Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರು ‘ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತ ದುರಂತ ಕೇಸ್ : `RCB ಮ್ಯಾನೇಜ್ಮೆಂಟ್’ ನ ಪ್ರತಿನಿಧಿ ಬಂಧನಕ್ಕೆ ಸಿಎಂ ಆದೇಶ.!

06/06/2025 7:01 AM

ಭಾರತದೊಂದಿಗಿನ ದ್ವಿಪಕ್ಷೀಯ ಒಪ್ಪಂದಗಳನ್ನು ರದ್ದುಗೊಳಿಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಪಾಕಿಸ್ತಾನ

06/06/2025 7:00 AM

BIG NEWS : ರಾಜ್ಯ ಆರೋಗ್ಯ ಇಲಾಖೆಯ ನೌಕರರಿಗೆ ಇನ್ಮುಂದೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ.!

06/06/2025 6:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರೋಡ್ ಟು ನೋವೇರ್’ನಿಂದ ಸಂಪೂರ್ಣ ಅಭಿವೃದ್ಧಿ ಕಡೆ ಮೋದಿಜೀ ಆಡಳಿತ- ಡಾ.ಸಿ.ಎನ್ ಅಶ್ವತ್ಥನಾರಾಯಣ
KARNATAKA

‘ರೋಡ್ ಟು ನೋವೇರ್’ನಿಂದ ಸಂಪೂರ್ಣ ಅಭಿವೃದ್ಧಿ ಕಡೆ ಮೋದಿಜೀ ಆಡಳಿತ- ಡಾ.ಸಿ.ಎನ್ ಅಶ್ವತ್ಥನಾರಾಯಣ

By kannadanewsnow0910/02/2024 4:37 PM

ಬೆಂಗಳೂರು: ಕೇಂದ್ರದ ಬಿಜೆಪಿ ಸರಕಾರವು ತಮ್ಮ ಸಾಧನೆಯನ್ನು ಅಂಕಿಅಂಶಗಳ ಶ್ವೇತಪತ್ರದ ಮೂಲಕ ತಿಳಿಸಿದೆ. ಯುಪಿಎ ಅವಧಿಯ ‘ಆಡಳಿತ ರೋಡ್ ಟು ನೋವೇರ್’ ಆಗಿತ್ತು. ರಾಜಕೀಯ ಪ್ರೇರಿತ ಆಡಳಿತ ಅದಾಗಿತ್ತು. ಯುಪಿಎ ಬಿಟ್ಟು ಹೋದ ಆರ್ಥಿಕ ಗೊಂದಲ, ದಿಕ್ಕು ದೆಸೆ ಇಲ್ಲದ ಆಡಳಿತ, ಅವ್ಯವಸ್ಥೆಯನ್ನು ಸರಿಪಡಿಸಿ ಕಷ್ಟದ ಕಾಲದಿಂದ ಒಳ್ಳೆಯ ಕಾಲಕ್ಕೆ ದೇಶವನ್ನು ಒಯ್ದವರು ನರೇಂದ್ರ ಮೋದಿಜೀ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ವಿಶ್ಲೇಷಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರದ ಎನ್‍ಡಿಎ ಸರಕಾರದ ಸಾಧನೆ ಮತ್ತು ಯುಪಿಎ ಸರಕಾರದ ವೈಫಲ್ಯಗಳ ಕುರಿತು ವಿವರಿಸಿದರು.

ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ಸಿಗರು ಮಾತನಾಡುತ್ತಾರೆ. ವಾಜಪೇಯಿ ಅವರ ಆಡಳಿತ ಇದ್ದಾಗ ಹಣದುಬ್ಬರ- ಬೆಲೆ ಏರಿಕೆ ಶೇ 3.9ರಷ್ಟಿತ್ತು. ಕಾಂಗ್ರೆಸ್‍ನ 10 ವರ್ಷಗಳ ಅವಧಿಯಲ್ಲಿ ಅದು ಸರಾಸರಿ ಶೇ 8.2 ಆಗಿತ್ತು. ಕೋವಿಡ್ ಇದ್ದರೂ, ಜಾಗತಿಕ ಹಣಕಾಸಿನ ಬಿಕ್ಕಟ್ಟು, ಯುದ್ಧಗಳಿದ್ದರೂ ಮೋದಿಜೀ ಅವರ ಆಡಳಿತದಲ್ಲಿ ಬೆಲೆ ಏರಿಕೆ ಸರಾಸರಿ ಶೇ 5ರಷ್ಟಿದೆ. ವಿಶ್ವದ ಎಲ್ಲೆಡೆ ಬೆಲೆ ಏರಿಕೆ ಇದೆ. ವಾಸ್ತವವಾಗಿ ಯುಪಿಎ ಅವಧಿಯಲ್ಲಿ ಬೆಲೆ ಏರಿಕೆ ಇದ್ದುದು ಎದ್ದು ಕಾಣುವಂತಿತ್ತು ಎಂದು ವಿವರಿಸಿದರು.

