Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ದಿನಾ ಬಳಸಿದ್ರೂ ‘ಪಾಸ್‌ವರ್ಡ್’ ಮರೆತುಹೋಗುತ್ತಾ?: ಪ್ರತಿದಿನ ಟೈಪ್ ಮಾಡಿದ್ರೂ ಮರೆವಿನ ಆಟ ಶುರುವಾಗಲು ಅಸಲಿ ಕಾರಣ ಇಲ್ಲಿದೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೇಲ್ಮನೆ 3 ಸ್ಥಾನಕ್ಕೆ 40ಕ್ಕೂ ಹೆಚ್ಚು ಹೆಸರುಗಳ ಚರ್ಚೆ: ಸಿ.ಟಿ.ರವಿ
KARNATAKA

ಮೇಲ್ಮನೆ 3 ಸ್ಥಾನಕ್ಕೆ 40ಕ್ಕೂ ಹೆಚ್ಚು ಹೆಸರುಗಳ ಚರ್ಚೆ: ಸಿ.ಟಿ.ರವಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬಿಜೆಪಿ ಸಂಖ್ಯಾಬಲದ ಆಧಾರದಲ್ಲಿ ವಿಧಾನಪರಿಷತ್ತಿಗೆ 3 ಸ್ಥಾನಗಳು ನಮಗೆ ಲಭಿಸಲಿವೆ. ಇದನ್ನು ಆಧರಿಸಿ 3 ಸ್ಥಾನಗಳಿಗೆ ಅಂತಿಮವಾಗಿ ಅಭ್ಯರ್ಥಿಗಳನ್ನು ನಿರ್ಣಯಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮಾಡುತ್ತಾರೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 40ಕ್ಕೂ ಹೆಚ್ಚು ಹೆಸರುಗಳು ಚರ್ಚೆ ಆಗಿವೆ. 3 ಸ್ಥಾನಗಳಿಗೆ 40ಕ್ಕೂ ಹೆಚ್ಚು ಹೆಸರುಗಳು ಚರ್ಚೆ ಆಗಿವೆ. ಆಕಾಂಕ್ಷಿಗಳನ್ನು ಮಾತ್ರ ನಾವು ಚರ್ಚೆಗೆ ಪರಿಗಣಿಸಿಲ್ಲ. ಆಕಾಂಕ್ಷಿಗಳಲ್ಲದವರನ್ನೂ ಚರ್ಚೆಗೆ ತೆಗೆದುಕೊಂಡಿದ್ದೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಗಿದೆ. ಪಕ್ಷದ ಹಿರಿಯ ಮುಖಂಡ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಪಕ್ಷದ ಕೋರ್ ಕಮಿಟಿ ಸದಸ್ಯರ ಸಭೆ ನಡೆಸಲಾಗಿದೆ ಎಂದು ವಿವರಿಸಿದರು.

ರಾಜ್ಯದ ವಿವಿಧ ಭಾಗಗಳ ಸುಮಾರು 40ಕ್ಕೂ ಹೆಚ್ಚು ಹೆಸರುಗಳ ಕುರಿತು ಚರ್ಚೆ ಮಾಡಲಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರಿಗೆ ಕೇಂದ್ರದ ಅಧ್ಯಕ್ಷರು ಮತ್ತು ರಾಷ್ಟ್ರೀಯ ನಾಯಕರ ಜೊತೆ ಸಮಾಲೋಚನೆ ಮಾಡಿ ಅಂತಿಮ ನಿರ್ಣಯ ಮಾಡುವ ಅಧಿಕಾರವನ್ನು ಕೋರ್ ಸಮಿತಿ ಕೊಟ್ಟಿದೆ ಎಂದು ತಿಳಿಸಿದರು.

ಅವರು ಕೇಂದ್ರದ ಜೊತೆ ಸಮಾಲೋಚನೆ ನಡೆಸಿ ಪಕ್ಷದ ಕಡೆಯಿಂದ ವಿಧಾನಪರಿಷತ್ತಿನ ಅಭ್ಯರ್ಥಿಗಳು ಯಾರೆಂದು ನಿಶ್ಚಯಿಸುತ್ತಾರೆ. ಜೊತೆಗೆ ವಿಧಾನಪರಿಷತ್ತಿಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಗೆಲುವಿನ ದೃಷ್ಟಿಯಿಂದ ಕೆಲವು ಸಲಹೆ- ಸೂಚನೆ ಕೊಟ್ಟಿದ್ದಾರೆ ಎಂದರು.

BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು

‘ಸೇನೆಗೆ ಅಗ್ನಿವೀರ ಬೇಡ, ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ’ : ರಾಹುಲ್ ಗಾಂಧಿ

Share. Facebook Twitter LinkedIn WhatsApp Email

Related Posts

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

2 Mins Read

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

1 Min Read
Recent News

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ದಿನಾ ಬಳಸಿದ್ರೂ ‘ಪಾಸ್‌ವರ್ಡ್’ ಮರೆತುಹೋಗುತ್ತಾ?: ಪ್ರತಿದಿನ ಟೈಪ್ ಮಾಡಿದ್ರೂ ಮರೆವಿನ ಆಟ ಶುರುವಾಗಲು ಅಸಲಿ ಕಾರಣ ಇಲ್ಲಿದೆ

​ಮೆದುಳಿನ ಕಾರ್ಯಕ್ಷಮತೆಯ ಮೇಲೆ ‘ಮಾನಸಿಕ ಒತ್ತಡ’ದ ಭೀಕರ ಪರಿಣಾಮ: ಹಳೇ ನೆನಪುಗಳಿಗೆ ಹೊಸ ಮಾಹಿತಿ ಲಿಂಕ್ ಮಾಡುವ ಸಾಮರ್ಥ್ಯ ಕುಂಠಿತ: ವರದಿ

State News
KARNATAKA

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕಲಬುರಗಿ: ವೈದ್ಯಕೀಯ ಶಿಕ್ಷಣದ (MBBS) ಕನಸು ಹೊತ್ತಿದ್ದ ನೀಟ್ ಆಕಾಂಕ್ಷಿ, ಯುವತಿಯೊಬ್ಬಳು ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ…

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

ಚಾಲಕನ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ: ಅಪಘಾತದ ನಂತ್ರ ಗಾಯಾಳು ಆಸ್ಪತ್ರೆಗೆ ಸೇರಿಸಿದ್ದಕ್ಕೆ ಜೈಲು ಶಿಕ್ಷೆ ಕಡಿತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.