ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕಳೆದ ಹಲವು ದಿನಗಳಿಂದ ಸುರಿಯುತ್ತಿರುವಂತ ಎಡೆಬಿಡದ ಮಳೆ ( Rain ), ಇನ್ನೂ ನಾಲ್ಕು ದಿನ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ( Meteorological Department ) ಮುನ್ಸೂಚನೆ ನೀಡಿದೆ. ಅಲ್ಲದೇ ಕರಾವಳಿ ಜಿಲ್ಲೆಯಲ್ಲಿ 2 ದಿನ ಆರೆಂಜ್ ಅಲರ್ಟ್ ಘೋಷಿಸಿದೆ.
ಭಾನುವಾರದ ಮಾಹಿತಿ ಅನುಸಾರ ರಾಜ್ಯದ ಕೊಡಗಿನ ಭಾಗಮಂಡಲದಲ್ಲಿ 160 ಮಿಮೀ, ಶೃಂಗೇರಿಯಲ್ಲಿ 140 ಮಿಮೀ, ದಕ್ಷಿಣ ಕನ್ನಡದ ಧರ್ಮಸ್ಥಳ ಮತ್ತು ಬೆಳ್ತಂಗಡಿಯಲ್ಲಿ 90 ಮಿಮೀ, ಪುತ್ತೂರಿನಲ್ಲಿ 80 ಮಿಮೀ ಮಳೆಯಾಗಿದೆ.
2,800 ಅಗ್ನಿವೀರರ ನೇಮಕಾತಿಗೆ ನೌಕಾಪಡೆಯಿಂದ ಅಧಿಸೂಚನೆ: ಜುಲೈ.15ರಿಂದ ಅರ್ಜಿ ಸಲ್ಲಿಕೆ ಆರಂಭ
ಇನ್ನೂ ಕರಾವಳಿ ಜಿಲ್ಲೆಗಳಾದಂತ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚಿನೆ ನೀಡಿದೆ. ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ 2 ದಿನ ಆರೆಂಜ್ ಅಲರ್ಟ್ ಘೋಷಿಸಿದೆ. ಇದಲ್ಲದೇ ಜುಲೈ.6 ಮತ್ತು 7ರಂದು ವ್ಯಾಪಕ ಮಳೆಯಾಗೋ ಕಾರಣ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಿದೆ.
ಇನ್ನೂ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ.4ರ ಇಂದಿನಿಂದ ಜುಲೈ.7ರವರೆಗೆ ಭಾರೀ ಮಳೆಯಾಗಲಿದೆ. ಬೀದರ್, ರಾಯಚೂರು, ಧಾರವಾಡ, ವಿಜಯಪುರ, ಬಾಗಲಕೋಟೆ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಜುಲೈ.5ರಿಂದ ಮೂರು ದಿನ ಭಾರೀ ಮಳೆಯಾಗೋ ಕಾರಣ ಯೆಲ್ಲೋ ಅಲರ್ಟ್ ಘೋಷಿಸಿದೆ.
BIGG NEWS: ಜುಲೈ ಅಂತ್ಯದೊಳಗೆ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ – ಸಚಿವ ಬಿ.ಸಿ ನಾಗೇಶ್