ವಾಜಪೇಯಿ ಅವರ ಕಾಲದಲ್ಲಿ ಶೇ 8ರಷ್ಟು ಜಿಡಿಪಿ ಮೂಲಕ ಅಭಿವೃದ್ಧಿ ಇತ್ತು. ಆದರೆ, ಯುಪಿಎ ಕಾಲದಲ್ಲಿ ಬೆಲೆ ಏರಿಕೆ ಇದ್ದರೂ ಬೆಳವಣಿಗೆ ಕಡಿಮೆ ಇತ್ತು. ಕಾಂಗ್ರೆಸ್ ಅವಧಿಯದು ಶೇ 5ಷ್ಟು ಅಭಿವೃದ್ದಿ ಮಾತ್ರ ಎಂದು ಅವರು ಆರೋಪಿಸಿದರು. ಮೋದಿಯವರ ಅವಧಿಯಲ್ಲಿ ಶೇ 8ರಿಂದ 9ರಷ್ಟು ಬೆಳವಣಿಗೆಯನ್ನು ನಾವು ಕಾಣುತ್ತಿದ್ದೇವೆ ಎಂದು ನುಡಿದರು. ಯುಪಿಎ ಅವಧಿಯಲ್ಲಿ ಸಾರ್ವಜನಿಕ ರಂಗದ ಬ್ಯಾಂಕ್‍ಗಳಿಂದ ಅತಿ ಹೆಚ್ಚು ಸಾಲ ಕೊಡಿಸಿದ್ದರು. ವಾಜಪೇಯಿಯವರ ಕಾಲದಲ್ಲಿ ಲೋನ್ ಎಕ್ಸ್‍ಪೋಜರ್ 6 ಲಕ್ಷ 60 ಸಾವಿರ ಕೋಟಿ ಇದ್ದರೆ ಯುಪಿಎ ಕಾಲದಲ್ಲಿ ಅದು 39 ಲಕ್ಷ ಕೋಟಿಗೆ ಏರಿತ್ತು ಎಂದು ತಿಳಿಸಿದರು.

ದೇಶದ ಸಾಲ ಮರುಪಾವತಿಗೂ ಸಮಸ್ಯೆ ಇತ್ತು. ಯುಪಿಎ ಸರಕಾರ ನಿರಾಳವಾಗಿ ನಿದ್ರಾಲೋಕದಲ್ಲಿತ್ತು ಎಂದು ಟೀಕಿಸಿದ ಅವರು, ಬ್ಯಾಂಕ್ ಎನ್‍ಪಿಎ ಶೇ 7 ಇತ್ತು. ಈಗ ಅದು ಶೇ 3.2ರಷ್ಟಿದೆ. ಬ್ಯಾಂಕ್‍ಗಳು ಹಿಂದೆ ಮುಚ್ಚುವಂಥ ಸ್ಥಿತಿಯಲ್ಲಿದ್ದವು. ಈಗ ಮೋದಿಜೀ ಅವರ ಆಡಳಿತದಲ್ಲಿ ಅವು ಬೆಳವಣಿಗೆ ಕಂಡಿವೆ ಎಂದು ಹೇಳಿದರು.
ಯುಪಿಎ ಅವಧಿಯಲ್ಲಿ ಡಾಲರ್ ಬೆಲೆ ಏರಿಕೆಯೂ ಗರಿಷ್ಠ ಪ್ರಮಾಣದಲ್ಲಿತ್ತು. ಕೇವಲ 4 ತಿಂಗಳಿಗೆ ಆಮದಿಗೆ ಸಾಕಾಗುವಷ್ಟು ಮಾತ್ರ ಫಾರಿನ್ ರಿಸರ್ವ್ (290 ಬಿಲಿಯನ್ ಡಾಲರ್) ನಮ್ಮ ದೇಶದಲ್ಲಿತ್ತು. ಈಗ 596 ಬಿಲಿಯನ್ ಡಾಲರ್ ಇದೆ. ಈಗ ಅಭಿವೃದ್ಧಿಯು ಭರವಸೆದಾಯಕವಾಗಿ ನಿರ್ವಹಣೆ ಆಗುತ್ತಿದೆ ಎಂದು ವಿವರ ನೀಡಿದರು.

