Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

29/06/2025 5:17 PM

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM

BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

29/06/2025 5:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆ
Uncategorized

ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆ

By kannadanewsnow0715/04/2024 3:11 PM

ಮೈಸೂರು: ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಎನ್.ಆರ್.ಮೊಹಲ್ಲಾದಲ್ಲಿ ನಡೆದ ‘ಪ್ರಜಾಧ್ವನಿ-2’ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯಕ್ಕೆ ಪ್ರವಾಹ ಬಂದಾಗಲೂ ಬರಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ. ಚುನಾವಣೆ ಬಂತು ಓಡಿ ಬಂದ್ರಿ. ಸುಳ್ಳು ಹೇಳಿ ಹೋದ್ರಿ. ಯಾವ‌ ಮುಖ ಹೊತ್ತುಕೊಂಡು ರಾಜ್ಯಕ್ಕೆ ಬಂದ್ರಿ? ಇಷ್ಟೊಂದು ಸುಳ್ಳು ಹೇಳೋಕೇ ಬಂದ್ರಾ ಇಲ್ಲಿಗೆ ಎಂದು ಪ್ರಶ್ನಿಸಿದರು.

ಬಾಂಡ್ ಗಳ ಮೂಲಕ ಸಂಗ್ರಹಿಸಿದ 7600 ಕೋಟಿಗೆ ನೀವು ತೆರಿಗೆ ಕಟ್ಟಿಲ್ಲ? ಇದು ಕ್ರೈಂ ಅಲ್ವೇ? ಈ ಕ್ರೈಂನ ಹೊಣೆ ಹೊರುವವರು ಯಾರು? ಉತ್ತರ ಕೊಡಿ ಮೋದಿಯವರೇ ಎಂದು ಸಿ.ಎಂ.ಆಗ್ರಹಿಸಿದರು.

ನಮ್ಮ ರಾಜ್ಯದ ಜನ ಬರಗಾಲದಲ್ಲಿ ಬೆಂದಿದ್ದಾರೆ. ನಮ್ಮ ರೈತರು ಕಷ್ಟದಲ್ಲಿದ್ದಾರೆ. ನಮ್ಮ ಪಾಲಿನ ಹಣ ಕೊಡಿ ಎಂದು ಕೇಳಿಕೊಂಡಿದ್ದೆವು. ನಾನೇ ಬಂದು ನಿಮ್ಮನ್ನು ಮತ್ತು ಅಮಿತ್ ಶಾ ಇಬ್ಬರನ್ನೂ ಭೇಟಿ ಮಾಡಿ ಮನವಿ ಕೊಟ್ಟಿದ್ದೆನ್ನೆಲ್ಲಾ, ಇವತ್ತಿನವರೆಗೂ ಒಂದೇ ಒಂದು ರೂಪಾಯಿಯನ್ನೂ ರಾಜ್ಯಕ್ಜೆ ಕೊಡಲಿಲ್ಲವಲ್ಲಾ? ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ ಬಂದು ಮತ ಕೇಳ್ತಾ ಇದೀರಿ ಎಂದು ಖಾರವಾಗಿ ಪ್ರಶ್ನಿಸಿದರು.

ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸ್ವತಂತ್ರ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಯಾರೂ ಬಂದಿಲ್ಲ. ಅಪರೂಪಕ್ಕಾದರೂ ಸತ್ಯ ಹೇಳಿ ಎಂದು ವ್ಯಂಗ್ಯವಾಡಿದರು.

40% ಸರ್ಕಾರ ಅಂತ ಗುತ್ತಿಗೆದಾರರಿಂದಲೇ ಕರೆಸಿಕೊಂಡ ಏಕೈಕ ಸರ್ಕಾರ ನಿಮ್ಮ ಬಿಜೆಪಿ ಸರ್ಕಾರ. ಈಗ ನಾವು ನಾಗಮೋಹನ್ ದಾಸ್ ನೇತೃತ್ವದಲ್ಲಿ ಇರುವ ತನಿಖಾ ಆಯೋಗ ರಚನೆಯಾಗಿದೆ. ನಮ್ಮ ಭ್ರಷ್ಟಾಚಾರದ ಬಗ್ಗೆ ದಾಖಲೆಗಳಿದ್ದರೆ ತೋರಿಸಿ, ದಾಖಲೆ ತಂದು ಒಪ್ಪಿಸಿ ಎಂದು ಸವಾಲು ಹಾಕಿದರು.

