ಮಂಡ್ಯ: ಜಿಲ್ಲೆಯ ಪಾಂಡವಪುರದ ಬಳಿಯಲ್ಲಿ ವ್ಯಕ್ತಿಯೊಬ್ಬರ ಶವಸಂಸ್ಕಾರಕ್ಕೆ ತೆರಳಿದ್ದಂತ ಜನರ ಮೇಲೆ ಹೆಜ್ಜೇನುಗಳು ದಾಳಿ ನಡೆಸಿದ್ದಾವೆ. ಈ ದಾಳಿಯಲ್ಲಿ 40ಕ್ಕೂ ಹೆಚ್ಚು ಮಂದಿ ಹೆಜ್ಜೇನುಗಳ ಖಡಿತಕ್ಕೆ ಒಳಗಾಗಿರೋದಾಗಿ ತಿಳಿದು ಬಂದಿದೆ.

BIG NEWS: ‘ಅಪ್ಪು ಅಭಿಮಾನಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಬೆಂಗಳೂರಿನ ರಿಂಗ್ ರಸ್ತೆಗೆ ‘ಪುನೀತ್’ ಹೆಸರಿಡಲು ತೀರ್ಮಾನ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಾರೋಹಳ್ಳಿಯಲ್ಲಿ ಧರ್ಮರಾಜ್ ಎಂಬುವರು ಸಾವನ್ನಪ್ಪಿದ್ದರು. ಅವರ ಪಾರ್ಥೀವ ಶರೀರವನ್ನು ಸಂಸ್ಕಾರ ಮಾಡೋದಕ್ಕೆ ಗ್ರಾಮದ ಜನರು ಕೊಂಡೊಯ್ದಿದ್ದರು. ಈ ವೇಳೆ ಹೆಜ್ಜೇನುಗಳು ದಾಳಿ ನಡೆಸಿದ್ದಾವೆ.

‘ಯುಪಿಐ ವಹಿವಾಟಿ’ನಲ್ಲಿ ದಾಖಲೆ ; ಅಕ್ಟೋಬರ್’ನಲ್ಲಿ ಬರೋಬ್ಬರಿ ’12 ಲಕ್ಷ ಕೋಟಿ’ ಟ್ರಾನ್ಸಕ್ಷನ್

ಶವ ಸಂಸ್ಕಾರಕ್ಕೆ ಹಾರೋಹಳ್ಳಿಯ ಹಲವು ಜನರು ಸೇರಿದ್ದ ವೇಳೆಯಲ್ಲಿ ಹೆಜ್ಜೇನು ದಾಳಿ ನಡೆಸಿದ್ದರಿಂದಾಗಿ 40ಕ್ಕೂ ಹೆಚ್ಚು ಜನರು ಹೆಜ್ಜೇನುಗಳ ಕಡಿತಕ್ಕೆ ಒಳಗಾಗಿದ್ದಾರೆ. ಹೆಜ್ಜೇನು ಕಚ್ಚಿದ್ದರಿಂದ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Share.
Exit mobile version