ಹಣಕಾಸು ಕೊರತೆ ಗರಿಷ್ಠ ಇತ್ತು. ತೋರಿಸುತ್ತಿದ್ದುದೇ ಒಂದು; ವಾಸ್ತವವಾಗಿ ಇನ್ನೊಂದು ಎಂಬ ಸ್ಥಿತಿ ಇತ್ತು. 1 ಲಕ್ಷದ 90 ಸಾವಿರ ಕೋಟಿ ಆಯಿಲ್ ಬಾಂಡ್ ಬಿಡುಗಡೆ ಮಾಡಿದರು. ಇದನ್ನೆಲ್ಲ ತೋರಿಸಿರಲಿಲ್ಲ. ಇಂಥ ಸಾಲಗಳನ್ನು ಮರುಪಾವತಿ ಮಾಡಲಾಗಿದೆ ಎಂದು ಹೇಳಿದರು.

ಅವರ ಕಾಲದಲ್ಲಿ ಆರ್ಥಿಕ ಸುಸ್ಥಿರತೆ ಇಲ್ಲದೆ ಎಲ್ಲವೂ ಭರವಸೆದಾಯಕವಾಗಿರಲಿಲ್ಲ. ಇವತ್ತು ಎಲ್ಲವೂ ಸುಸ್ಥಿರತೆಯಿಂದ ಸಾಗಿದೆ. ಮೂಲಭೂತ ಸೌಕರ್ಯ, ಆಸ್ತಿ ನಿರ್ಮಿಸುವ ನಿಟ್ಟಿನಲ್ಲಿ ಕ್ಯಾಪಿಟಲ್ ಎಕ್ಸ್‍ಪೆಂಡಿಚರ್ ಮೊತ್ತವು ವಾಜಪೇಯಿ ಅವರ ಕಾಲದಲ್ಲಿ ಶೇ 31ರಷ್ಟಿತ್ತು. ಕಾಂಗ್ರೆಸ್ ಕಾಲದಲ್ಲಿ ಅದು ಕೇವಲ ಶೇ 16ಕ್ಕೆ ಇಳಿಯಿತು. ಮೋದಿಜೀ ಅವರ ಕಾಲದಲ್ಲಿ ಮತ್ತೆ ಶೇ 28ಕ್ಕೆ ಏರಿಕೆ ಕಂಡಿತು ಎಂದು ಮಾಹಿತಿ ನೀಡಿದರು. ಕಾಂಗ್ರೆಸ್ ಅವಧಿಯಲ್ಲಿ ಮೂಲಭೂತ ಸೌಕರ್ಯಕ್ಕೆ ಕಡಿವಾಣ ಹಾಕಿರುವುದು ಎದ್ದು ಕಾಣುವಂತಿದೆ ಎಂದರು. ಈ ಎಲ್ಲ ವಿಚಾರಗಳಿಗೆ ಕಾಂಗ್ರೆಸ್ಸಿನವರಲ್ಲಿ ಉತ್ತರ ಇಲ್ಲ ಎಂದು ಟೀಕಿಸಿದರು.

