಅಧಿಕಾರಕ್ಕೆ ಬಂದ ನಂತರ ನಿಮ್ಮ ಪಕ್ಷ ಮತ್ತು ಪರಿವಾರ ಸಾವರ್ಕರ್ ಅವರನ್ನು ಅಪ್ರತಿಮ ದೇಶ ಭಕ್ತರೆಂದು ಬಿಂಬಿಸುತ್ತಾ ಬಂದಿದ್ದೀರಿ ಅವರು ಸಂವಿಧಾನದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಕೂಡಾ ನೀವು ಸಮರ್ಥಿಸಬಹುದು ಎಂದು ಭಾವಿಸಿದ್ದೇನೆ. ಆ ಬಗ್ಗೆ ನಿಮಗೆ ಸಹಮತ ಇಲ್ಲ ಎಂದಾದರೆ ಅದನ್ನು ದೇಶದ ಮುಂದೆ ಹೇಳಿಬಿಡಿ ಎಂದಿದ್ದಾರೆ.

Modi should have said that 'Constitution' cannot be changed no matter what RSS leaders say: Siddaramaiah ಯಾವ `RSS' ನಾಯಕರು ಹೇಳಿದರೂ `ಸಂವಿಧಾನ' ಬದಲಾಯಿಸಲು ಸಾಧ್ಯವಿಲ್ಲ ಎಂದು ಮೋದಿ ಹೇಳಬೇಕಿತ್ತು : ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.