ಹತ್ತತ್ತು ವರ್ಷ ಪ್ರಧಾನಿ ಆಗಿ ಈ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಬಡವರ ಪರವಾಗಿ ಒಂದೇ ಒಂದು ಕಾರ್ಯಕ್ರಮ ಮಾಡಿದ್ದರೆ ತೋರಿಸಿ. ವಿದೇಶದಿಂದ ಕಪ್ಪು ಹಣ ತಂದು ಭಾರತೀಯರ ಖಾತೆಗೆ 15 ಲಕ್ಷ ಹಾಕ್ತೀನಿ ಅಂದ್ರಲ್ಲಾ 15 ರೂಪಾಯಿನಾದ್ರೂ ಹಾಕಿದ್ರಾ ಎಂದು ಪ್ರಶ್ನಿಸಿದರು.

ಅಚ್ಛೇ ದಿನ್ ಆಯೆಗಾ ಅಂದ್ರಲ್ಲಾ ಮೋದಿಜಿ, ಎಲ್ಲಿದೆ ತೋರ್ಸಿ ಅಚ್ಚೆ ದಿನ್ ?

*ಡೀಸೆಲ್ ಬೆಲೆ ಕಡಿಮೆ ಆಗಿದೆಯಾ?
*ಪೆಟ್ರೋಲ್ ಬೆಲೆ ಕಡಿಮೆ ಆಗಿದೆಯಾ?
*ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ?
*ಗೊಬ್ಬರದ ಬೆಲೆ ಕಡಿಮೆ ಆಗಿದೆಯಾ?
*ಬೇಳೆಕಾಳು ಬೆಲೆ ಕಡಿಮೆ ಆಗಿದೆಯಾ?
*ಅಡುಗೆ ಎಣ್ಣೆ ಬೆಲೆ ಕಡಿಮೆ ಆಗಿದೆಯಾ?
*ನಿರುದ್ಯೋಗ ಸಮಸ್ಯೆ ಬಗೆಹರಿಸಿದ್ರಾ?
*ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ರಾ?
*ರೈತರ ಆದಾಯ ದುಪ್ಪಟ್ಟು ಮಾಡಿದ್ರಾ?
*ವಿದೇಶದಿಂದ ಕಪ್ಪು ಹಣ ತಂದ್ರಾ?
*ಮತೆ ಎಲ್ಲಿದೆ ನಿಮ್ಮ ಅಚ್ಚೆ ದಿನ್? ಬನ್ನಿ ಸ್ಚಾಮಿ ತೋರ್ಸಿ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ, ವರ್ಗದ ಜನ ಸಮುದಾಯಗಳಿಗೆ ನಾವು ಅನುದಾನ ಮೀಸಲಿಡಲು ಕಾನೂನು ಮಾಡಿದ್ದು ನಮ್ಮ ಸರ್ಕಾರ. ನೀವು ಹತ್ತತ್ತು ವರ್ಷ ಪ್ರಧಾನಿಯಾಗಿ ದಲಿತ ಸಮುದಾಯದ , ಹಿಂದುಳಿದ ಜಾತಿ ಸಮುದಾಯಗಳ ಪ್ರಗತಿಗೆ ಒಂದೇ ಒಂದು ಕಾರ್ಯಕ್ರಮವನ್ನಾದರೂ ರೂಪಿಸಿದ್ದೀರಾ ಎಂದು ಪ್ರಶ್ನಿಸಿದರು.

