Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 17 ವರ್ಷಗಳ ಯೋಜನೆ, ವಿನ್ಯಾಸ ಮತ್ತು ಕಠಿಣ ಪರಿಶ್ರಮ : `ಚೆನಾಬ್ ಸೇತುವೆ’ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಾಧವಿ ಲತಾ ಯಾರು ಗೊತ್ತಾ?

08/06/2025 9:45 AM

BREAKING : ತಡರಾತ್ರಿ ಭಾರೀ ಸ್ಪೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಜಗಳೂರು ಪಟ್ಟಣದ ಜನ.!

08/06/2025 9:34 AM

‘ಭಾರತ-ಪಾಕಿಸ್ತಾನ ನಡುವೆ ನ್ಯೂಕ್ಲಿಯರ್‌ ವಾರ್‌ ಆಗೋದನ್ನು ತಪ್ಪಿಸಿದ್ದು ನಾನೇ’ : ಮತ್ತೆ ಪುನರುಚ್ಚರಿಸಿದ ಟ್ರಂಪ್

08/06/2025 9:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಏಪ್ರಿಲ್-ಮೇನಲ್ಲಿ ಉತ್ತಮ ಮಳೆ ಸಾಧ್ಯತೆ
KARNATAKA

ರಾಜ್ಯದಲ್ಲಿ ಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಏಪ್ರಿಲ್-ಮೇನಲ್ಲಿ ಉತ್ತಮ ಮಳೆ ಸಾಧ್ಯತೆ

By kannadanewsnow0920/02/2025 5:04 PM

ಬೆಂಗಳೂರು : ಪ್ರಸ್ತುತ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯನ್ ಬಿಸಿಲು ಅಧಿಕವಾಗಿದ್ದರೆ, ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಪಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು.

ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ಪ್ರಸ್ತುತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ” ಎಂದು ಮಾಹಿತಿ ನೀಡಿದರು.

ಪ್ರಸ್ತುತ ವರ್ಷ ಫೆಬ್ರವರಿಯಲ್ಲೇ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಪ್ರಮಾಣ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದ್ದು, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ವೇಳೆ ರಾಜ್ಯಾದ್ಯಂತ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಜಲಾಶಯಗಳಲ್ಲಿನ ನೀರಿನ ಮಟ್ಟ:

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಸಂಗ್ರಹಣೆ ಕುರಿತು ಉಪ ಸಮಿತಿಯಲ್ಲಿ ಕೂಲಂಕುಶವಾಗಿ ಪರಿಶೀಲಿಸಲಾಯಿತು. ರಾಜ್ಯದಲ್ಲಿನ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು 535.21 ಟಿ.ಎಂ.ಸಿ. ನೀರಿನ ಸಂಗ್ರಹಣೆಯಿದ್ದು, ಸರಾಸರಿ ನೀರಿನ ಸಂಗ್ರಹಣೆಯ ಶೇ.60 ರಷ್ಟು ಇದೆ. ಕಳೆದ ವರ್ಷ ಇದೇ ಸಮಯದಲ್ಲಿ 332.52 ಟಿ.ಎಂ.ಸಿ. ನೀರಿನ ಸಂಗ್ರಹಣೆ ಇತ್ತು ಎಂಬ ವಿಷಯವನ್ನು ಉಪಸಮಿತಿಯಲ್ಲಿ ಚರ್ಚಿಸಲಾಯಿತು.

ಕೆಲವೊಂದು ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿ ಇಲ್ಲದೆ ಇರುವ ಬಗ್ಗೆ ಅತಂಕ ವ್ಯಕ್ತಪಡಿಸಿದ ಸಚಿವರು, ಜಲಾನಯನ ಪ್ರದೇಶಗಳಲ್ಲಿನ ಬೆಳಗಳಿಗೆ ಅವಶ್ಯವಿರುವ ನೀರಿನ ಪ್ರಮಾಣ ಇತ್ಯಾದಿ ವಿಷಯಗಳನ್ನು ಗಮನದಲ್ಲಿರಿಸಿಕೊಂಡು ಮುಂಬರುವ ದಿನಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಯಾವ ಮಟ್ಟ ತಲುಪಲಿದೆ, ಅದರಿಂದಾಗಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಈ ಕುರಿತು ಮುಂದಿನ ಸಭೆಗಳಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪ್ಮೂಲ ಇಲಾಖೆಗೆ ಸೂಚಿಸಿದರು. ಕುಡಿಯುವ ನೀರಿಗೆ ಅವಶ್ಯವಿರುವ ನೀರನ್ನು ಕಾಯ್ದಿರಿಸಿದ ನಂತರವೇ ನೀರಾವರಿಗಾಗಿ ನೀರನ್ನು ಬಿಡುಗಡೆಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅಗತ್ಯವಿರುವ ಜಿಲ್ಲೆಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು:

ಪ್ರಸ್ತುತ ರಾಜ್ಯದ 5 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ 13 ತಾಲ್ಲೂಕುಗಳ ವ್ಯಾಪ್ತಿಯ 66 ಗ್ರಾಮಗಳಿಗೆ ದೀರ್ಘಕಾಲೀನ ಸಮಸ್ಯೆ ಹಾಗೂ ನೀರಿನ ಗುಣಮಟ್ಟದ ಸಮಸ್ಯೆಯಿಂದಾಗಿ ಬಾಡಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದೇ ರೀತಿ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 2 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ 5 ನಗರ ಸ್ಥಳೀಯ ಸಂಸ್ಥೆಗಳ 56 ವಾರ್ಡ್ಗಳಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿಯನ್ನು ಗುರಿತಿಸಲು ಸಭೆಯಲ್ಲಿ ಸೂಚನೆ ನೀಡಲಾಯಿತು.

ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಈ ಹಿಂದಿನ ವರ್ಷಗಳಲ್ಲಿ ಕೈಗೊಂಡ ಕ್ರಮಗಳ ಜೊತೆಗೆ ಕೈಗೊಳ್ಳಬಹುದಾದ ಹೆಚ್ಚುವರಿ ಕ್ರಮಗಳ ಕುರಿತು ಸಂಪೂರ್ಣ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. ಈ ಕುರಿತಂತೆ ಸ್ಪಷ್ಟವಾದ ವರದಿಯನ್ನು ಮುಂದಿನ ಸಚಿವರ ಸಂಪುಟ ಉಪಸಮಿತಿ ಸಭೆಯನ್ನು ಮಂಡಿಸುವಂತೆಯೂ ನಿರ್ದೇಶನ ನೀಡಲಾಯಿತು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರುಗಳ ಪಿ.ಡಿ. ಖಾತೆಯಲ್ಲಿ (ವಿಪತ್ತು ನಿಧಿ) ಪ್ರಸ್ತುತ ಒಟ್ಟು ರೂ.488.30 ಕೋಟಿಗಳ ಅನುದಾನ ಲಭ್ಯವಿದ್ದು, ಪರಿಹಾರ ಕ್ರಮಕ್ಕೆ ಯಾವುದೇ ಹಣಕಾಸು ಸಮಸ್ಯೆ ಇಲ್ಲ ಎಂಬ ವಿಷಯವನ್ನು ಸಚಿವ ಕೃಷ್ಣ ಬೈರೇಗೌಡ ಅವರು ಉಪ ಸಮಿತಿಯ ಗಮನ ಸೆಳೆದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್‌ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್‌ ಖರ್ಗೆ ಹಾಗೂ ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ‌ ಉಪಸ್ಥಿತರಿದ್ದರು.

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಮೌಲ್ವಿ ಮುಸ್ತಾಕ್ ಗೆ 14 ದಿನಗಳ ನ್ಯಾಯಾಂಗ ಬಂಧನ

ರಾಜ್ಯ ಸರ್ಕಾರದಿಂದ ‘PUC, SSLC ಪರೀಕ್ಷೆ’ಯಲ್ಲಿ ಅಕ್ರಮ ತಡೆಗೆ ಮಹತ್ವದ ಕ್ರಮ

Share. Facebook Twitter LinkedIn WhatsApp Email

Related Posts

BREAKING : ತಡರಾತ್ರಿ ಭಾರೀ ಸ್ಪೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಜಗಳೂರು ಪಟ್ಟಣದ ಜನ.!

08/06/2025 9:34 AM1 Min Read

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

08/06/2025 9:19 AM3 Mins Read

GOOD NEWS : ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

08/06/2025 8:57 AM2 Mins Read
Recent News

BIG NEWS : 17 ವರ್ಷಗಳ ಯೋಜನೆ, ವಿನ್ಯಾಸ ಮತ್ತು ಕಠಿಣ ಪರಿಶ್ರಮ : `ಚೆನಾಬ್ ಸೇತುವೆ’ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಾಧವಿ ಲತಾ ಯಾರು ಗೊತ್ತಾ?

08/06/2025 9:45 AM

BREAKING : ತಡರಾತ್ರಿ ಭಾರೀ ಸ್ಪೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಜಗಳೂರು ಪಟ್ಟಣದ ಜನ.!

08/06/2025 9:34 AM

‘ಭಾರತ-ಪಾಕಿಸ್ತಾನ ನಡುವೆ ನ್ಯೂಕ್ಲಿಯರ್‌ ವಾರ್‌ ಆಗೋದನ್ನು ತಪ್ಪಿಸಿದ್ದು ನಾನೇ’ : ಮತ್ತೆ ಪುನರುಚ್ಚರಿಸಿದ ಟ್ರಂಪ್

08/06/2025 9:34 AM

SHOCKING : ಪೋಷಕರೇ ಎಚ್ಚರ : ಜ್ವರದ ಸಿರಪ್ ಕುಡಿದ 5 ವರ್ಷದ ಮಗು ಸಾವು.!

08/06/2025 9:26 AM
State News
KARNATAKA

BREAKING : ತಡರಾತ್ರಿ ಭಾರೀ ಸ್ಪೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಜಗಳೂರು ಪಟ್ಟಣದ ಜನ.!

By kannadanewsnow5708/06/2025 9:34 AM KARNATAKA 1 Min Read

ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ತಡರಾತ್ರಿ ಬಾರೀ ಸ್ಪೋಟದ ಶಬ್ಬ ಕೇಳಿಸಿದ್ದು, ಜನರು ಬೆಚ್ಚಿ ಬಿದ್ದಿರುವ ಘಟನೆ…

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

08/06/2025 9:19 AM

GOOD NEWS : ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

08/06/2025 8:57 AM

ALERT : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್, ಈ ರೂಲ್ಸ್ ಗೊತ್ತಿರಲಿ |Check Bounce

08/06/2025 8:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.