ರಾಯಚೂರು: ಈಗಾಗಲೇ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿದಂತ ಪ್ರಕರಣ ನಡೆದು, 80ಕ್ಕೂ ಹೆಚ್ಚು ಜನರು ಆಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ಚಿಕಿತ್ಸೆ ಫಲಿಸದೇ 7 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ಮಾಸೋ ಮುನ್ನವೇ ಇಂದು ಮತ್ತೆ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರೋ ಘಟನೆ ಮರುಕಳಿಸಿದೆ.
BIG NEWS: ‘ಬೆಂಗಳೂರು ನಗರ ಪೊಲೀಸ್ ಇಲಾಖೆ’ಯಲ್ಲಿ ಮೇಜರ್ ಸರ್ಜರಿ: 31 ಪಿಎಸ್ಐ ವರ್ಗಾವಣೆಗೊಳಿಸಿ ಸರ್ಕಾರ ಆದೇಶ
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ವಲ್ಕಂ ದಿನ್ನಿ ಗ್ರಾಮದಲ್ಲಿ ಇಂದು ಕಲುಷಿತ ನೀರು ಕುಡಿಗು 10 ವಿದ್ಯಾರ್ಥಿಗಳು ಸಹಿತ 30ಕ್ಕೂ ಹೆಚ್ಚು ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
BIG NEWS: ದೇಶಕ್ಕೆ ಮೌನಿಯಾಗಿರುವ ರಾಷ್ಟ್ರಪತಿ ಅಥವಾ ರಬ್ಬರ್ ಸ್ಟಾಂನ್ ರಾಷ್ಟ್ರಪತಿಯಾಗಲ್ಲ – ಯಶವಂತ್ ಸಿನ್ಹಾ
ಅಂದಹಾಗೇ ಮಾನ್ವಿ ತಾಲೂಕಿನ ವಲ್ಕಂ ದಿನ್ನಿ ಗ್ರಾಮಕ್ಕೆ ತುಂಗಭದ್ರಾ ನದಿಯಿಂದ ನೀರು ಪೂರೈಸಲಾಗಿತ್ತು ಎನ್ನಲಾಗಿದೆ. 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಪರಿಣಾಮ, ತನಿಖೆಗೆ ಜಿಲ್ಲಾಡಳಿತ ಆದೇಶಿಸಿದೆ.