ನಾನು ಮೊದಲ ಮುಖ್ಯಮಂತ್ರಿಯಾಗಿ ಕೊಟ್ಟ ಆಶ್ವಾಸನೆಗಳಲ್ಲಿ ಶೇ95 ರಷ್ಟು ಈಡೇರಿಸಿದೆ. ಈ ಬಾರಿ ನಾವು ಹೇಳಿದ್ದ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ನೀವು ನಮ್ಮ ರಾಜ್ಯದ ಜನತೆಗೆ ಏನಾದ್ರೂ ಮಾಡಿದ್ರೆ ಬನ್ನಿ ತೋರ್ಸಿ ಸ್ವಾಮಿ ಎಂದು ಸವಾಲು ಹಾಕಿದರು.

ರಾಹುಲ್ ಗಾಂಧಿ ನ್ಯಾಯಪತ್ರ ನಿಮ್ಮ ಮನೆ ಬಾಗಿಲಿಗೆ ಬರತ್ತೆ

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಜತೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು 25 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ತಕ್ಷಣ ಎಲ್ಲಾ 25 ಗ್ಯಾರಂಟಿಗಳು ಜಾರಿ ಆಗುತ್ತವೆ ಎಂದರು.

ಹೆಚ್.ಡಿ.ಕೆ ಮಾತಿಂದ ಮಹಿಳಾ ಸಮುದಾಯಕ್ಕೆ ಅವಮಾನ

ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರು ಹಾದಿ ತಪ್ಪಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ನೀಡಿದ ಹೇಳಿಕೆ ಇಡೀ ಮಹಿಳಾ ಸಮುದಾಯದ ಸ್ವಾಭಿಮಾನವನ್ನು ಕೆಣಕಿದೆ. ಮಹಿಳೆಯರಿಗೆ ಈ ಮಟ್ಟದ ಅವಮಾನ ಖಂಡನೀಯ ಎಂದರು.

BJP ಯ ದೇಶಭಕ್ತಿಗೆ ಅರ್ಥವೇ ಇಲ್ಲ

ಬ್ರಿಟೀಷರ ವಿರುದ್ಧದ ಭಾರತೀಯರ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ, RSS ನ ಒಬ್ಬೇ ಒಬ್ಬನೂ ಹುತಾತ್ಮ ಆಗಲಿಲ್ಲ. ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎನ್ನುವ ಸ್ವತಂತ್ರ ಹೋರಾಟದಲ್ಲಿ ಇಡೀ ಭಾರತೀಯರು ದುಮುಕಿದರು. ಆದರೆ 1925 ರಲ್ಲೇ ಹುಟ್ಟಿದ್ದ BJP ಯ ಮಾತೃಸಂಸ್ಥೆ RSS ನ ಒಬ್ಬೇ ಒಬ್ಬರೂ ಏಕೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ ಎನ್ನುವುದಕ್ಕೆ ಇಡಿ ದೇಶದ ಜನರಿಗೆ ಉತ್ತರಿಸಬೇಕು ಎಂದು ಆಗ್ರಹಿಸಿದರು.

don't you remember Karnataka at a different time if you leave at the time of elections? CM's question Modiji ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆ
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

29/06/2025 5:17 PM

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM

BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

29/06/2025 5:15 PM

BREAKING : ಕೋಲಾರದಲ್ಲಿ ಘೋರ ಘಟನೆ : ಕುರುಡುಮಲೆ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಬಾಲಕ ಸಾವು!

29/06/2025 5:14 PM
State News
KARNATAKA

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

By kannadanewsnow0929/06/2025 5:17 PM KARNATAKA 1 Min Read

ಮೈಸೂರು: ಸೆಪ್ಟೆಂಬರ್‌ನಲ್ಲಿ ಸಿಎಂ ಕುರ್ಚಿ ಬದಲಾಗಲಿದೆ. ಕ್ರಾಂತಿ ನಡೆಯಲಿದೆ ಎಂದು ಸಚಿವರೇ ಹೇಳುತ್ತಿದ್ದು, ಇಡೀ ಕಾಂಗ್ರೆಸ್‌ ಒಡೆದ ಮನೆಯಾಗಿದೆ. ಈ…

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM

BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

29/06/2025 5:15 PM

BREAKING : ಕೋಲಾರದಲ್ಲಿ ಘೋರ ಘಟನೆ : ಕುರುಡುಮಲೆ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಬಾಲಕ ಸಾವು!

29/06/2025 5:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.