Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಾಕಿಸ್ತಾನದ ಮೇಲೆ ಮುಂದುವರೆದ ದಾಳಿ : ಪಂಜಾಬ್ ಪ್ರಾಂತ್ಯದ ಮೇಲೆ 5 ಡ್ರೋನ್ ಗಳಿಂದ ಅಟ್ಯಾಕ್

09/05/2025 10:07 AM

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM

BREAKING : ಪಾಕಿಸ್ತಾನದ F-16 ಎರಡು, F-17 ಎರಡು ಫೈಟರ್ ಜೆಟ್ ವಿಮಾನಗಳನ್ನು ಹೊಡೆದುರುಳಿಸಿದ ಭಾರತ

09/05/2025 9:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಜೂನ್-ಸೆಪ್ಟೆಂಬರ್ ನಲ್ಲಿ ಮಾನ್ಸೂನ್ ಚುರುಕು: ಏಪ್ರಿಲ್-ಮೇ ತಿಂಗಳಲ್ಲೂ ಉತ್ತಮ ಮಳೆ ನಿರೀಕ್ಷೆ
KARNATAKA

ರಾಜ್ಯದಲ್ಲಿ ಜೂನ್-ಸೆಪ್ಟೆಂಬರ್ ನಲ್ಲಿ ಮಾನ್ಸೂನ್ ಚುರುಕು: ಏಪ್ರಿಲ್-ಮೇ ತಿಂಗಳಲ್ಲೂ ಉತ್ತಮ ಮಳೆ ನಿರೀಕ್ಷೆ

By kannadanewsnow0920/03/2025 8:34 PM

ಬೆಂಗಳೂರು : ಪ್ರಸ್ತುತ ವರ್ಷದ ಮಾನ್ಸೂನ್ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಜೂನ್- ಸೆಪ್ಟೆಂಬರ್ ಅವಧಿಯಲ್ಲಿ ಮಾನ್ಸೂನ್ ಚುರುಕಾಗಲಿದೆ. ಏಪ್ರಿಲ್-ಮೇ ತಿಂಗಳಲ್ಲೂ ಉತ್ತಮ ಮಳೆ ನಿರೀಕ್ಷೆಯಿದೆ.

ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ 2025ನೇ ಸಾಲಿನ ಹವಾಮಾನ ಪರಿಸ್ಥಿತಿ ಕುರಿತು ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು.

ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಆದರೆ, ಜೂನ್ನಿಂದ ಸೆಪ್ಟೆಂಬರ್ವರೆಗಿನ ಮಾನ್ಸೂನ್ ಅವಧಿಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳೂ ಚುರುಕುಗೊಳ್ಳಲಿವೆ ” ಎಂದು ಮಾಹಿತಿ ನೀಡಿದರು.

ಮುಂದುವರೆದು, “ಸೆಪ್ಟೆಂಬರ್ ನಂತರದ ಹಿಂಗಾರಿನಲ್ಲೂ ಈ ವರ್ಷ ವಾಡಿಕೆಯ ಮಳೆ ನಿರೀಕ್ಷಿಸಬಹುದು. ಅಲ್ಲದೆ, ಭಾರತ ಹವಮಾನ ಇಲಾಖೆಯ ತಾಪಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಉತ್ತರ ಒಳನಾಡು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಟ ತಾಪಮಾನದ ಸಂಭವನೀಯತೆ ಸಾಮಾನ್ಯಕ್ಕಿಂತ ಹೆಚ್ಚಾಗಿರುವ ಸಾಧ್ಯತೆಗಳಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ತಾಪಮಾನ ಹೆಚ್ಚಾಗಲಿದೆ. ಉಳಿದ ಇತರ ಜಿಲ್ಲೆಗಳಲ್ಲಿ ಸಾಮಾನ್ಯ ತಾಪಮಾನ ಇರುವ ಸಾಧ್ಯತೆಯಿದೆ” ಎಂದು ಅಧಿಕಾರಿಗಳು ತಿಳಿಸಿದರು.

ಜಲಾಶಯಗಳಲ್ಲಿನ ನೀರಿನ ಮಟ್ಟ:

ರಾಜ್ಯದಲ್ಲಿನ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು 422.11 ಟಿ.ಎಂ.ಸಿ ನೀರಿನ ಸಂಗ್ರಹಣೆಯಿದ್ದು, ಕಳೆದ ಸಾಲಿನ ಇದೇ ಸಮಯದಲ್ಲಿ 280.02 ಟಿ.ಎಂ.ಸಿ. ನೀರಿನ ಸಂಗ್ರಹಣೆ ಇತ್ತು.

ಕೆಲವೊಂದು ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿ ಇಲ್ಲದೆ ಇರುವ ಬಗ್ಗೆ ಅತಂಕ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು,” ನೀರಾವರಿಗಿಂತ (ಬೇಸಿಗೆ ಬೆಳೆಗಳು) ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮುಂದಿನ ದಿನಗಳಲ್ಲಿ ನೀರಿನ ಬಿಡುಗಡೆಗಳು ಹೆಚ್ಚಿನ ತಾಪಮಾನವು ನೀರಿನ ನಷ್ಟಕ್ಕೆ ಕಾರಣವಾಗುತ್ತದೆಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ನೀರಿನ ಬಿಡುಗಡೆಯ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ಮುಂಬರುವ ತಿಂಗಳುಗಳಲ್ಲಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಎಂಬ ಕುರಿತು ಮುಂದಿನ ಸಭೆಯಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪ್ಮೂಲ ಇಲಾಖೆಗೆ ಸೂಚಿಸಿದರು. ಕುಡಿಯುವ ನೀರಿಗೆ ಅವಶ್ಯವಿರುವ ನೀರನ್ನು ಕಾಯ್ದಿರಿಸಿದ ನಂತರವೇ ನೀರಾವರಿಗಾಗಿ ನೀರನ್ನು ಬಿಡುಗಡೆಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಯಾವೆಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ?:

ಪ್ರಸ್ತುತ ರಾಜ್ಯದ 12 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕಲಬುರಗಿ, ಚಾಮರಾಜನಗರ, ಯಾದಗಿರಿ, ಉತ್ತರಕನ್ನಡ ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ 30 ತಾಲ್ಲೂಕುಗಳ ವ್ಯಾಪ್ತಿಯ 115 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಬಾಡಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ಅದೇ ರೀತಿ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 5 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ರಾಮನಗರ, ದಕ್ಷಿಣ ಕನ್ನಡ ಮತ್ತು ಕೋಲಾರ ಜಿಲ್ಲೆಗಳ 8 ನಗರ ಸ್ಥಳೀಯ ಸಂಸ್ಥೆಗಳ 72 ವಾರ್ಡ್ಗಳಲ್ಲಿ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ನೀರಿನ ಸಮಸ್ಯೆಗಳನ್ನು ಪರಿಹರಿಸಲು ತಾಲೂಕು ಮತ್ತು ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುವುದು. ಎಲ್ಲಾ RO ಸ್ಥಾವರಗಳು (RO Plants) ನಿರಂತರ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಹಾಗೂ ಸದರಿ ಸ್ಥಾವರಗಳಿಗೆ 24/7 ನಿರಂತರ ವಿದ್ಯುತ್ ಪೂರೈಸುವುದು. RO ಸ್ಥಾವರಗಳ ತಕ್ಷಣದ ದುರಸ್ತಿಗಾಗಿ ಮತ್ತು ಕುಡಿಯುವ ನೀರು ಸರಬರಾಜು ಸಮಸ್ಯೆಗಳ ಇತ್ಯರ್ಥಕ್ಕಾಗಿ ತ್ವರಿತ ಪರಿಹಾರ ತಂಡಗಳನ್ನು ನಿಯೋಜಿಸುವುದು. ಕುಡಿಯುವ ನೀರಿನ ಕೊರತೆಯ ಅಪಾಯದಲ್ಲಿರುವ ಪ್ರದೇಶಗಳನ್ನು ಗುರುತಿಸಿ ಮತ್ತು ಸಕಾಲಿಕ ತಗ್ಗಿಸುವಿಕೆಗಾಗಿ ಕಾರ್ಯತಂತ್ರಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಸಂಬಂಧಿತ ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದಲ್ಲಿ ‘ವಿದ್ಯುತ್ ದರ ಏರಿಕೆ’ ಮಾಡಿದ್ದೇಕೆ ಗೊತ್ತಾ.? ಇಲ್ಲಿದೆ ‘ಸಚಿವ ಕೆಜೆ ಜಾರ್ಜ್’ ಸ್ಪಷ್ಟನೆ | Electricity Price Hike

BIG NEWS: ರಾಜ್ಯ, ರಾಷ್ಟ್ರಮಟ್ಟದ ’48 ಮಂದಿ’ ಹನಿಟ್ರ್ಯಾಪ್ CD, ಪೆನ್ ಡ್ರೈವ್ ಇದ್ದಾವೆ: ಸಚಿವ ರಾಜಣ್ಣ ಸ್ಪೋಟಕ ಬಾಂಬ್ | Honey Trap

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM1 Min Read

BREAKING : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ : ಬೆಂಗಳೂರು ಕಮಿಷನರ್ ಬಿ.ದಯಾನಂದ್

09/05/2025 9:13 AM1 Min Read

BREAKING : ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು

09/05/2025 8:52 AM1 Min Read
Recent News

BREAKING : ಪಾಕಿಸ್ತಾನದ ಮೇಲೆ ಮುಂದುವರೆದ ದಾಳಿ : ಪಂಜಾಬ್ ಪ್ರಾಂತ್ಯದ ಮೇಲೆ 5 ಡ್ರೋನ್ ಗಳಿಂದ ಅಟ್ಯಾಕ್

09/05/2025 10:07 AM

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM

BREAKING : ಪಾಕಿಸ್ತಾನದ F-16 ಎರಡು, F-17 ಎರಡು ಫೈಟರ್ ಜೆಟ್ ವಿಮಾನಗಳನ್ನು ಹೊಡೆದುರುಳಿಸಿದ ಭಾರತ

09/05/2025 9:35 AM

BREAKING : ಭಾರತ-ಪಾಕ್ ಮಧ್ಯ ಪರಿಸ್ಥಿತಿ ಉದ್ವಿಗ್ನ : ಜಮ್ಮು ಕಾಶ್ಮೀರದಲ್ಲಿ 2 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

09/05/2025 9:19 AM
State News
KARNATAKA

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

By kannadanewsnow0509/05/2025 9:48 AM KARNATAKA 1 Min Read

ಶಿವಮೊಗ್ಗ : ಇಂದು ಶಿವಮೊಗ್ಗದಲ್ಲಿ ಬೆಳಂ ಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವಾಕಿಂಗ್ ಗೆ ಎಂದು ತೆರಳಿದ ವ್ಯಕ್ತಿಯನ್ನು ದುಷ್ಕರ್ಮಿಗಳು…

BREAKING : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ : ಬೆಂಗಳೂರು ಕಮಿಷನರ್ ಬಿ.ದಯಾನಂದ್

09/05/2025 9:13 AM

BREAKING : ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು

09/05/2025 8:52 AM

BREAKING : ಯಾದಗಿರಿಯಲ್ಲಿ ಘೋರ ದುರಂತ : ಹೊಂಡದಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವು

09/05/2025 8:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.