ಸಾಮಾಜಿಕ ಕ್ಷೇತ್ರದಲ್ಲಿ 96 ಸಾವಿರ ಕೋಟಿ ಮೊತ್ತ ಖರ್ಚಾಗದೆ ಉಳಿದಿತ್ತು. ಇದು ಅಸಮರ್ಥ ಆಡಳಿತಕ್ಕೆ ಕೈಗನ್ನಡಿ ಎಂದು ದೂರಿದರು. 60-65 ವರ್ಷಗಳ ಕಾಂಗ್ರೆಸ್- ಯುಪಿಎ ಅವಧಿಯಲ್ಲಿ 14.5 ಕೋಟಿ ಎಲ್‍ಪಿಜಿ ಸಿಲಿಂಡರ್ ಸಂಪರ್ಕ ಇದ್ದುದು ಈಗ 31 ಕೋಟಿಗೂ ಹೆಚ್ಚಾಗಿದೆ. ವಿದ್ಯುದೀಕರಣ ಅವರ ಕಾಲದಲ್ಲಿ ಶೇ 85 ಇದ್ದುದನ್ನು ಈಗ ಶೇ 100ಕ್ಕೆ ತರಲಾಗಿದೆ. ಅವರ ಕಾಲದಲ್ಲಿ 12 ಗಂಟೆ ಸರಾಸರಿ ವಿದ್ಯುತ್ ಲಭ್ಯವಿದ್ದರೆ, ಈಗ 20 ಗಂಟೆಗೂ ಹೆಚ್ಚು ಕಾಲ ಲಭ್ಯತೆ ಇದೆ ಎಂದು ಅಂಕಿಅಂಶಗಳನ್ನು ನೀಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಾಲವಿಕಾ ಅವಿನಾಶ್, ಮಾಧ್ಯಮ ವಕ್ತಾರ ವೆಂಕಟೇಶ್ ಅವರು ಈ ಸಂದರ್ಭದಲ್ಲಿ ಇದ್ದರು.

‘ನಮೋ ಹ್ಯಾಟ್ರಿಕ್’: ಸಂಸತ್ತಿಗೆ ‘ಕೇಸರಿ ಟೀ ಶರ್ಟ್’ ಧರಿಸಿ ಬಂದ ಸಚಿವ ಅನುರಾಗ್ ಠಾಕೂರ್

ರಾಜ್ಯ ‘ಗುತ್ತಿಗೆ, ಹೊರಗುತ್ತಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಸಮಾನ ಕೆಲಸಕ್ಕೆ, ‘ಸಮಾನ ವೇತನ’ ಜಾರಿ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರು ‘ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತ ದುರಂತ ಕೇಸ್ : `RCB ಮ್ಯಾನೇಜ್ಮೆಂಟ್’ ನ ಪ್ರತಿನಿಧಿ ಬಂಧನಕ್ಕೆ ಸಿಎಂ ಆದೇಶ.!

06/06/2025 7:01 AM1 Min Read

BIG NEWS : ರಾಜ್ಯ ಆರೋಗ್ಯ ಇಲಾಖೆಯ ನೌಕರರಿಗೆ ಇನ್ಮುಂದೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ.!

06/06/2025 6:59 AM1 Min Read

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

06/06/2025 6:41 AM1 Min Read
Recent News

BREAKING : ಬೆಂಗಳೂರು ‘ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತ ದುರಂತ ಕೇಸ್ : `RCB ಮ್ಯಾನೇಜ್ಮೆಂಟ್’ ನ ಪ್ರತಿನಿಧಿ ಬಂಧನಕ್ಕೆ ಸಿಎಂ ಆದೇಶ.!

06/06/2025 7:01 AM

ಭಾರತದೊಂದಿಗಿನ ದ್ವಿಪಕ್ಷೀಯ ಒಪ್ಪಂದಗಳನ್ನು ರದ್ದುಗೊಳಿಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಪಾಕಿಸ್ತಾನ

06/06/2025 7:00 AM

BIG NEWS : ರಾಜ್ಯ ಆರೋಗ್ಯ ಇಲಾಖೆಯ ನೌಕರರಿಗೆ ಇನ್ಮುಂದೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ.!

06/06/2025 6:59 AM

ಸಲಿಂಗ ದಂಪತಿಗಳು ಒಂದು ಕುಟುಂಬವಾಗಬಹುದು: ಮದ್ರಾಸ್ ಹೈಕೋರ್ಟ್

06/06/2025 6:51 AM
State News
KARNATAKA

BREAKING : ಬೆಂಗಳೂರು ‘ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತ ದುರಂತ ಕೇಸ್ : `RCB ಮ್ಯಾನೇಜ್ಮೆಂಟ್’ ನ ಪ್ರತಿನಿಧಿ ಬಂಧನಕ್ಕೆ ಸಿಎಂ ಆದೇಶ.!

By kannadanewsnow5706/06/2025 7:01 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತಕ್ಕೆ ಕಾರಣವಾದವರ ಬಂಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಆದೇಶ…

BIG NEWS : ರಾಜ್ಯ ಆರೋಗ್ಯ ಇಲಾಖೆಯ ನೌಕರರಿಗೆ ಇನ್ಮುಂದೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ.!

06/06/2025 6:59 AM

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

06/06/2025 6:41 AM

ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ

06/06/2025 6:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.