Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಈ `ಸುರಕ್ಷತಾ ಕ್ರಮ’ಗಳನ್ನು ಪಾಲಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

23/10/2025 9:37 AM

SHOCKING : ಯುವಕನ ಬಾಯಿಯಲ್ಲಿ `ಪಟಾಕಿ ಸ್ಪೋಟ’ಗೊಂಡು ದವಡೆಯೇ ಛಿದ್ರ ಛಿದ್ರ.!

23/10/2025 9:10 AM

Shocking: ಸಹೋದರನಿಗೆ ಅನುಕಂಪದ ಉದ್ಯೋಗದಿಂದ ಆಕ್ರೋಶ: ತಾಯಿಯನ್ನು ಕೊಂದ ಮಗ

23/10/2025 9:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ ವೇಳೆ ‘ಮೋದಿ ಅಲೆ’ ಕಾಣಲಿಲ್ಲ, ಗ್ಯಾರಂಟಿ ಅಲೆಯಲ್ಲೇ ಎಲ್ಲ 20 ಸ್ಥಾನದಲ್ಲಿ ಗೆಲುವು: ಸಚಿವ ಈಶ್ವರ ಖಂಡ್ರೆ
KARNATAKA

ಲೋಕಸಭಾ ಚುನಾವಣೆ ವೇಳೆ ‘ಮೋದಿ ಅಲೆ’ ಕಾಣಲಿಲ್ಲ, ಗ್ಯಾರಂಟಿ ಅಲೆಯಲ್ಲೇ ಎಲ್ಲ 20 ಸ್ಥಾನದಲ್ಲಿ ಗೆಲುವು: ಸಚಿವ ಈಶ್ವರ ಖಂಡ್ರೆ

By kannadanewsnow0923/05/2024 2:05 PM

ಬೆಂಗಳೂರು : ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ. ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ವಿಕಾಸಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತವನ್ನು ನೀಡಿದ್ದು, ಜನರ ವಿಶ್ವಾಸ ಇಮ್ಮಡಿಯಾಗಿದೆ. ಇದು ಚುನಾವಣೆಯ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ ಎಂದರು.

ಪ್ರತಿಪಕ್ಷಗಳಿಂದ ದಿಕ್ಕುತಪ್ಪಿಸುವ ಪ್ರಯತ್ನ:

ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಅತ್ಯಂತ ಹೇಯವಾದುದಾಗಿದ್ದು, ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್.ಐ.ಟಿ. ಗೆ ವಹಿಸಲಾಗಿದ್ದು, ಪ್ರಾಮಾಣಿಕವಾಗಿ ಅಧಿಕಾರಿಗಳು ತಮ್ಮ ಕಾರ್ಯ ಮಾಡುತ್ತಿದ್ದಾರೆ. ಈ ಹಂತದಲ್ಲಿ ಅನುಮಾನ ವ್ಯಕ್ತಪಡಿಸುವುದು, ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದರು.

ಪ್ರತಿಪಕ್ಷ ನಾಯಕರುಗಳು ತನಿಖೆಯ ದಿಕ್ಕು ತಪ್ಪಿಸಲು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಜನರಲ್ಲಿ ಗೊಂದಲ ಉಂಟು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಹಲವು ಮಹಿಳೆಯರು ಈಗಾಗಲೇ ಅತ್ಯಾಚಾರದ ದೂರು ದಾಖಲಿಸಿದ್ದು, ಪ್ರಮುಖ ಆರೋಪಿಗೆ ಶಿಕ್ಷೆ ಆಗಬೇಕೋ ಬೇಡವೋ ಎಂದು ಪ್ರಶ್ನಿಸಿದರು.

ಪ್ರತಿಪಕ್ಷದವರಿಗೆ ಬದ್ಧತೆ ಇದ್ದರೆ ಪ್ರಜ್ವಲ್ ರೇವಣ್ಣನನ್ನು ಕರೆತಂದು ಪೊಲೀಸರಿಗೆ ಒಪ್ಪಿಸಬೇಕು, ತೋರಿಕೆಗೆ 48 ಗಂಟೆಯಲ್ಲಿ ಬಂದು ಬಿಡಿ ಎಂದು ಹೇಳಿದರೆ ಆಗದು. ಪ್ರಕರಣದ ಪ್ರಮುಖ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಎಂದರು.

ಕೇಂದ್ರ ಪ್ರಜ್ವಲ್ ಬಂಧನಕ್ಕೆ ಸಹಕರಿಸಬೇಕು:

ಪ್ರಜ್ವಲ್ ರೇವಣ್ಣಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ರಾಜ್ಯದಿಂದ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಇಂಟರ್ ಪೋಲ್ ನೆರವಿನಿಂದ ಆರೋಪಿಯ ಬಂಧನಕ್ಕೆ ಸಹಕಾರ ನೀಡಬೇಕು ಎಂದು ಈಶ್ವರ ಖಂಡ್ರೆ ಒತ್ತಾಯಿಸಿದರು.

ಪೆನ್ ಡ್ರೈವ್ ಪ್ರಕರಣದ ಯಾವುದೇ ಆರೋಪಿಗೆ ಸರ್ಕಾರ ಬೆಂಬಲ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರತಿಪಕ್ಷಗಳು ಅನಗತ್ಯವಾಗಿ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ ಇದಕ್ಕೆ ಯಾವುದೇ ಆಧಾರ ಇಲ್ಲ ಎಂದರು.

ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ

ಪ್ರಜ್ವಲ್ ರೇವಣ್ಣಗೆ ಬಿಗ್‌ಶಾಕ್‌: ಪಾಸ್ ಪೋರ್ಟ್’ ರದ್ದತಿ ಪ್ರಕ್ರಿಯೆ ಆರಂಭ, ಶೀಘ್ರದಲ್ಲಿ ಬಂಧನ!

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಈ `ಸುರಕ್ಷತಾ ಕ್ರಮ’ಗಳನ್ನು ಪಾಲಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

23/10/2025 9:37 AM3 Mins Read

ALERT : ಕಿವಿಗೆ ‘ಇಯರ್ ಬಡ್ಸ್’ ಹಾಕಿ ಸ್ವಚ್ಛಗೊಳಿಸುವರೇ ಎಚ್ಚರ : ಸಣ್ಣ ತಪ್ಪಿನಿಂದ ಶ್ರವಣದೋಷ ಬರಬಹುದು.!

23/10/2025 8:54 AM1 Min Read

ಗಮನಿಸಿ : ‘ವೀಳ್ಯದೆಲೆ’ಯಲ್ಲಿವೆ ಅದ್ಭುತ ಪ್ರಯೋಜನಗಳು : ಒಮ್ಮೆ ಟ್ರೈ ಮಾಡಿ ನೋಡಿ | Betel Leaves Amazing Benefits

23/10/2025 8:39 AM1 Min Read
Recent News

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಈ `ಸುರಕ್ಷತಾ ಕ್ರಮ’ಗಳನ್ನು ಪಾಲಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

23/10/2025 9:37 AM

SHOCKING : ಯುವಕನ ಬಾಯಿಯಲ್ಲಿ `ಪಟಾಕಿ ಸ್ಪೋಟ’ಗೊಂಡು ದವಡೆಯೇ ಛಿದ್ರ ಛಿದ್ರ.!

23/10/2025 9:10 AM

Shocking: ಸಹೋದರನಿಗೆ ಅನುಕಂಪದ ಉದ್ಯೋಗದಿಂದ ಆಕ್ರೋಶ: ತಾಯಿಯನ್ನು ಕೊಂದ ಮಗ

23/10/2025 9:04 AM

ಆಪಲ್, ಎನ್ ವಿಡಿಯಾ ಹಿಂದಿಕ್ಕಿ ಆದಾಯ ದಕ್ಷತೆಯಲ್ಲಿ ‘ಓನ್ಲಿ ಫ್ಯಾನ್ಸ್’ ನಂ.1 ಸ್ಥಾನಕ್ಕೆ!

23/10/2025 8:55 AM
State News
KARNATAKA

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಈ `ಸುರಕ್ಷತಾ ಕ್ರಮ’ಗಳನ್ನು ಪಾಲಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

By kannadanewsnow5723/10/2025 9:37 AM KARNATAKA 3 Mins Read

ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಶಾಲಾ…

ALERT : ಕಿವಿಗೆ ‘ಇಯರ್ ಬಡ್ಸ್’ ಹಾಕಿ ಸ್ವಚ್ಛಗೊಳಿಸುವರೇ ಎಚ್ಚರ : ಸಣ್ಣ ತಪ್ಪಿನಿಂದ ಶ್ರವಣದೋಷ ಬರಬಹುದು.!

23/10/2025 8:54 AM

ಗಮನಿಸಿ : ‘ವೀಳ್ಯದೆಲೆ’ಯಲ್ಲಿವೆ ಅದ್ಭುತ ಪ್ರಯೋಜನಗಳು : ಒಮ್ಮೆ ಟ್ರೈ ಮಾಡಿ ನೋಡಿ | Betel Leaves Amazing Benefits

23/10/2025 8:39 AM

SHOCKING : ರಾಜ್ಯದಲ್ಲಿ ಮತ್ತೊಂದು `ಬೆಚ್ಚಿ ಬೀಳಿಸೋ ಘಟನೆ’ : ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪಾಪಿಪತಿ.! 

23/10/2025 8:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.